this,s notonly for nk are siddapur- ಮನ್ಮನೆ ಗ್ರಾಮಸಮೀತಿ ನಿರ್ಣಯದ ಹಿನ್ನೆಲೆ?- ಸಮಯ ಬದಲಾವಣೆ ಗೊಂದಲ, ನಾಳೆ ವಿದ್ಯುತ್ ಕಡಿತ, ಜಿಲ್ಲೆಯಾದ್ಯಂತ ಏಕರೂಪದ ನೀತಿ-ನಿಯಮ

ರಾಜ್ಯದಾದ್ಯಂತ ಲಾಕ್ ಡೌನ್ ತೆರವು ಮಾಡಲಾಗಿದ್ದು ಸರ್ಕಾರ ಲಾಕ್ ಡೌನ್ ನೀತಿಯಲ್ಲಿ ಬದಲಾವಣೆ ಮಾಡಿದೆ. ಈ ಹಿಂದೆ ಜಿಲ್ಲಾಡಳಿತದ ಗಮನಕ್ಕೆ ತಂದು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ವಯಂಪ್ರೇರಿತ ಬಂದ್, ಲಾಕ್ ಡೌನ್ ಮಾಡಲಾಗಿತ್ತು. ಆದರೆ ಈಗ ಜಿಲ್ಲಾವ್ಯಾಪ್ತಿಯಲ್ಲಿ ಏಕರೂಪದ ನೀತಿ-ನಿಯಮ ಜಾರಿಗೆ ಸರ್ಕಾರ ಆದೇಶಿಸಿದೆ ಎನ್ನಲಾಗಿದೆ. ಈ ಹೊಸ ನಿಯಮದ ಹಿನ್ನೆಲೆಯಲ್ಲಿ ಸಿದ್ಧಾಪುರ, ಉತ್ತರಕನ್ನಡ ಜಿಲ್ಲೆ, ಸೇರಿದಂತೆ ರಾಜ್ಯದಾದ್ಯಂತ ಜಿಲ್ಲಾ ವ್ಯಾಪ್ತಿಯಲ್ಲಿ ಏಕರೂಪದ ನೀತಿ-ರೀತಿ,ನಿಯಮ ಜಾರಿಮಾಡಲಾಗುತ್ತಿದೆ.
ಈ ಕಾರಣದಿಂದ ಇಂದು ಸಿದ್ಧಾಪುರ ಸೇರಿದಂತೆ ಬಹುತೇಕ ಕಡೆ ಇದ್ದ ಅರ್ಧದಿನ ಬಂದ್, ಸ್ವಯಂ ಪ್ರೇರಿತ ಲಾಕ್ ಡೌನ್ ತೆರವು ಮಾಡಲಾಗಿದೆ.

ಸಿದ್ಧಾಪುರದಲ್ಲಿ ವಾರದ ಸಂತೆಯ ದಿವಸವಾದ ಇಂದು ದಿನಕ್ಕಿಂತ ಹೆಚ್ಚು ಜನಸಂದಣಿ ಇತ್ತು. ಮಧ್ಯಾಹ್ನ 2 ಗಂಟೆಯ ಮೊದಲು ಖರೀದಿ ಮುಗಿಸಬೇಕೆಂದು ಧಾವಂತಕ್ಕೆ ಬಿದ್ದ ಜನ ಸಾಮಾಜಿಕ ಅಂತರ ಮರೆತು ಸಂತೆಯ ಸಾಮಾನು ಖರೀದಿ ಮಾಡಿದರು. ಆದರೆ ಮಧ್ಯಾಹ್ನ ಒಂದು ಗಂಟೆಯ ನಂತರ ನಗರದಲ್ಲಿ ಸ್ವಯಂ ಪ್ರೇರಿತ ಬಂದ್ ತೆರವುಮಾಡಿ ಬೆಳಿಗ್ಗೆ 8 ರಿಂದ ರಾತ್ರಿ 8 ರ ವರೆಗೆ ವ್ಯಾಪಾರ ವಹಿವಾಟು ಮಾಡಬಹುದೆನ್ನುವ ಘೋಶಣೆ ಮಾಡಲಾಯಿತು. 2 ಗಂಟೆಯ ನಂತರ ಸ್ವಯಂ ಪ್ರೇರಿತ ಬಂದ್ ಎನ್ನುವ ಮನೋಸ್ಥಿತಿಯಲ್ಲಿದ್ದ ಜನರು ಈ ಘೋಷಣೆ ನಡುವೆ ಮನೆಯತ್ತ ಪಾದ ಬೆಳೆಸಿದರು.

ವ್ಯಾಪಾರಿಗಳು ಈ ಸ್ವಯಂಪ್ರೇರಿತ ಬಂದ್ ತೆರವಿನಿಂದ ವ್ಯಾಪಾರ ಮಾಡುವ ಮನಸ್ಥಿತಿಯಲ್ಲಿದ್ದರೂ ಜನರಿಲ್ಲದ ಸಂತೆಯಿಂದಾಗಿ ವ್ಯಾಪಾರ ಮಾಡಲಾಗಲಿಲ್ಲ. ಜಿಲ್ಲಾಡಳಿತ ದಿಢೀರನೇ ಈ ಪ್ರಕಟಣೆ ಮಾಡಿ ಘೋಶಿಸಿದ್ದರಿಂದ ಜನರಿಗೆ ಗೊಂದಲ ಉಂಟಾಯಿತು ಎನ್ನುವ ಅಭಿಪ್ರಾಯ ಕೇಳಿ ಬಂತು. ಜಿಲ್ಲೆಯ ಇತರ ತಾಲೂಕುಗಳಲ್ಲೂ ಇಂಥದ್ದೇ ಗೊಂದಲ ಆಗಿರುವ ಸುದ್ದಿಯಿದೆ.
ನಾಳೆ ವಿದ್ಯುತ್ ವ್ಯತ್ಯಯ-
ಕಳೆದ10 ದಿವಸಗಳಿಂದ ಅರ್ಧ ದಿನ ಬಂದ್ ಮಾಡಿದ್ದ ಸಿದ್ಧಾಪುರದ ಜನತೆಗೆ ಜುಲೈ 23 ರ ಗುರುವಾರ ಮತ್ತೆ ಸ್ವಯಂ ಪ್ರೇರಿತ ಬಂದ್ ಅನುಭವ ನೀಡಲಿದೆ. ಸ್ಥಳಿಯ ಹೆಸ್ಕಾಂ ಉಪವಿಭಾಗೀಯ ಕಛೇರಿ ನಾಳೆಯ ಗುರುವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 5 ರ ವರೆಗೆ ವಿರ್ವಹಣೆ, ದುರಸ್ತಿ ಹಿನ್ನೆಲೆಯಲ್ಲಿ ವಿದ್ಯುತ್ ನಿಲುಗಡೆ ಮಾಡುತ್ತಿದೆ. ಸರ್ಕಾರಿ ರಜಾ ದಿನಗಳಲ್ಲಿ, ವಿದ್ಯುತ್ ವ್ಯತ್ಯಯದ
ದಿನ ಸಿದ್ಧಾಪುರ ಸ್ವಯಂ ಪ್ರೇರಿತ ಬಂದ್ ಸ್ಥಿತಿಯಲ್ಲಿರುವುದು ಇಲ್ಲಿಯ ವಾಸ್ತವ.

ಏಕರೂಪ ನೀತಿ-ನಿಯಮ- ಕರೋನಾ ಕಾರಣದಿಂದ ತಾಲೂಕಿಗೊಂದು ಜಿಲ್ಲೆಗೊಂದು ನಿಯಮಗಳಿಂದಾಗಿ ರಾಜ್ಯದಲ್ಲಿ ಅವ್ಯವಸ್ಥೆ ತಾಂಡವಾಡುವಂತಾಗಿದೆ. ಕರೋನಾ ಜಾಗೃತಿ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶ, ನಗರ, ತಾಲೂಕು, ಜಿಲ್ಲಾಸ್ಥಳಗಳ ಭೇದವಿಲ್ಲದೆ ನಾನಾ ಕಡೆ ವಿಭಿನ್ನ ನಿಯಮ ರೀತಿ- ನೀತಿ ಅನುಸರಿಸಲಾಗುತ್ತಿದೆ. ಇಂಥ ತಲಾಗೊಂದು ತೀರ್ಮಾನ, ನಿರ್ಧಾರಗಳಿಂದಾಗಿ ಗೊಂದಲ ಉಂಟಾಗುತಿದ್ದು ಇಂಥ ಗೊಂದಲ ನಿವಾರಿಸಲು ರಾಜ್ಯದಲ್ಲಿ ಸರ್ಕಾರ ಏಕರೂಪದ ನೀತಿ- ನಿಯಮಗಳಿಗೆ ಸೂಚಿಸಿದೆ.

ಸಿದ್ಧಾಪುರದ ಮನ್ಮನೆಯ ಗ್ರಾಮ ಸಮೀತಿ ಕಟ್ಟುಪಾಡು, ನೀತಿಸಂಹಿತೆ ಹಿನ್ನೆಲೆಯಲ್ಲಿ ಕರೋನಾಕ್ಕೆ ಸಂಬಂಧಿಸಿದಂತೆ ತೋಚಿದಂತೆ ಮಾಡಲು ಅವಕಾಶವಿಲ್ಲ. ಜಿಲ್ಲೆಯಲ್ಲಿ ಜಿಲ್ಲಾಡಳಿತದ ನಿಯಮಗಳು ಅನ್ವಯಿಸುತ್ತವೆ. ಜಿಲ್ಲಾಡಳಿತದ ನೀತಿ-ನಿರೂಪಣೆಗೆ ವ್ಯತಿರಿಕ್ತವಾಗಿ
ಸ್ಥಳಿಯ ನೀತಿ-ನಿಯಮ ರೂಪಿಸುವಂತಿಲ್ಲ ಎಂದು ಮಂಗಳವಾರ ಶಿರಸಿ ಉಪವಿಭಾಗಾಧಿಕಾರಿ ಸಿದ್ಧಾಪುರದಲ್ಲಿ ಸೂಚ್ಯವಾಗಿ ಹೇಳಿದ್ದರು. ಇಂದು ಈ ಬಗ್ಗೆಸರ್ಕಾರ ಮತ್ತು ಜಿಲ್ಲಾಡಳಿತದ ಅಧೀಕೃತ ಪ್ರಕಟಣೆ ಹೊರಬಿದ್ದಿದೆ ಎನ್ನಲಾಗುತ್ತಿದೆ. ಜಿಲ್ಲಾಡಳಿತಕ್ಕೆ ಪರ್ಯಾಯವಾಗಿ ಸ್ಥಳೀಯ ಸಂಘಟನೆಗಳು ತೀರ್ಮಾನಿಸುತಿದ್ದ ರೀತಿ- ನೀತಿಗಳಿಗೆ ಈ ಹೊಸ ಆದೇಶದಿಂದ ಹಿನ್ನಡೆಯಾಗಲಿದೆ ಎನ್ನಲಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *