ಬೇಕಿದ್ದರೆ ಇಟ್ಟುಕೊಳ್ಳಿ, ಇಲ್ಲದಿದ್ದರೆ ಬಿಟ್ಟು ಬಿಡಿ: ಶಾಸಕರ ತಂತ್ರಗಳಿಗೆ ಕೇರ್ ಮಾಡದ ಸಿಎಂ!

ಸಚಿವ ಸ್ಥಾನಕ್ಕೆ ಅರ್ಹರಾದ ನಮಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆ ನೀಡಿದ್ದಾರೆ ಎಂದು ಕೆಲವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಜೊತೆಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆಯನ್ನು ತಿರಸ್ಕರಿಸಿದ್ದಾರೆ.

yediyurappa

ಬೆಂಗಳೂರು: ವಿವಿಧಿ ನಿಗಮ-ಮಂಡಳಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ 20 ಶಾಸಕರನ್ನು ನೇಮಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ,  ಸಚಿವ ಸ್ಥಾನಕ್ಕೆ ಅರ್ಹರಾದ ನಮಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆ ನೀಡಿದ್ದಾರೆ ಎಂದು ಕೆಲವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಜೊತೆಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆಯನ್ನು ತಿರಸ್ಕರಿಸಿದ್ದಾರೆ.

ಆದರೆ ಶಾಸಕರ ಹುದ್ದೆ ತಿರಸ್ಕರಿಸುವ ಈ ತಂತ್ರಕ್ಕೆ ಸಿಎಂ ಯಡಿಯೂರಪ್ಪ ಡೋಂಟ್ ಕೇರ್ ಎಂದಿದ್ದಾರೆ, ಬೇಕಿದ್ದರೆ ಇಟ್ಟುಕೊಳ್ಳಿ ಅಥವಾ ಬಿಟ್ಟುಬಿಡಿ ಎನ್ನುವ ಮೂಲಕ ಶಾಕ್ ನೀಡಿದ್ದಾರೆ. ಹೀಗಾಗಿ ಕೆಲವು ಶಾಸಕರು ಬೇರೆ ದಾರಿಯಿಲ್ಲದೆ ಸ್ವಯಂ ಪ್ರೇರಿತರಾಗಿ ಅಧಿಕಾರ ವಹಿಸಿಕೊಳ್ಳಲು ಮುಂದಾಗಿದ್ದರು.

ಸಿಎಂ ಯಡಿಯೂರಪ್ಪ ನಮಗೆ ಕರೆ ಮಾಡಿ ಸಮಾಧಾನ ಮಾಡುತ್ತಾರೆ ಎಂದು ಕೆಲವರು ಭಾವಿಸಿದ್ದರು, ಆದರೆ ಸದ್ಯ ಅದ್ಯಾವುದೂ ಆಗಿಲ್ಲ, ಇನ್ನು ಕೆಲವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಅಸಮಾಧಾನ ಹೊರ ಹಾಕಿದ್ದರು ಎನ್ನಲಾಗಿದೆ. ಆದರೆ ಕಟೀಲ್ ಕೂಡ ಸೊಪ್ಪು ಹಾಕದ ಕಾರಣ ಶಾಸಕರು ಸದ್ದಿಲ್ಲದೇ ಹುದ್ದೆ ಸ್ವೀಕರಿಸುತ್ತಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಮಕಾಲೀನ ರಾಜಕಾರಣದ ಒಡನಾಡಿಯಾಗಿ ಆರಗ ಬೆಳೆದವರು. ಸಂಘ ಪರಿವಾರದೊಂದಿಗೆ ನಿಕಟ ಬಾಂಧವ್ಯ ಇಟ್ಟುಕೊಂಡು ಪಕ್ಷದ ಶಿಸ್ತಿನ ಸಿಪಾಯಿಯಾಗಿ ರಾಜಕಾರಣದ ಏಳುಬೀಳುಗಳ ನಡುವೆ ಸಜ್ಜನಿಕೆ ರಾಜಕಾರಣ ಮೈಗೂಡಿಸಿಕೊಂಡವರು ಅರಗ ಜ್ಞಾನೇಂದ್ರ. ಅವರನ್ನು ಗೃಹ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಾಯಕತ್ವ ಸೀಮಿತಗೊಳಿಸಿತೇ ಎಂಬ ಸಂದೇಹ ಕ್ಷೇತ್ರದಲ್ಲಿಈಗ ಚಿಗುರೊಡೆದಿದೆ. 

ನನ್ನ ಹಿರಿತನಕ್ಕೆ ಸಚಿವ ಸಚಿವ ಸ್ಥಾನದ ನಿರೀಕ್ಷೆ ಈಗಲೂ ಇದೆ. ನನ್ನ ಹಕ್ಕೊತ್ತಾಯ ಮುಂದುವರಿಸುತ್ತೇನೆ. ನನ್ನ ದುರಾದೃಷ್ಟ ಪಕ್ಷ ಅಧಿಕಾರ ಬಂದಾಗೆಲ್ಲಾ ಬಹುಮತ ಸಿಕ್ಕಿಲ್ಲ. ನನಗೆ ಸಚಿವ ಸ್ಥಾನ ಕೊಡಬೇಕು ಎಂಬ ಇರಾದೆ ಸಿಎಂಗೆ ಇದ್ದರೂ ರಾಜಕೀಯ ಸನ್ನಿವೇಶಗಳಿಂದ ಸಾಧ್ಯವಾಗದೆ ಇರಬಹುದು. ಅವರಿಗೆ ಇರಿಸು ಮುರಿಸು ಮಾಡಲ್ಲ. ಸಿಕ್ಕ ಅಧಿಕಾರ ಸ್ವೀಕರಿಸಿ ಒಳ್ಳೆಯ ಕೆಲಸ ಮಾಡುತ್ತೇನೆ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಇನ್ನೂ ಲಿಂಗಾಯತ ಸಮುದಾಯದ ಕಳಕಪ್ಪ ಬಂಡಿ ಉತ್ತರ ಕರ್ನಾಟಕದ ಪ್ರಭಾವಿ ನಾಯಕನಾಗಿದ್ದು, ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಅವರಿಗೆ ಕೆಎಸ್ ಎಸ್ ಐಡಿಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.  ಆಗಸ್ಟ್ ಮೊದಲ ವಾರದಲ್ಲಿ ಅಧಿಕಾರ ಸ್ವೀಕರಿಸುತ್ತೇನೆ, ಬೆಂಗಳೂರಿಗೆ ಹೋದಾಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಅಸಮಾಧಾನ ವ್ಯಕ್ತ ಪಡಿಸಿದ್ದ ಕೆಲವು ಶಾಸಕರು ಯಡಿಯೂರಪ್ಪ ಆಪ್ತರು ಮತ್ತು ಸಿಎಂ ಪುತ್ರರ ಜೊತೆ ಸಮಾಲೋಚಿಸಿ ಹುದ್ದೆ ಸ್ವೀಕರಿಸಲು ಮುಂದಾಗಿದ್ದಾರೆ. ಒಂದು ವೇಳೆ ಅಸಮಾಧಾನಿತ ಶಾಸಕರು ಗುಂಪು ಕಟ್ಟಿಕೊಂಡು ಬಂಡಾಯ ಸಾರಿದರೆ ಏನೂ ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿದ್ದಾರೆ, ಏಕೆಂದರೆ ಬಿಜೆಪಿ ಸರ್ಕಾರ ಯಾವ ರೀತಿಯಲ್ಲಿ ಅಧಿಕಾರಕ್ಕೆ ಬಂದಿದೆ ಎಂಬುದು ಎಲ್ಲರಿಗೂ ತಿಳಿದಿದೆ. 

ಸಚಿವ ಸ್ಥಾನ ಸಿಗದಿದ್ದರೆ ಕಡೇ ಪಕ್ಷ ಬೇರೆ ಹುದ್ದೆ ನೀಡುವಂತೆ ಕೆಲವು ಶಾಸಕರು ಮನವಿ ಮಾಡಿದ್ದರು ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಒಪ್ಪಿದರೆ ಮುಂದಿನ ಸುತ್ತಿನಲ್ಲಿ ಪಕ್ಷದ ಕಾರ್ಯಕರ್ತರನ್ನು ನಿಗಮ-ಮಂಡಳಿಗೆ ನೇಮಕ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *