pete mandi hallige bandru-corona-effect-ಪಟ್ಟಣವೋ, ಹಳ್ಳಿಯೋ ಉತ್ತರ ಸಿಗದ ಬದುಕು.

ಅದೆಷ್ಟೋ ಹಳ್ಳಿ ಯುವಕ, ಯುವತಿಯರು ತಮ್ಮ ವಿದ್ಯಾಭ್ಯಾಸವನ್ನು ಮುಗಿಸಿ ಜೀವನದಲ್ಲಿ ಹಲವಾರು ಕನಸುಗಳು ಹಾಗೂ ಮನೆಯ ಜವಾಬ್ದಾರಿಗಳನ್ನು ಹೊತ್ತು ಕೆಲಸವನ್ನು ಅರಸಿ ಬೆಂಗಳೂರಿನತ್ತ ಮುಖ ಮಾಡಿದ್ದರು. ತಮ್ಮ ತಮ್ಮ ಕೌಶಲ್ಯಗಳಿಗನುಸಾರವಾಗಿ ಕೆಲಸವನ್ನು ಪಡೆದುಕೊಂಡಿದ್ದರು. ಕಷ್ಟಪಟ್ಟು  ರಾತ್ರಿ ಹಗಲು ದುಡಿದು ಸಂಬಳವನ್ನು ತಿಂಗಳ ಕೊನೆಯಲ್ಲಿ ಕಾದು ಅದನ್ನು ಪಡೆದು ಮನೆಯ ಖರ್ಚುಗಳನ್ನು ಹಾಗೂ ತಮ್ಮ ಖರ್ಚುಗಳನ್ನು ನಿಭಾಯಿಸುತ್ತಿದ್ದರು.        ಕೆಲವರಿಗೆ ಒಬ್ಬ ವ್ಯಕ್ತಿ ಬೆಂಗಳೂರಿನಲ್ಲಿ ಇದ್ದಾನೆ ಎಂದರೆ ಸಾಕು ಅವನೇನು ಅರಾಮಿದ್ದಾನೆ ಒಳ್ಳೆಯ  ಕೆಲಸ, ಒಳ್ಳೆಯ ಸಂಬಳ ಅಂತೆಲ್ಲ ಅಂದುಕೊಳ್ಳುತ್ತಾರೆ. ಆದರೆ ಅವನು ಎಲ್ಲಾ ಜಂಜಾಟಗಳ ಮಧ್ಯೆ ರಾತ್ರಿ ಹಗಲು ಪಡುವ ಕಷ್ಟ ಅವನಿಗೆ ಮಾತ್ರ ಗೊತ್ತಿರತ್ತೆ, ನೋಡೋಕೆ ಚೆನ್ನಾಗಿ ಕಾಣುತ್ತಿರಬಹುದು ಅಷ್ಟೇ. ಕೆಲವರು ಅವನಿಗೆ ಇರುವ ಸಂಬಳದ ಇಮ್ಮಡಿ ಸಂಬಳ ಇದೆ ಎಂದುಕೊಂಡಿರುತ್ತಾರೆ. ಜನರ ಯೋಚನೆಗೆ ತಡೆ ಎಲ್ಲಿರತ್ತೆಸುಮ್ಮನೆ ಉಪಮೇಯ ಅಲಂಕಾರಗಳನ್ನು ಹಚ್ಚಿ ಹೊಗಳುತ್ತಾರೆ . ಬರುವ ಸಂಬಳದಲ್ಲಿ ಇರುವ ಖರ್ಚುಗಳನ್ನು ಕಳೆದು ಸೌಲ್ಪ ಹಣವನ್ನು ತಮ್ಮ ಮುಂದಿನ ಭವಿಷ್ಯಕ್ಕೆ ಉಳಿಸಿಕೊಳ್ಳುವುದು  ಅವರ ತಲೆಯಲ್ಲಿ ಸದಾ ಇರುತ್ತದೆ. ಇವೆಲ್ಲದರ ಮಧ್ಯೆ ಹೇಗೋ ಸಮಾಧಾನದ ನಿಟ್ಟುಸಿರು ಬಿಡುತ್ತಿದ್ದರು. ಆದರೆ ಕೆಲ ತಿಂಗಳುಗಳಿಂದ ಹರಡುತ್ತಿರುವ ಮಾರಕ ಕೊರೊನಾ ರೋಗದಿಂದ  ಹಲವಾರು ಕುಟುಂಬಗಳ, ಯುವಕರ, ಯುವತಿಯರ ಬದುಕು ಅತೀ ಕ್ಲಿಷ್ಟಕರವಾಗಿದೆ. ಹೇಗೋ ತಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಳ್ಳುತಿದ್ದವರ ಸ್ಥಿತಿ ಕೆಲಸವಿಲ್ಲದೇ ಪರದಾಡುವಂತಾಗಿದೆ. ಅವರು ಕೆಲಸ ಮಾಡುತ್ತಿದ್ದ ಹಲವಾರು ಖಾಸಗಿ ಕಂಪನಿಗಳು ಈ ಕೊರೊನ ರೋಗದ ಪರಿಣಾಮದಿಂದ ಮುಚ್ಚಿರುವ ಕಾರಣ ಹೆಚ್ಚಿನ ನಿರುದ್ಯೋಗ ಉಂಟಾಗಿದೆ. ಎಲ್ಲರೂ ದಾರಿ ತೋಚದೆ ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಊರಿನತ್ತ ಪ್ರಯಾಣ ಬೆಳೆಸಿದ್ದಾರೆ. ಮೊದಲೆಲ್ಲ ಬೆಂಗಳೂರಿನಿಂದ ಊರಿಗೆ ಬಂದವರನ್ನು ಚೆನ್ನಾಗಿ ಮಾತನಾಡಿಸಿ ಸ್ವಾಗತಿಸುತ್ತಿದ್ದ ಜನ ಇವಾಗ ಅಲ್ಲಿಂದ ಯಾಕಾದರೂ ಬರುತ್ತಾರೋ ಅನ್ನೋ ಮಟ್ಟಿಗೆ ಬಂದು ತಲುಪಿದೆ.

ಅನಿವಾರ್ಯದ ಸ್ಥಿತಿ ಕೆಲಸವು ಇಲ್ಲದೆ ಯಾವುದೇ ಆದಾಯವಿಲ್ಲದೆ ಬೆಂಗಳೂರಿನಲ್ಲಿ ಅಥವಾ ಯಾವುದೇ ಪಟ್ಟಣದಲ್ಲಿ ಇರಲು ಸಾಧ್ಯವೇ, ಮನೆ ಬಾಡಿಗೆ ಕಟ್ಟಲು ಸಾಧ್ಯವಾಗದೆ ಊರಿನ ಕಡೆ ಬಂದಿರುತ್ತಾರೆಯೇ ಹೊರತು ಈ ಕೊರೊನ ಸೋಂಕನ್ನು ಹಳ್ಳಿಗಳಿಗೆ ಅಲ್ಲಿರುವ ಜನರಿಗೆ ಹರಡಬೇಕೆಂಬ ಉದ್ದೇಶ ಅವರದಾಗಿರುವುದಿಲ್ಲ. ಇಷ್ಟಾದರೂ ಅವರಿಗೆ ನಮ್ಮ ಮುಂದಿನ ಭವಿಷ್ಯವೇನು, ನನ್ನ ಜೀವನ ಹೇಗೆ ಎಂಬ ಚಿಂತೆ ಕಾಡುತ್ತದೆ. ಮೊದಲಿನಿಂದ ಊರಿನಲ್ಲಿದ್ದ ಯುವಕರು ಸಣ್ಣ ಪುಟ್ಟ ಕೆಲಸ ಮಾಡುತ್ತಿರುತ್ತಾರೆ. ಆದರೆ ಇವರು ಊರಿನಲ್ಲಿ ಏನು ಮಾಡುವುದೆಂದು ತೋಚದೆ ಅದರ ಬಗ್ಗೆಯೇ ಆಲೋಚಿಸುತ್ತಿರುತ್ತಾರೆ. ಗಾರೆ ಕೆಲಸ ಹಾಗೂ ಇನ್ನಿತರ ಕೆಲ್ಸಕ್ಕೆ ಕೆಲವರು ಹೋಗುತ್ತಿದ್ದಾರೆ, ಈ ಕೆಲಸ ಮಾಡಲು ಇಷ್ಟೆಲ್ಲ ಓದಿ ಪಟ್ಟಣಕ್ಕೆ ಹೋಗಿ ಬರಬೇಕಿತ್ತ ಎಂದು ಅಣುಕಿಸುವ ಕೆಲವು ಜನರು. ಇದೆಲ್ಲ ಬಿಟ್ಟು ಏನಾದರು ವ್ಯಾಪಾರ ಮಾಡೋಣ ಎಂದುಕೊಂಡರೆ ಈಗಾಗಲೇ ಎಲ್ಲಾ ಕ್ಷೇತ್ರದ ವ್ಯಾಪಾರಗಳು ಸ್ಪರ್ಧಾತ್ಮಕವಾಗಿವೆ. ಅವರೆಲ್ಲರಿಗಿಂತ ದೊಡ್ಡದಾಗಿ ವ್ಯಾಪಾರ ಮಾಡಲು ಬಂಡವಾಳದ ಕೊರತೆ ಎದುರಾಗುತ್ತದೆ. ಈ ಮಹಾಮಾರಿಯಿಂದ ಹಲವಾರು ಕುಟುಂಬಗಳು ಬೀದಿಗೆ ಬರುವ ಸ್ಥಿತಿಗೆ ಬಂದು ತಲುಪಿವೆ. ಬಹುಬೇಗ ಈ ಸೋಂಕು ನಮ್ಮ ರಾಜ್ಯದಿಂದ, ದೇಶದಿಂದ, ಪ್ರಪಂಚದಿಂದ ದೂರವಾಗಿ ಎಲ್ಲವೂ ಮೊದಲಿನಂತೆ ಸಹಜ ಸ್ಥಿತಿಗೆ ತಲುಪುವಂತಾಗಲಿ. ಇದಕ್ಕೆ ಎಲ್ಲರ ಸಹಕಾರ ಬಹುಮುಖ್ಯವಾಗಿರುತ್ತದೆ. ಸರ್ಕಾರದ ಆದೇಶಗಳನ್ನು ಪಾಲಿಸಿ ಈ ಸೋಂಕನ್ನು ಓಡಿಸಲು ಎಲ್ಲರೂ ಹೋರಾಡಬೇಕಾಗಿದೆ. 

✍✍ ಗೋಪಾಲ್ ನಾಯ್ಕ್ ಮನಮನೆ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *