ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣ, ಚಿಕ್ಕಬಳ್ಳಾಪುರಕ್ಕೆ ಪ್ರಥಮ ಸ್ಥಾನ

ಶಿರಸಿಯ ಸನ್ನಿಧಿ 625, ಸಿದ್ಧಾಪುರದ ಅನಿರುದ್ಧ 624 ಅಂಕಗಳನ್ನು ಗಳಿಸಿ ರಾಜ್ಯದ ಮೊದಲ,ಎರಡನೇ ರ್ಯಾಂಕ್ ಗಳಿಸಿದವರಲ್ಲಿ ಸೇರಿದ್ದಾರೆ.ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Government schools perform better in Karnataka SSLC results 2018

ಬೆಂಗಳೂರು: ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ರಾಜ್ಯಾದ್ಯಂತ 8, 48, 203 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 19, 086 ವಿದ್ಯಾರ್ಥಿಗಳ ಕೊರತೆಯುಂಟಾಗಿತ್ತು. ರಾಜ್ಯಾದ್ಯಂತ 34 ಶೈಕ್ಷಣಿಕ ಜಿಲ್ಲೆಗಳ 22 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿತ್ತು ಎಂದು ಹೇಳಿದರು. ಕೊರೊನಾ ಸೋಂಕಿನ ಭೀತಿಯಿಂದ 18,067 ವಿದ್ಯಾರ್ಥಿಗಳು ಮೊದಲು ಪರೀಕ್ಷೆ ಬರೆಯದೆ, ಪೂರಕ ಪರೀಕ್ಷೆಗೆ ಹಾಜರಾಗಿದ್ದರು. 227 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಿತು. 52,219 ಮೌಲ್ಯಮಾಪಕರು ಉತ್ತರಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವರ್ಷ ಶೇ.71.80 ಮಂದಿ ಅಂದರೆ 5, 82, 314 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷ 73.70 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ದ್ವಿತೀಯ ಮಧುಗಿರಿ ತೃತೀಯ, ಮಂಡ್ಯ ಜಿಲ್ಲೆಗೆ ನಾಲ್ಕನೇ ಸ್ಥಾನ ಲಭಿಸಿದೆ. ಯಾದಗಿರಿ ಕೊನೆಯ ಸ್ಥಾನ ಲಭಿಸಿದೆ. 2, 28, 734 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.

ಈ ಪೈಕಿ ಸರ್ಕಾರಿ ಶಾಲೆಗಳ ಶೇ.72.79 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅನುದಾನಿತ ಶಾಲೆಗಳ ಶೇ. 70.60 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನುದಾನ ರಹಿತ ಶಾಲೆಗಳ ಶೇ.83.12ಮಂದಿ ವಿದ್ಯಾರ್ಥಿಗಲು ಉತ್ತೀರ್ಣರಾಗಿದ್ದಾರೆ.

ಪ್ರತೀ ಬಾರಿಯಂತೆಯೂ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ ಸಾಧಿಸಿದ್ದಾರೆ. ಈ  ಬಾರಿ ಶೇ.66.41 ಬಾಲಕರು ಉತ್ತೀರ್ಣರಾಗಿದ್ದು, ಶೇ.77.74ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ.  6 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದು,  ಕಳೆದ ಬಾರಿ ಇಬ್ಬರು ಮಾತ್ರ ಈ ಸಾಧನೆ ಗೈದಿದ್ದರು.

ಅಂತೆಯೇ ಈ ಬಾರಿ 11 ಮಂದಿ 625ಕ್ಕೆ 624 ಅಂಕಗಳನ್ನು ಪಡೆದಿದ್ದು, ಕಳೆದ ಬಾರಿ 11 ಇಷ್ಚು ಅಂಕಗಳಿಸಿದ್ದರು. 

ಇನ್ನು ನಗರ ಪ್ರದೇಶದಲ್ಲಿ ಶೇ.73.41 ರಷ್ಟು ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ಶೇ.77.18 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂತೆಯೇ ಕನ್ನಡ ಮಾಧ್ಯಮದ ಶೇ. 70.49 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು. ಆಂಗ್ಲ ಮಾಧ್ಯಮದ ಶೇ.84.98 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಎಸ್ಎಂಎಸ್‌ ಮೂಲಕ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ, ಮಂಗಳವಾರ ಬೆಳಿಗ್ಗೆ ಆಯಾ ಶಾಲೆಗಳಲ್ಲಿ ಫಲಿತಾಂಶ ನೋಡಬಹುದು. 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *