cm yadiyurappa on id-ರಾಮರಾಜ್ಯ ಪರಿಕಲ್ಪನೆಯನ್ನು ಸಾಕಾರಗೊಳಿಸಿ, ಅನ್ನದಾತನ ರಕ್ಷಿಸುವುದೇ ಸರ್ಕಾರದ ಪ್ರಥಮ ಆದ್ಯತೆ: ಯಡಿಯೂರಪ್ಪ

ನೇಗಿಲ ಯೋಗಿ ಅನ್ನದಾತನ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, 2020-21 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14 .50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹಾಕಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

Yediyurappa

ಬೆಂಗಳೂರು: ನೇಗಿಲ ಯೋಗಿ ಅನ್ನದಾತನ ಹಿತರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, 2020-21 ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14 .50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲ ನೀಡುವ ಗುರಿಯನ್ನು ಹಾಕಿಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಮಾಣೆಕ್ ಷಾ ಪರೇಡ್ ನಲ್ಲಿ ಜರುಗಿದ 74 ನೇ ಸ್ವಾತಂತ್ರ್ಯ ದಿನಾಚಾರಣೆಯ ಶುಭ ಸಂದರ್ಭದಲ್ಲಿ ದ್ವಜಾರೋಹಣ ಮಾಡಿ ಅವರು ಮಾತನಾಡಿದರು. ಕೃಷಿ ಆರ್ಥಿಕತೆಯ ಬೆನ್ನೆಲುಬಾಗಿರುವ ಸಹಕಾರ ವಲಯದಲ್ಲಿ ಸರ್ಕಾರ ಮಹತ್ತರ ಬದಲಾವಣೆಗಳನ್ನು ತಂದಿದೆ. ರೈತರು ತಾವು ಬೆಳೆದ ಬೆಳೆಗಳನ್ನು ತಮ್ಮ ಇಚ್ಚೆಯಂತೆ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನೀತಿಯಲ್ಲಿ ಮಾರ್ಪಾಡು ತರಲಾಗಿದೆ ಎಂದರು.

ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ‘ಕಲ್ಯಾಣ ರಾಜ್ಯ’ವನ್ನು ಕಟ್ಟುವುದೇ ನಮ್ಮ ಗುರಿ.ಕೋವಿಡ್-19 ಎಂಬ ಮಹಾ ಪಿಡುಗಿನ ವಿರುದ್ಧ ದ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿ ರಾಜ ಧರ್ಮ ಪಾಲನೆಗೆ ನಾವು ಮುಂದಾಗಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. 
ಜನ ಸೇವೆಯೇ ಜನಾರ್ಧನ ಸೇವೆ, ಜನಹಿತ ವನ್ನು ಮನದಲ್ಲಿರಿಸಿ ಜನಪರ ತೀರ್ಮಾನಗಳನ್ನು ತೆಗೆದುಕೊಂಡಿ ದ್ದೇವೆ.ಈ ಎಲ್ಲಾ ತೀರ್ಮಾನಗಳಿಗೂ ನನ್ನ ರಾಜ್ಯದ ಜನರು ಸಂಪೂರ್ಣ ಬೆಂಬಲ ನೀಡಿ ಸಹಕರಿಸಿದ್ದೀರಿ.ಅದಕ್ಕಾಗಿ ನಾನು ತಮಗೆ ಅಭಾರಿಯಾಗಿದ್ದೇನೆ ಎಂದರು.

ಕೋವಿಡ್-19 ಎಂಬುದು ಜಾಗತಿಕ ಪಿಡುಗಾಗಿದ್ದು ಎಲ್ಲಾ ಕ್ಷೇತ್ರಗಳನ್ನು ಬಾಧಿಸಿದೆ.ಲಾಕ್‍ಡೌನ್ ಕಾಲದಲ್ಲಿ ಮಂದಗತಿಯ ಜನ ಜೀವನ ಇಂದು ಚೇತರಿಸಿ ಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಬಾಧಿತನಾಗಿ ಇದೀಗ ವೈದ್ಯಕೀಯ ಶುಶ್ರೂಷೆಯಿಂದ ಗುಣಮುಖ ನಾಗಿರುತ್ತೇನೆ.ಜನರು ಸೋಂಕಿನ ಬಗ್ಗೆ ಆತಂಕ, ಭಯಭೀತರಾಗುವ ಅಗತ್ಯವಿಲ್ಲ.ಜಾಗರೂಕತೆಯಿಂದ ಜೀವನ ನಡೆಸಬೇಕು ಎಂದು ಅವರು ಕರೆ ನೀಡಿದರು.

ನೇಗಿಲಯೋಗಿ ಅನ್ನದಾತನ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆ. ರೈತರಿಗೆ ಕಿಸಾನ್ ಸಮ್ಮಾನ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುವುದು. 10 ಲಕ್ಷ ರೈತರಿಗೆ 6,500 ಕೋಟಿ ರೂ. ಬೆಳೆ ಸಾಲ ನೀಡಲಾಗಿದೆ. 2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲ ಅರ್ಹ ರೈತರಿಗೆ ಸಾಲ ನೀಡಲಾಗುವುದು. 5.82 ಲಕ್ಷ ರೈತರಿಗೆ ಸರ್ಕಾರದಿಂದ ನೆರವು ನೀಡಲಾಗುವುದು. ಕೊರೋನಾದಿಂದ ಮೃತಪಟ್ಟಿರುವವರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಶಿವಮೊಗ್ಗ, ಕಾರವಾರ ಮತ್ತು ವಿಜಯಪುರದಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಂಚಾರದಟ್ಟಣೆಯನ್ನು ನಿವಾರಿಸಲು ಸಬ್ ಸರ್ಬನ್ ರೈಲ್ವೆ ಯೋಜನೆಗೆ ವೇಗ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ಯೋಜನೆ 2ನೇ ಹಂತಕ್ಕೆ 30,695 ಕೋಟಿ ರೂ. ಮೀಸಲಿಡಲಾಗಿದೆ. 2024ರ ಜೂನ್ ವೇಳೆಗೆ 2ನೇ ಹಂತದ ಮೆಟ್ರೋ ರೈಲು ಯೋಜನೆ ಪೂರ್ಣಗೊಳ್ಳಲಿದೆ. ಸರ್ಕಾರದ ಎಲ್ಲ ಪ್ರಯತ್ನಗಳಿಗೆ ಪ್ರಧಾನಿ ಮೋದಿ ಅವರ ಸಹಕಾರವಿದೆ
ಎಂದು ಸಿಎಂ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *