news & photo,s of the week-ಈ ವಾರದ ಚಿತ್ರ-ವರದಿಗಳು

ಸಿದ್ಧಾಪುರ ತಾಲೂಕಾ ಬ್ಲಾಕ್ ಕಾಂಗ್ರೆಸ್ ನ ತಾತ್ಕಾಲಿಕ ಕಚೇರಿ ಹಳೆ ಆಸ್ಫತ್ರೆ ರಸ್ತೆಯಲ್ಲಿ ಪ್ರಾರಂಭವಾಗಿದೆ.

ಬೆಳೆ ಸಮಿಕ್ಷೆ ನೂತನ ಯೋಜನೆ

2020-21 ನೇ ಸಾಲಿನಲ್ಲಿ ರೈತರ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿ ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೋಬೈಲ್ ಆಪ್ ಮೂಲಕ ಸ್ವಯಂ ದಾಖಲಿಸುವ ವಿನೂತನ ಯೋಜನೆ ಪ್ರಾರಂಭಿಸಲಾಗಿದೆ. ಕಂದಾಯ,ಕೃಷಿ ತೋಟಗಾರಿಕೆ,ರೇಷ್ಮೆ ಹಾಗೂ ಸಾಂಖಿಕ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದ್ದು ಸಂಗ್ರಹವಾದ ಬೆಳೆಗಳ ಮಾಹಿತಿ ತಾಲೂಕು ಆಡಳಿತ ಪರಿಶೀಲಿಸಲಿದೆ

ದಾಖಲಿಸುವ ವಿದಾನ :- ರೈತರು ಸ್ಮಾರ್ಟ್ ಪೋನ್ ಬಳಸಿ ಬೆಳೆ ಸಮೀಕ್ಷೆ ಮೋಬೈಲ್ ಆಪ್ ಗೂಗಲ್ ಪ್ಲೇ ಸ್ಟೋರ್ ದಿಂದ ಡೌನಲೋಡ್ ಮಾಡಿಕೊಳ್ಳಬೇಕು ಅಥವಾ ಅವರ ಕುಟುಂಬದ ಸದಸ್ಯರು ಮೋಬೈಲ್ ಮಾಹಿತಿ ಹೊಂದಿದ ಕಂದಾಯ ಮತ್ತು ಕೃಷಿ ಇಲಾಖೆಯಿಂದ ನಿಯೋಜನೆಗೊಂಡ ಮಾಹಿತಿ ತಂತ್ರಜ್ಞಾನದ ತಿಳುವಳಿಕೆ ಇರುವ ಗ್ರಾಮದ ಯುವಕರ ಸಹಯೋಗದೊಂದಿಗೆ ರೈತರು ಮೋಬೈಲ್ ಸಂಖ್ಯೆಗೆ ಒ.ಟಿ.ಪಿ ಪಡೆಯವ ಮೂಲಕ ತಮ್ಮ ಜಮೀನಿನಲ್ಲಿ ಬೆಳೆಗಳ ಮಾಹಿತಿ ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೋಬೈಲ್ ಆಪ್ ಮೂಲಕ ದಾಖಲಿಸಬಹುದು. 
ಬೆಳೆ ಸಮೀಕ್ಷೆ ಯೋಜನೆಯಡಿ ಸಂಗ್ರಹಿಸುವ ಮಾಹಿತಿ ಪ್ರಕೃತಿ ವಿಕೋಪದಲ್ಲಿ ಬೆಳೆ ಹಾನಿ ಬಗ್ಗೆ ಎನ್,ಡಿ,ಆರ್,ಎಪ್:-ಎಸ್,ಡಿ,ಆರ್,ಎಪ್, ಅಡಿಯಲ್ಲಿ ಸಹಾಯ ಧನ ನೀಡಲು ವರದಿ ತಯಾರಿಸಲು,ಬೆಳೆ ವಿಮೆ ನೊಂದಾಯಿತ ರೈತರ ತಾಕು ಹಂತದ ಬೆಳೆ ಪರಿಶೀಲಿಸಲು,ಕನಿಷ್ಟ ಬೆಂಬಲ ಬೆಲೆ ನಿಗದಿತ,ಫಲಾಬವಿಗಳನ್ನು ಗುರುತಿಸಲು, ಸರ್ಕಾರದ ಯೋಜನೆಗಳಲ್ಲಿ ಬಳಸಿಕೊಳ್ಳಲು ಸಹಕಾರಿಯಾಗಲಿದೆ.ಹೆಚ್ಚಿನ ಮಾಹಿತಿಗಾಗಿ  ಕೃಷಿ ಇಲಾಖೆ,ಕಂದಾಯ ಇಲಾಖೆ, ರೇಷ್ಮೆ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಯನ್ನು ಸಂರ್ಪಕಿಸಬಹುದಾಗಿದೆ.

ಸಾಧನೆ- ಸಿದ್ದಾಪುರ: ತಾಲೂಕಿನಇಟಗಿಯರಾಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿಕೃತಿಕಾಕನ್ನಪ್ಪಗೌಡ 625 ಕ್ಕೆ 573 ಅಂಕ ಪಡೆದು ಸಾಧನೆ ಮಾಡಿದ್ದಾಳೆ. ಸಂಸ್ಕೃತ ಮತ್ತುಕನ್ನಡದಲ್ಲಿ ಶೇ 100ರ ಸಾಧನೆ ಮಾಡಿದ್ದಾಳೆ.ಇವಳು ದಾಸನಗದ್ದೆಗ್ರಾಮದ ಕೃಷಿಕ ಕನ್ನಪ್ಪಗೌಡಮತ್ತು ಪದ್ಮಾವತಿಗೌಡರ ಮಗಳು.ಇವಳ ಸಾಧನೆಗೆ ಶಾಲೆಯ ಎಸ್.ಡಿ.ಎಂ.ಸಿಯವರು, ಮುಖೋಧ್ಯಾಪಕರು, ಸಹ ಶಿಕ್ಷಕರು, ಪಾಲಕರು ಅಭಿನಂದಿಸಿದ್ದಾರೆ.
ಸಿದ್ದಾಪುರ: ಶಿರಸಿಯ ಮುರಾರ್ಜಿ ವಸತಿ ಶಾಲೆಯಲ್ಲಿಆಂಗ್ಲ ಮಾಧ್ಯಮದಲ್ಲಿಅಭ್ಯಸಿಸುತ್ತಿರುವ ತಾಲೂಕಿನ ವಡಗೇರಿಯ ವಿ.ಎಸ್.ಪವನ್ 626 ಕ್ಕೆ 575 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಆಮೂಲಕ ಶಾಲೆಯ ಮತ್ತುಊರಿನಕೀರ್ತಿಯನ್ನು ಹೆಚ್ಚಿಸಿದ್ದಾನೆ. ಇವನು ಷಣ್ಮುಖ ಮಡಿವಾಳ ಹಾಗೂ ಕಾವ್ಯದಂಪತಿಯರ ಸುಪುತ್ರ. ಇವನ ಸಾಧನೆಗೆ ಶಾಲೆಯ ಮುಖೋಧ್ಯಾಪಕರು, ಸಹ ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ನಿಧನ ಸುದ್ದಿ – ಗಿರಿಜಮ್ಮ ನೀಲಕಂಠ ಗೌಡರ್ (ಮುಠಳ್ಳಿ ವಯಸ್ಸು 93.) ಇವರುದಿನಾಂಕ 12-08-2020ರಂಧು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದು ಮೈತರಿಗೆ 3ಜನ ಹೆಣ್ಣು ಮಕ್ಕಳು ಹಾಗೂ 2 ಗಂಡು ಮಕ್ಕಳು (ಮೈತ) ಹಾಗೂ ಸೊಸೆ, ಮೊಮ್ಮಗ ನನ್ನು ಹಾಗೂ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಇವರು ಮುಠಳ್ಳಿ ದೇಸಾಯಿ ಗೌಡರ್ ಹಾಗೂ ಬಾಬು ಗೌಡರ್ ಅವರ ತಾಯಿ ಯಾಗಿರುತ್ತಾರೆ.

ಸಿದ್ಧಾಪುರ ನೆಹರು ಮೈದಾನದಲ್ಲಿ ಇಂದು ನಡೆದ ಸರಳ ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕೋವಿಡ್ ಕಾರ್ಯಕರ್ತರಾಗಿ ದುಡಿದ ಪೌರ ಕಾರ್ಮಿಕ ಬಾಬು ಕೊರಚರ್ ಮತ್ತು ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೆ ದ್ವಿತಿಯ ರ್ಯಾಂಕ್ ಪಡೆದ ಅನಿರುದ್ಧ ಗುತ್ತಿಕರ್ ರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕೀರ್ತಿ ನಾಗರಾಜ್ ನಾಯ್ಕ ಬೇಡ್ಕಣಿ ಸಿದ್ಧಾಪುರದ ಎಸ್.ವಿ. ಹೈಸ್ಕೂಲ್ ನಲ್ಲಿ ಮೊದಲಸ್ಥಾನ ಪಡೆಯುವ ಮೂಲಕ ಜಿಲ್ಲಾಮಟ್ಟದ ರ್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾಳೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *