new guideline of ganesha fest-ಗಣೇಶ್ ಹಬ್ಬ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ: ಮುಖ್ಯಮಂತ್ರಿ ಯಡಿಯೂರಪ್ಪ

ಗಣೇಶ್ ಹಬ್ಬ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Karnataka CM BS Yeddyurappa

ಬೆಂಗಳೂರು: ಗಣೇಶ್ ಹಬ್ಬ ಆಚರಣೆಗೆ ಅಡ್ಡಿಯಾಗಿದ್ದ ಮಾರ್ಗಸೂಚಿ ಪರಿಷ್ಕರಣೆ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಯುಂಟಾಗಲಿದೆ ಎಂದು ಸಾರ್ವಜನಿಕರಿಂದ ವ್ಯಕ್ತವಾದ ಆಕ್ಷೇಪಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಅವರು, ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ,ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯ ಪೂರ್ವಕ ಮನವಿ ಮಾಡುತ್ತಿದ್ದೇನೆಂದು ಅವರು ತಿಳಿಸಿದ್ದಾರೆ.

ಪರಿಷ್ಕೃತ ಮಾರ್ಗಸೂಚಿಯಲ್ಲಿ 7 ಷರತ್ತುಗಳ ವಿಧಿಸಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುವು ಮಾಡಿಕೊಡಲಾಗಿದೆ. 
1. ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ತಮ್ಮ ಮನೆಗಳಲ್ಲಿ/ಸರ್ಕಾರಿ/ಖಾಸಗಿ /ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯಲ್ಲಿ ಆಚರಿಸಬಹುದು.
2. ಸಾರ್ವಜನಿಕ ಸ್ಥಳದಲ್ಲಿ ಕನಿಷ್ಟ 4 ಅಡಿಗೆ ಮೀರದಂತೆ ಹಾಗೂ ಮನೆಗಳಲ್ಲಿ 2 ಅಡಿಗೆ ಮೀರದಂತೆ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.
3. ಪಾರಂಪರಿಕ ಗಣೇಶೋತ್ಸವ,ಸಮಿತಿಗಳು,ಮಂಡಳಿಗಳು ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಆಡಳಿತ/ಕಾರ್ಪುರೇ ಷನ್/ಮುನಿಸಿಪಲ್ ಗಳಿಂದ ಪೂರ್ವಾನುಮತಿ ಪಡೆದು ಉತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ.ಪ್ರತಿ ವಾರ್ಡ್ ಗೆ 4. ಒಂದರಂತೆ,ಗ್ರಾಮಕ್ಕೆ ಒಂದರಂತೆ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಉತ್ಸವ ಆಚರಿಸಬಹುದು.
5. ಗಣೇಶೋತ್ಸವ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಮನೋರಂಜನೆ, ಸಾಂಸ್ಕೃತಿಕ ಕಾರ್ಯಕ್ರಮ, ಸಂಗೀತ,ನೃತ್ಯ ಕಾರ್ಯಕ್ರಮ ಆಯೋಜನೆಗೆ ನಿಷೇಧವಿದೆ.
6. ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾಗಿ ಆವರಣ ನಿರ್ಮಿಸುವುದು.20ಕ್ಕಿಂತ ಹೆಚ್ಚಿನ ಭಕ್ತರು,ಜನರು ಸೇರುವುದಕ್ಕೆ ಅವಕಾಶವಿಲ್ಲ.
7. ಗಣೇಶ್ ಮೂರ್ತಿ ತರುವಾಗ ಹಾಗೂ ವಿಸರ್ಜನೆ ವೇಳೆ ಮೆರವಣಿಗೆ,ಡಿಜೆ ಸೇರಿದಂತೆ ಯಾವುದೇ ರೀತಿಯ ಆಡಂಬರ,ಗದ್ದಲಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ಮನೆಯಲ್ಲಿ ಗಣೇಶ ಪ್ರತಿಷ್ಠ ಪೂಜಿಸಿದವರು ಮನೆಯಲ್ಲಿ ಮೂರ್ತಿಯನ್ನು ವಿಸರ್ಜಿಸಿ.ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿದವರು ಸಮೀಪದ ಮೊಬೈಲ್ ಟ್ಯಾಂಕರ್ ಗಳು,ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ಸ್ಥಳೀಯ ಸಂಸ್ಥೆಗಳು ನಿರ್ಮಿಸಿರುವ ಹೊಂಡಗಳಲ್ಲಿ ಮೂರ್ತಿ ವಿಸರ್ಜನೆ ಮಾಡಬಹುದು ಎಂದು ಮುಖ್ಯಮಂತ್ರಿ ಅವರು ಮಾರ್ಗಸೂಚಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *