nk-carona-today-ಸಿದ್ಧಾಪುರದ14+1, ಹಳಿಯಾಳದ 21, ಕುಮಟಾ17 ಸೇರಿ ಇಂದು ಉ.ಕ. ದಲ್ಲಿ 80 ಜನರಲ್ಲಿ ಕರೋನಾ ದೃಢ

ರಾಜ್ಯದಲ್ಲಿ ಈ ವಾರ ಕಡಿಮೆಯಾಗುತ್ತಿರುವ ಕರೋನಾ ಪ್ರಕರಣಗಳ ಮಧ್ಯೆ ಸಿದ್ಧಾಪುರದಂಥ ಸಣ್ಣ ತಾಲೂಕಿನಲ್ಲಿ ಒಂದೇ ದಿನ 15 ಜನರಲ್ಲಿ ಕರೋನಾ ದೃಢವಾಗುವ ಮೂಲಕ ಉತ್ತರಕನ್ನಡದಲ್ಲಿ ಇಂದು ಒಟ್ಟೂ 80 ಹೊಸ ಪ್ರಕರಣಗಳು ವರದಿಯಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಕರೋನಾ ರಾಜಧಾನಿಯಾಗುತ್ತಿರುವ ಹಳಿಯಾಳದಲ್ಲಿ ಇಂದು ಅತಿಹೆಚ್ಚು 21 ಜನರಲ್ಲಿ ಕರೋನಾ ದೃಢಪಟ್ಟಿದೆ.ಕುಮಟಾದಲ್ಲಿ16, ಮುಂಡಗೋಡು07, ಕಾರವಾರ ಮತ್ತು ಭಟ್ಕಳಗಳಲ್ಲಿ ತಲಾ 5, ಶಿರಸಿಯಲ್ಲಿ9 ಅಂಕೋಲಾ, ಜೊಯಡಾಗಳಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಜಿಲ್ಲೆಯಲ್ಲಿ ಒಟ್ಟೂ 80 ಜನರಲ್ಲಿ ಇಂದು ಕರೋನಾ ದೃಢಪಟ್ಟಿದೆ.

ಸಿದ್ಧಾಪುರದ ಶಾಕಿಂಗ್ ನ್ಯೂಸ್-

ಸಿದ್ಧಾಪುರದ ಹೊಸಗದ್ದೆಯಲ್ಲಿ ಕಳೆದ ವಾರ 8 ಜನರಲ್ಲಿ ಕರೋನಾ ದೃಢಪಟ್ಟಿತ್ತು. ಇಂದು ಹಸರಗೋಡಿನ ಇದೇ ಹೊಸಗದ್ದೆಯಲ್ಲಿ 14 ಜನರಲ್ಲಿ ಕರೋನಾ ದೃಢವಾಗುವ ಮೂಲಕ ತಾಲೂಕಿನ ಜನರು ಬೆಚ್ಚಿಬೀಳುವಂತಾಗಿದೆ. ಸಿದ್ಧಾಪುರದಲ್ಲಿ ಈವೆರೆಗೆ ಒಟ್ಟೂ 90 ಜನರಲ್ಲಿ ಕರೋನಾ ಪತ್ತೆಯಾಗಿದ್ದು ಅವರಲ್ಲಿ 77 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ. ತಾಲೂಕಿನಲ್ಲಿ ರ್ಯಾಂಡಮ್ ಆಧಾರದಲ್ಲಿ ನಾನಾ ಪಂಚಾಯತ್ ಗಳ ಜನರ ಗಂಟಲುದೃವ ಪರೀಕ್ಷೆ ನಡೆದಿದೆ. ಹೀಗೆ ಪರೀಕ್ಷೆಗೆ ಒಳಗಾದ ನಾನಾ ಪಂಚಾಯತ್ ಗಳ ಜನರ ಮಧ್ಯೆ ಇಂದು ಹೊಸಗದ್ದೆಯಲ್ಲಿ ಒಂದೇ ದಿನ 14 ಜನರು ಹಾಗೂ ಕ್ಯಾದಗಿಯ ಒಬ್ಬರಲ್ಲಿ ಕರೋನಾ ದೃಢಪಟ್ಟಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ನಗರ, ಹೋಬಳಿ ಪ್ರದೇಶ ಬಿಟ್ಟರೆ ಸಿದ್ಧಾಪುರ ತಾಲೂಕಿನಾದ್ಯಂತ ಒಂದು ಲಕ್ಷ ಜನಸಂಖ್ಯೆಯಲ್ಲಿ ಬಹಿತೇಕ ಕುಟುಂಬಗಳು ಪ್ರತ್ಯೇಕವಾಗಿ ವಾಸಿಸುತ್ತಿವೆ. ಹೀಗೆ ಚದುರಿದ ಜನಸಂದಣಿಯ ಸಿದ್ಧಾಪುರದ ಹಸರಗೋಡು ಹೊಸಗದ್ದೆಯಲ್ಲಿ ಕಳೆದ ವಾರದ 8,ಇಂದಿನ 14 ಸೇರಿ ಒಟ್ಟೂ 22 ಜನರಲ್ಲಿ ಕರೋನಾ ದೃಢವಾಗಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 113 ಜನರು ಗುಣಮುಖರಾಗಿದ್ದು ಕರೋನಾ ಸೋಂಕಿತರಿಗಿಂತ ಹೆಚ್ಚು ಜನರು ಪ್ರತಿದಿನ ಗುಣಮುಖರಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ 35 ಜನರು ಕರೋನಾದಿಂದ ಮೃತಪಟ್ಟವರಾಗಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *