exclusive- cong rebel meet only in samajamukhi- ಕಾಂಗ್ರೆಸ್ ಆಂತರಿಕ ವ್ಯವಹಾರ, ಜಿಲ್ಲಾಧ್ಯಕ್ಷರ ಎದುರು ವಲಸೆ ಚಟುವಟಿಕೆಗೆ ವಿರೋಧ,ತಾಲೂಕಾಧ್ಯಕ್ಷರು,ಶಿರಸಿ ವೀಕ್ಷಕರ ವಿರುದ್ಧ ಜನಾಭಿಪ್ರಾಯ

ಶಿರಸಿ ತಾಲೂಕಿನ ಕೆ.ಪಿ.ಸಿ.ಸಿ. ವೀಕ್ಷಕರ ಗುಂಪುಗಾರಿಕೆ, ಸಿದ್ಧಾಪುರ ತಾಲೂಕಿನ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಇಂದು ಸಿದ್ಧಾಪುರ ಎ.ಪಿ.ಎಂ.ಸಿ. ವಸತಿ ಗೃಹದಲ್ಲಿ ಮಹತ್ವದ ಸಭೆ ನಡೆಯುತ್ತಿರುವುದು ಸುದ್ದಿಯಾಗಿದೆ.

ಜಿಲ್ಲಾ ಕಾಂಗ್ರೆಸ್ ನಲ್ಲಿ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ನೇತೃತ್ವದ ಕಾಂಗ್ರೆಸ್ ಬಣ ಶಿರಸಿ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಪ್ರಬಲವಾಗಿದೆ. ಈ ಬಣದ ವಿರುದ್ಧ ವಲಸೆ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿರುವ ಭೀಮಣ್ಣ ಬಣ ಇದಕ್ಕೆ ಪ್ರಮುಖ ಕಾರಣರಾಗಿರುವ ಶಿರಸಿ ತಾಲೂಕಿನ ಕೆ.ಪಿ.ಸಿ.ಸಿ. ಸದಸ್ಯೆ ಸುಷ್ಮಾ ರಾಜಗೋಪಾಲ ರೆಡ್ಡಿ ಕಾಂಗ್ರೆಸ್ ಮೇಲ್ ಸ್ತರದಲ್ಲಿ ಪ್ರಭಾವ ಬೀರಿ ಜಿಲ್ಲೆಯ ಕಾಂಗ್ರೆಸ್ ಸಂಘಟನೆಗೆ ಅಡ್ಡಿಯಾಗಿದ್ದಾರೆ ಎನ್ನುವುದು ಸೇರಿದಂತೆ ಪ್ರತಿ ಚುನಾವಣೆ ಮೊದಲು ಎಲ್ಲಿಂದಲೋ ಬಂದು ಜಿಲ್ಲೆಯ ಕಾಂಗ್ರೆಸ್ ಸಂಘಟನೆ, ಗೆಲುವಿಗೆ ಮುಳ್ಳಾಗುತ್ತಾ ಬಿ.ಜೆ.ಪಿ ಗೆಲುವಿಗೆ ಸಹಕರಿಸುತಿದ್ದಾರೆ ಎನ್ನುವುದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಪ್ತರ ಬಣದ ತಕರಾರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ 3.30 ಕ್ಕೆ ಎ.ಪಿ.ಎಂ.ಸಿ. ಆವರಣದಲ್ಲಿ ಸೇರಿರುವ ಶಿರಸಿ-ಸಿದ್ಧಾಪುರದ ಕಾಂಗ್ರೆಸ್ ಪ್ರಮುಖರು ಕಾಂಗ್ರೆಸ್ ಉಳಿಸಬೇಕು ಇಲ್ಲ ಕಾಂಗ್ರೆಸ್ ಬಿಟ್ಟು ನಮ್ಮ ದಾರಿ ನಾವು ನೋಡಿಕೊಳ್ಳಬೇಕು ಎಂದು ತೀರ್ಮಾನಿಸಲು ಈ ಗುಪ್ತ ಸಭೆ ನಡೆಯುತ್ತಿದೆ ಎನ್ನಲಾಗಿದೆ.

ಈ ತಕರಾರು, ಅಸಮಧಾನಗಳ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕರನ್ನು ಕರೆಸಿಕೊಂಡಿರುವ ದೇಶಪಾಂಡೆ ಬಣದ ಪ್ರಮುಖರು ಭೀಮಣ್ಣ ಎದುರು ಕಾಂಗ್ರೆಸ್ ಸ್ಥಾನಮಾನಗಳಲ್ಲಿದ್ದು, ಪಕ್ಷದ ಹಿರಿಯರು ಪ್ರಭಾವಿಗಳ ನೆರವಿನಿಂದ ಪಕ್ಕಕ್ಕೇ ಹಾನಿ ಮಾಡುತ್ತಿರುವ ಶಿರಸಿ ಕೇಂದ್ರಿತ ಻಻ಅಲ್ಪಸಂಖ್ಯಾತ ವಲಸೆ ಲಾಭಕೋರರ ವಿರುದ್ಧ ಪಕ್ಷದ ವರಿಷ್ಠರಿಗೆ ತಿಳಿಸಿ ಪಕ್ಷ ಕ್ಕಾ ಗುತ್ತಿರುವ ಹಾನಿ ತಡೆಯಬೇಕು, ಈ ಕ್ಷೇತ್ರದ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಮತದಾರರಿಗೆ ವಿರುದ್ಧವಾಗಿ ಹಣ, ಮೇಲ್ಮಟ್ಟದ ನಾಯಕರ ಸಂಪರ್ಕದ ವ್ಯಕ್ತಿಗಳ ಪಕ್ಷವಿರೋಧಿ ಚಟುವಟಿಕೆ ನಿಯಂತ್ರಿಸಬೇಕು. ಇಲ್ಲವಾದರೆ ಎಲ್ಲಾ ಕಾರ್ಯಕರ್ತರು, ನಾಯಕರು ಸಾಮೂಹಿಕವಾಗಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ನಮ್ಮ ದಾರಿ ನಾವು ನೋಡಿಕೊಳ್ಳಬೇಕು. ಕಳೆದ 20 ವರ್ಷಗಳಿಂದ ಬೇರೆ ಬೇರೆ ಸಂದರ್ಭದಲ್ಲಿ ಬೇರೆ, ಬೇರೆ ನಾಯಕರು ಜಿಲ್ಲೆಗೆ ಬಂದು ಕಾಂಗ್ರೆಸ್ ದುರ್ಬಲಗೊಳಿಸಿ ಬಿ.ಜೆ.ಪಿ. ಗೆ ನೆರವಾಗುತಿದ್ದಾರೆ. ಇಂಥ ದುರುದ್ದೇಶದ ನಾಯಕತ್ವ ಮತ್ತು ಅವರ ರಾಜಕಾರಣ ನಿಯಂತ್ರಿಸದಿದ್ದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಚೇತರಿಸಿಕೊಳ್ಳುವುದು ಕಷ್ಟ ಜಿಲ್ಲೆಯ ಬಹುಸಂಖ್ಯಾತರು, ಸಾಂಪ್ರದಾಯಿಕ ಕಾಂಗ್ರೆಸ್ ಮತದಾರರಿಗೆ ವಿರುದ್ಧವಾಗಿರುವ ವಲಸೆ ನಾಯಕತ್ವವನ್ನು ಜಿಲ್ಲೆಯಿಂದ ಶಾಶ್ವತವಾಗಿ ಹೊರದೂಡಬೇಕು. ಇಂಥ ವಲಸೆ ಶ್ರೀಮಂತರ ಕಾಸಿನ ಆಸೆಗಾಗಿ ಜಿಲ್ಲೆಯ ಕಾಂಗ್ರೆಸ್ ಸಂಘಟನೆಗೆ ವಿರುದ್ಧವಾಗಿ ಬಣ ರಾಜಕೀಯ ಮಾಡುವ ಪಕ್ಷವಿರೋಧಿಗಳನ್ನು ನಿಯಂತ್ರಿಸಬೇಕು. ಅದಾಗದಿದ್ದರೆ ನಾವೇ ಸಾಮೂಹಿಕವಾಗಿ ಕಾಂಗ್ರೆಸ್ ತ್ಯಜಿಸಬೇಕು ಎನ್ನುವ ವಿಚಾರವಾಗಿ ಬಿರುಸಿನ ಚರ್ಚೆ ನಡೆದಿದ್ದು ಸ್ಥಳಿಯ ಜನರು ಮತದಾರರಿಗೆ ವಿರುದ್ಧವಾಗಿರುವ ವಲಸೆ ನಾಯಕರ ಹಣ ಮತ್ತು ಸೋಗಿನ ರಾಜಕೀಯದ ವಿರುದ್ಧ ಜಿಲ್ಲೆಯಾದ್ಯಂತ ವ್ಯಾಪಕ ಹೋರಾಟದ ಹಿನ್ನೆಲೆಯಲ್ಲಿ ಸಂಘಟಿತವಾಗಿ ಕೆಲಸಮಾಡುವ ಬಗ್ಗೆ ನೂರಾರು ನಾಯಕರು ಭೀಮಣ್ಣನವರ ಎದುರೇ ಖಡಾಖಂಡಿತವಾಗಿ ತಮ್ಮ ಻ಅಭಿಪ್ರಾಯ ವ್ಯಕ್ತಪಡಿಸಿ ಹತ್ತು ವರ್ಷಗಳಿಂದ ಬೂತ್ ಮಟ್ಟದಿಂದ ಸಂಘಟನೆ ಮಾಡಿ ಪ್ರತಿ ಚುನಾವಣೆ ವೇಳೆ ಬರುವ ವಲಸೆ ಲಾಭಕೋರ ನಾಯಕರ ಎದುರು ನೀವು ತಲೆತಗ್ಗಿಸುವುದಾದರೆ ಅಂಥ ರಾಜಕಾರಣ ನಿಮಗೇಕೆ ಎಂದು ಅವರ ಆಪ್ತರೇ ಅಸಮಧಾನ ವ್ಯಕ್ತಪಡಿಸಿದರು ಎಂದು ಕೆಲವು ಮೂಲಗಳು ಸಮಾಜಮುಖಿಗೆ ತಿಳಿಸಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *