media mafia-ಮಾಧ್ಯಮಗಳ ಸುಳ್ಳುಸುದ್ದಿ ಪೊಲೀಸ್ ಎಚ್ಚರಿಕೆ!

ಉತ್ತರ ಕನ್ನಡ ಜಿಲ್ಲೆಯ ಹೆಸರನ್ನು ಬಳಸಿ ಜಿಲ್ಲೆಗೆ ಮಾಧ್ಯಮಗಳಿಂದ ಕೆಟ್ಟ ಹೆಸರು ಬರುತ್ತಿರುವ ಬಗ್ಗೆ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಬೇಸರಿಸಿದ್ದಾರೆ.

ರಾಷ್ಟ್ರ-ರಾಜ್ಯದೆಲ್ಲೆಲ್ಲೋ ಉಗ್ರರ ಚಟುವಟಿಕೆ ಅಥವಾ ಕಾನೂನುಬಾಹೀರ ಚಟುವಟಿಕೆಗಳು ನಡೆದಾಗ ಮಾಧ್ಯಮಗಳು ಉತ್ತರ ಕನ್ನಡ, ಭಟ್ಕಳಗಳ ಹೆಸರನ್ನು ಎಳೆದುತರುತ್ತಿವೆ. ಹೀಗೆ ಹೊರಗಿನ ವಿಧ್ವಂಸಕ ಕೆಲಸಗಳಿಗೆ ಜಿಲ್ಲೆಯ ಹೆಸರನ್ನು ಎಳೆದುತಂದು ಜಿಲ್ಲೆಗೆ ಕಳಂಕ ತರುತ್ತಿರುವ ಮಾಧ್ಯಮಗಳ ಬಗ್ಗೆ ಸ್ಥಳಿಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಘಟನೆಯೊಂದಿಗೆ ಜಿಲ್ಲೆಯ ಹೆಸರನ್ನು ತಳುಕು ಹಾಕಿ ಉಗ್ರರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕುಮಟಾಗಳಿಂದ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಬೊಬ್ಬಿರಿದಿದ್ದವು.

ಆದರೆ ಕೆಲವು ದಿವಸಗಳ ನಂತರ ಻ಅದು ಸುಳ್ಳುಸುದ್ದಿ ಎಂದು ಸಾಬೀತಾಯಿತು. ಇಂದು ಕೂಡಾ ಡ್ರಕ್ಸ್ ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಜನರು ಮತ್ತು ಶಿರಸಿಯನ್ನು ಉಲ್ಲೇಖಿಸಿ ಮಾಧ್ಯಮಗಳು ಸುಳ್ಳು ವರದಿ ಪ್ರಕಟಿಸಿದ್ದವು. ಈ ಸುಳ್ಳು ವರದಿಗಳಿಗೆ ರೆಕ್ಕೆ ಪುಕ್ಕ ಕಟ್ಟಿದ ಕೆಲವು ಲಾಭಕೋರ ರಾಜಕೀಯ ವ್ಯಕ್ತಿಗಳು, ಪತ್ರಕರ್ತರು ಈ ಗಾಳಿಸುದ್ದಿ, ವದಂತಿಗಳನ್ನು ಸತ್ಯವೆಂದು ಬಿಂಬಿಸುವ ಻಻ಅವರ ಲಾಗಾಯ್ತಿನ ಪೂರ್ವಾಗ್ರಹದಂತೆ ಇಂದು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಗಲಾಟೆ ಪ್ರಾರಂಭಿಸಿದ್ದರು.

ವಾಸ್ತವವೆಂದರೆ…… ಜಿಲ್ಲೆಯ ರಾಜಕೀಯ, ಮಾಧ್ಯಮ ಕ್ಷೇತ್ರ ನಿಯಂತ್ರಿಸುವ ಕೆಲವು ಕುತ್ಸಿತ ಮನೋಭಾವದ ಮತಾಂಧರು ಮಾಡುವ ಇಂಥ ರಾಜಕೀಯ ಲಾಭದ ಬಲಪಂಥದ ದೇಶದ್ರೋಹಿ ಚಟುವಟಿಕೆಗಳಿಂದಾಗಿ ಜಿಲ್ಲೆಯ ಪೊಲೀಸರಿಗೆ, ಸ್ಥಳಿಯರಿಗೆ ಕೆಟ್ಟ ಹೆಸರು ಬರುತ್ತಿದೆ. ಇಂಥ ಬಲಪಂಥೀಯ ರಾಜಕೀಯ ಹಿತಾಸಕ್ತ ಮಾಧ್ಯಮ ಕ್ರಿಮಿ ಗಳಿಂದಾಗಿ ಜಿಲ್ಲೆಯ ಹೆಸರಿಗೆ ಕಳಂಕ ಬರುತ್ತಿರುವ ಬಗ್ಗೆ ಸ್ಥಳೀಯರು ಆಕ್ಷೇಪಿಸಿದ್ದರೆ ಇಂಥ ಪಟ್ಟಭದ್ರ ಬಲಪಂಥೀಯ ಎಡಬಿಡಂಗಿಗಳ ಕುಂಡೆ ಮೇಲೆ ಒದ್ದು ಚಡ್ಡಿ ಬಿಚ್ಚಿಸುವ ಬಗ್ಗೆ ಪೊಲೀಸ್ ಇಲಾಖೆ ಕೂಡಾ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂಥ ಗಾಳಿಸುದ್ದಿಗಳು, ಸುಳ್ಳುಗಳ ಮೂಲಕವೇ ರಾಜಕೀಯ, ಮಾಧ್ಯಮಗಳ ಲಾಭ ಉಣ್ಣುತ್ತಿರುವ ಕೆಲವು ಸಮಾಜವಿರೋಧಿಗಳು ಇಂಥ ಹರಾಕಿರಿ ಮಾಡುತ್ತಿದ್ದು ಅದು ಬಹಿರಂಗವಾಗಿ ಸತ್ಯ ದರ್ಶನವಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇಂಥ ಲಾಭಕೋರ ಸಂಘ, ಪಕ್ಷಗಳ ಬಗ್ಗೆ ಜನವಿರೋಧ ವ್ಯಕ್ತವಾಗುವ ಸಾಧ್ಯತೆಗಳು ನಿಚ್ಚಳವಾಗಿವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *