ಸಂಜನಾ ಬಗ್ಗೆ ಮಾತನಾಡಿ ಬಾಯಿ ಗಲೀಜು ಮಾಡಿಕೊಳ್ಳಲ್ಲ: ರಾಗಿಣಿ ಘಮ ಘಮ ನಾರುತ್ತಿದ್ದಾಳಾ? ಪ್ರಶಾಂತ್ ಸಂಬರಗಿ

ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ ನಂಟಿನ ಸಂಬಂಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

Ragini and sanjana

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡುತ್ತಿರುವ ಡ್ರಗ್ಸ್ ನಂಟಿನ ಸಂಬಂಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇಂದು ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಚಲನಚಿತ್ರ ವಾಣಿಜ್ಯ ಮಂಡಳಿ ಗುಂಪುಗಾರಿಕೆಯಿಂದ ಕನ್ನಡ ಸಿನಿಮಾ ರಂಗ ಹಾಳಾಗುತ್ತಿದೆ. ನನಗೂ ಮಂಡಳಿಗೂ ಯಾವುದೇ ಸಂಬಂಧವಿಲ್ಲ, ಏಕೆಂದರೆ ನಾನು ವಾಣಿಜ್ಯ ಮಂಡಳಿ ಸದಸ್ಯನಲ್ಲ ಎಂದು ಹೇಳಿದ್ದಾರೆ. ವಾಣಿಜ್ಯ ಮಂಡಳಿ ಹೆಸರಲ್ಲಿ  ಕನ್ನಡ ಸಿನಿಮಾ ರಂಗವನ್ನು ರೂಲ್ ಮಾಡುವುದಕ್ಕೆ ಹೋಗಬೇಡಿ ಎಂದು ಹೇಳಿದ್ದಾರೆ.

ನಟಿ ರಾಗಿಣಿ ಡ್ರಗ್ಸ್ ನಂಟಿನ ಬಗ್ಗೆ ಮಾತನಾಡಿದ ಸಂಬರಗಿ ರಾಗಿಣಿ ಘಮಘಮ ಅನ್ನುತ್ತಿದ್ದಾಳಾ ಆಕೆ ಗಬ್ಬು ನಾರುತ್ತಿದ್ದಾಳಾ, ಆಕೆ ಒಬ್ಬ ಆರ್ ಟಿಓ ಪೊಲೀಸ್ ಅಧಿಕಾರಿ ಜೊತೆ ಯುಬಿ ಸಿಟಿಯಲ್ಲಿ ಓಡಾಡುತ್ತಿದ್ದಳು, ಮದುವೆಯಾಗುವುದಾಗಿಯೂ ಹೇಳಿದ್ದಳು, ಆದರೆ ಇಂಥ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾಳೆ ಎಂದು ನಮಗೆ ತಿಳಿದಿರಲಿಲ್ಲ, ಆಕೆಗೆ ನೋಟಿಸ್ ನೀಡಿರುವುದನ್ನು  ನಾನು ಟಿವಿಯಲ್ಲಿ ನೋಡಿದೆ ಎಂದು ಹೇಳಿದರು.

ಇನ್ನು ನಟಿ ಸಂಜನಾ ಗಲ್ರಾನಿ ಬಗ್ಗೆ ಮಾತನಾಡಿದ ಸಂಬರಗಿ ಯಾರೋಬ್ಬರ ತೇಜೋವಧೆ ಮಾಡುವುದು ನನ್ನ ಉದ್ದೇಶವಲ್ಲ, ಸಂಜನಾ ಬಗ್ಗೆ ಸಿನಿಮಾ ಇಂಡಸ್ಟ್ರಿಗೆ ಗೊತ್ತು, ಆಕೆ ಬಗ್ಗೆ ಮಾತನಾಡಿ ನಾನು ಬಾಯಿ ಗಲೀಜು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಬಿಸಿಬಿಸಿ ಎಂಬ ಸಿನಿಮಾದಲ್ಲಿ ಸಂಜನಾ ಅವರಿಗೆ ಪಾತ್ರ ಕೊಡಲು ಹೋಗಿದ್ದೆವು, ಸಿಂಧ್ ಸ್ಕೂಲಿಗೆ ಹೋಗಿ ಆಕೆಯನ್ನು ನೋಡಿದ್ದೆವು, ಆದರೆ ಮೈನರ್ ಎಂಬ ಕಾರಣಕ್ಕೆ ಆಕೆ ಆ ಸಿನಿಮಾದಲ್ಲಿ ನಟಿಸಲು ಆಗಲಿಲ್ಲ, ಆಕೆ ಲೆವೆಲ್ ಏನು ಎಂಬುದು ಸಿನಿಮಾ ರಂಗಕ್ಕೆ ಗೊತ್ತಿದೆ ಎಂದು ತಿಳಿಸಿದ್ದಾರೆ.

ನಾನು ಕೆಲವು ಸಿನಿಮಾ ವಿತರಣೆ ಮಾಡಿದ್ದೇನೆ, ನನ್ನ ಕೊಡುಗೆ ಏನು ಎಂದು ಪ್ರಶ್ನಿಸುವವರು ವೆಬ್ ಸೈಟ್ ನಲ್ಲಿ ನನ್ನ ಬಗ್ಗೆ ತಿಳಿದು ಕೊಳ್ಳಲಿ, ಕಾಂಗ್ರೆಸ್ ಶಾಸಕರೊಬ್ಬರ ಬರ್ತ್ ಡೇ ಪಾರ್ಟಿಯಲ್ಲಿ ಇಮ್ತಿಯಾಜ್ ಖಾತ್ರಿ ಭಾಗವಹಿಸಿದ್ದ, ಈ ಇಮ್ತಿಯಾಜ್ ಖಾತ್ರಿ ಯಾರು ಎಂಬ ಬಗ್ಗೆ ಸರ್ಕಾರ ವಿವರಣೆ ಪಡೆಯಲಿ , ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *