ಇದೇ 16 ರಂದು ರಾಜ್ಯಸರ್ಕಾರದಿಂದ ವಿವಿಧ ಕಡೆಗಳಲ್ಲಿ ಸಾಲ ಮೇಳ, ಮೂರು ಲಕ್ಷದವರೆಗೂ ಯಾವುದೇ ಬಡ್ಡಿ ಇರಲ್ಲ

ಇದೇ ತಿಂಗಳ 16 ರಂದು ವಿವಿಧ ಕಡೆಗಳಲ್ಲಿ  ಸಾಲ ಮೇಳವನ್ನು  ರಾಜ್ಯ ಸರ್ಕಾರ ಆಯೋಜಿಸಿದೆ.ಇದರಿಂದಾಗಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಉಲ್ಬಣದ ನಂತರ ಉದ್ಯೋಗ ಕಳೆದುಕೊಂಡಂತಹವರು ಮತ್ತು ವ್ಯವಹಾರ ಮುಂದುವರೆಸಲು ಆಗದೇ ಸಂಕಷ್ಟ ಪಡುತ್ತಿರುವ ಸಾವಿರಾರು ಜನರಿಗೆ ನೆರವಾಗುವ ಸಾಧ್ಯತೆಯಿದೆ.

Casual_photo1

ಬೆಂಗಳೂರು: ಇದೇ ತಿಂಗಳ 16 ರಂದು ವಿವಿಧ ಕಡೆಗಳಲ್ಲಿ  ಸಾಲ ಮೇಳವನ್ನು  ರಾಜ್ಯ ಸರ್ಕಾರ ಆಯೋಜಿಸಿದೆ.ಇದರಿಂದಾಗಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಉಲ್ಬಣದ ನಂತರ ಉದ್ಯೋಗ ಕಳೆದುಕೊಂಡಂತಹವರು ಮತ್ತು ವ್ಯವಹಾರ ಮುಂದುವರೆಸಲು ಆಗದೇ ಸಂಕಷ್ಟ ಪಡುತ್ತಿರುವ ಸಾವಿರಾರು ಜನರಿಗೆ ನೆರವಾಗುವ ಸಾಧ್ಯತೆಯಿದೆ.

ಮೂರು ಲಕ್ಷದವರೆಗೂ ಯಾವುದೇ ಬಡ್ಡಿ ಇರುವುದಿಲ್ಲ, ಮೂರು ಲಕ್ಷದಿಂದ 10 ಲಕ್ಷದವರೆಗಿನ ಸಾಲಕ್ಕೆ ಶೇ. 3 ರಷ್ಟು ಬಡ್ಡಿ ವಿಧಿಸಲಾಗುತ್ತದೆ.ಈ ಹಣವನ್ನು ರಾಜ್ಯ ಸರ್ಕಾರದ ಜೊತೆಗೆ ಆತ್ಮನಿರ್ಭಾರ ಭಾರತ್ ನಿಧಿಯಿಂದ ಬಿಡುಗಡೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಕಾರ್ಯಕ್ರಮ ಉದ್ಘಾಟಿಸುವ ಸಾಧ್ಯತೆಯಿದೆ.

ಮಾರ್ಚ್ ನಲ್ಲಿ ಘೋಷಿಸಲಾಗಿದ್ದ ಲಾಕ್ ಡೌನ್ ತೆರೆವಾಗಿದ್ದರೂ ಕೂಡಾ ಬೀದಿ ವ್ಯಾಪಾರಿಗಳು, ಕಾರ್ಮಿಕರು, ಮಹಿಳಾ ಸಹಾಯ ಗುಂಪುಗಳು, ಕೃಷಿ ಕಾರ್ಮಿಕರು,ಡೈರಿ ಮತ್ತು ರೇಷ್ಮೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದು, ಅಂತವರಿಗಾಗಿ ಬೆಂಗಳೂರು,ಮೈಸೂರು, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಸಾಲ ಮೇಳ ಆಯೋಜಿಸಲಾಗುತ್ತಿದೆ. ವಿವಿಧ ಸಹಕಾರ ಬ್ಯಾಂಕ್ ಗಳು ಈ ಸಾಲದ ಹಣವನ್ನು ವಿತರಿಸುವ ಸಾಧ್ಯತೆಯಿದೆ.

ಕೋವಿಡ್ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ಜನರನ್ನು ಮೇಲೆತ್ತಲು ಇದೊಂದು ತಾತ್ಕಾಲಿಕ ಯೋಜನೆಯಾಗಿದೆ ಎಂದು ಸಹಕಾರ ಇಲಾಖೆಯ ಅಧಿಕೃತ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಹೇಳಿವೆ.

ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಅವಧಿಯಲ್ಲಿ ಬೀದಿ ವ್ಯಾಪಾರಿಗಳಿಗಾಗಿ ಆರಂಭಿಸಲಾಗಿದ್ದ ಇದೇ ರೀತಿಯ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ವ್ಯವಸ್ಥೆಗೆ  ಈ ವರ್ಷದ ಬಜೆಟ್ ನಲ್ಲಿ ಯುಡಿಯೂರಪ್ಪ ಯಾವುದೇ ರೀತಿ ಹಣ ಹಂಚಿಕೆ ಮಾಡದಿದ್ದರೂ, ಈ  ಹೊಸ ಯೋಜನೆ ಮೂಲಕ ಬೀದಿ ವ್ಯಾಪಾರಗಳಿಗೆ ಸಾಲ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *