

ಈಗಾಗಲೇ ಸರ್ಕಾರಿ ಹುದ್ದೆಯಲ್ಲಿದ್ದು. ಮತ್ತೊಂದು ಸರ್ಕಾರಿ ಹುದ್ದೆಗೆ ಆಯ್ಕೆಗಾಗಿ ಅರ್ಜಿ ಸಲ್ಲಿಸುವ ಮುನ್ನ ಎನ್ ಒ ಸಿ ಪಡೆಯುವ ಹಳೆ ನಿಯಮಕ್ಕೆ ವಿನಾಯಿತಿ ಕಲ್ಪಿಸಿ, ಸರಕಾರ ನೌಕರರ ಪಾಲಿಗೆ ಸಹಿ ಸುದ್ದಿ ನೀಡಿದೆ.

ಬೆಂಗಳೂರು: ಈಗಾಗಲೇ ಸರ್ಕಾರಿ ಹುದ್ದೆಯಲ್ಲಿದ್ದು. ಮತ್ತೊಂದು ಸರ್ಕಾರಿ ಹುದ್ದೆಗೆ ಆಯ್ಕೆಗಾಗಿ ಅರ್ಜಿ ಸಲ್ಲಿಸುವ ಮುನ್ನ ಎನ್ ಒ ಸಿ ಪಡೆಯುವ ಹಳೆ ನಿಯಮಕ್ಕೆ ವಿನಾಯಿತಿ ಕಲ್ಪಿಸಿ, ಸರಕಾರ ನೌಕರರ ಪಾಲಿಗೆ ಸಹಿ ಸುದ್ದಿ ನೀಡಿದೆ.

ಸರ್ಕಾರಿ ಹುದ್ದೆಯಲ್ಲಿದ್ದು, ಮತ್ತೊಂದು ಸರ್ಕಾರಿ ಹುದ್ದೆಗಾಗಿ ಅರ್ಜಿ ಸಲ್ಲಿಸಲು ತಾವು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯಿಂದ ನಿರಪೇಕ್ಷಣಾ ಪತ್ರ(ಎನ್ಒಸಿ ) ಪಡೆಯುವುದು ಈ ಮೊದಲು ಕಡ್ಡಾಯವಾಗಿತ್ತು.
ಇದೀಗ ಈ ನಿಯಮಕ್ಕೆ ತಿದ್ದುಪಡಿ ತಂದಿದ್ದು ನೌಕರರು ಬೇರೊಂದು ಇಲಾಖೆಯ ಹುದ್ದೆಗೆ ಅರ್ಜಿ ಸಲ್ಲಿಸಿ, ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಆಯ್ಕೆಗೊಂಡ ನಂತರವೂ ಹಿಂದಿನ ನೌಕರಿ ಇಲಾಖೆ/ಸಚಿವಾಲಯದ ಮುಖ್ಯಸ್ಥರಿಂದ ಎನ್ಒಸಿ ಪಡೆಯಲು ಅವಕಾಶ ನೀಡಿ, ಹೊಸ ನಿಯಮ ಜಾರಿಗೊಳಿಸಲು ಕರಡು ಅಧಿಸೂಚನೆ ಪ್ರಕಟಿಸಿದೆ.


ನೌಕರರು ಅರ್ಜಿ ನೀಡಿದ 30 ದಿನಗಳ ಒಳಗಾಗಿ ನಿರಪೇಕ್ಷಣಾ ಪತ್ರ ನೀಡಬೇಕು ಎಂದು ತಿದ್ದುಪಡಿ ನಿಮಯಗಳಲ್ಲಿ ತಿಳಿಸಿದೆ. ಇದೇ ವೇಳೆ ಯಾವುದೇ ನೌಕರ ಅಶಿಸ್ತು ಕ್ರಮಗಳನ್ನು ಎದುರಿಸುತ್ತಿದ್ದಲ್ಲಿ, ಕ್ರಿಮಿನಲ್ ವಿಚಾರಣೆಗೆ ಒಳಗಾಗಿದ್ದಲ್ಲಿ, ಇಲಾಖೆಯ ವಿಚಾರಣೆಗಳನ್ನು ಎದುರಿಸುತ್ತಿದ್ದಲ್ಲಿ, ಸಾರ್ವಜನಿಕ ಹಿತಾಸಕ್ತಿಯಿಂದ ಅಂತಹ ಅಭ್ಯರ್ಥಿಗಳಿಗೆ ಎನ್ಒಸಿ ನೀಡಬಾರದು ಎಂದು ರಾಜ್ಯಪತ್ರದಲ್ಲಿ ತಿಳಿಸಲಾಗಿದೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






