ಕಾರವಾರ: ಅಂತರ್ಜಾಲ ಸೇವೆಯಿಂದ ವಂಚಿತ ಗ್ರಾಮದ ವಿದ್ಯಾರ್ಥಿಗಳಿಗೆ ನೆರವಾದ ಯುವಕ!

ಈ ಡಿಜಿಟಲ್ ಯುಗದಲ್ಲಿಯೂ ಅಂತರ್ಜಾಲ ಸೇವೆಯಿಂದ ವಂಚಿತವಾಗಿರುವ ಅದೆಷ್ಟೋ ಗ್ರಾಮಗಳಿವೆ. ಅಂತಹ ಗ್ರಾಮಗಳ ಪೈಕಿ ಕಾರವಾರದ ವೈಲ್ವಾಡ  ಗ್ರಾಮವೂ ಒಂದು. 

Sagar Naik

ಕಾರವಾರ: ಈ ಡಿಜಿಟಲ್ ಯುಗದಲ್ಲಿಯೂ ಅಂತರ್ಜಾಲ ಸೇವೆಯಿಂದ ವಂಚಿತವಾಗಿರುವ ಅದೆಷ್ಟೋ ಗ್ರಾಮಗಳಿವೆ. ಅಂತಹ ಗ್ರಾಮಗಳ ಪೈಕಿ ಕಾರವಾರದ ವೈಲ್ವಾಡ  ಗ್ರಾಮವೂ ಒಂದು. 

ಈ ಗ್ರಾಮದಲ್ಲಿರುವ ವಿದ್ಯಾರ್ಥಿಗಳಿಗೆ ಅಂತರ್ಜಾಲವಿರಲಿ ಮೊಬೈಲ್ ನೆಟ್ವರ್ಕ್ ಸರಿಯಾಗಿ ದೊರೆಯುವುದೂ ಕಷ್ಟ ಸಾಧ್ಯ. ಹೀಗಿರುವಾಗ ಕೋವಿಡ್-19 ಪರಿಸ್ಥಿತಿಯಲ್ಲಿ ಆನ್ ಲೈನ್ ತರಗತಿಗಳನ್ನು ತಪ್ಪಿಸಿಕೊಳ್ಳುವಂತಿರಲಿಲ್ಲ.  https://m.youtube.com/watch?v=1S-j754l4qM&t=32s

ಅಭಿಷೇಕ್ ನಾಯ್ಕ್ ಎಂಬ 7 ನೇ ತರಗತಿಯ ವಿದ್ಯಾರ್ಥಿ ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಕಾರವಾರದ ಬಳಿ ಇರುವ ತಮ್ಮ ಸಂಬಂಧಿಕರ ಮನೆಗೆ ಬರಬೇಕಿತ್ತು. ಇದು ಈ ವಿದ್ಯಾರ್ಥಿಯ ಪರಿಸ್ಥಿತಿಯಷ್ಟೇ ಅಲ್ಲದೇ ವೈಲ್ವಾಡ, ಬೊಡ್ಜುಗ್ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿರುವ ಅನೇಕ ವಿದ್ಯಾರ್ಥಿಗಳ ಸ್ಥಿತಿಯೂ ಆಗಿತ್ತು.  https://m.youtube.com/watch?v=5o3h3H7WV9Q&t=340s

ಆದರೆ ಗಿರಿಜಾಬಾಯಿ ಸೈಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿರುವ ಸಾಗರ್ ನಾಯ್ಕ್ ತಮ್ಮ ಮನೆಯಲ್ಲಿರುವ ಖಾಸಗಿ ಬ್ರಾಡ್ ಬ್ಯಾಂಡ್ ನ ಇಂಟರ್ ನೆಟ್ ಕನೆಕ್ಷನ್ ನಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್ ನೆಟ್ ಸೌಲಭ್ಯ ಕಲ್ಪಿಸುತ್ತಿದ್ದಾರೆ. ಅಂದರೆ ಗ್ರಾಮದ ವಿದ್ಯಾರ್ಥಿಗಳಿಗೆ ತಮ್ಮ ಇಂಟರ್ ನೆಟ್ ಸಂಪರ್ಕದ ಪಾಸ್ವರ್ಡ್ ನೀಡಿದ್ದಾರೆ. ಈ ಮೂಲಕ ಸಾಗರ್ ನಾಯ್ಕ್ ಮನೆಯಲ್ಲಿ ವಿದ್ಯಾರ್ಥಿಗಳು ಯಾವುದೇ ಸಮಸ್ಯೆ ಇಲ್ಲದೇ ಆನ್ ಲೈನ್ ತರಗತಿಗಳಿಗೆ ಹಾಜರಾಗಬಹುದಾಗಿದೆ 

ಕೋವಿಡ್-19 ಕಾರಣದಿಂದಾಗಿ ಶಾಲೆಗಳು ಆನ್ ಲೈನ್ ತರಗತಿಗಳನ್ನು ನಡೆಸುತ್ತಿವೆ. ಇಲ್ಲಿನ ವಿದ್ಯಾರ್ಥಿಗಳು ಅಡೆತಡೆ ಇಲ್ಲದೇ ತರಗತಿಗಳಿಗೆ ಹಾಜರಾಗಬೇಕು ಎಂದು ಬಯಸಿದೆ. ನನ್ನ ಮನೆಯಲ್ಲಿರುವ ಇಂಟರ್ ನೆಟ್ ನ್ನು ಅವರಿಗೆ ಉಚಿತವಾಗಿ ನೀಡುವಂತೆ ಮಾಡಿದೆ ಎಂದು ಸಾಗರ್ ನಾಯ್ಕ್ ಹೇಳುತ್ತಾರೆ. 

ಶಾಲೆಗಳಿಂದ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳ ವರೆಗೆ ಎಲ್ಲರಿಗೂ ಸಾಗರ್ ನಾಯ್ಕ್ ಮನೆಯಲ್ಲಿರುವ ಅಂತರ್ಜಾಲ ಅತ್ಯಂತ ಉಪಯುಕ್ತವಾಗಿದೆ. 

“ಗ್ರಾಮೀಣ ಭಾಗ ಹಾಗೂ ನಗರ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಲಭ್ಯತೆಯಲ್ಲಿ ಈಗಲೂ ಬಹಳ ವ್ಯತ್ಯಾಸವಿದೆ. ಸಿದ್ದಾರ್ ಗ್ರಾಮ ಹಾಗೂ ದೇವರಮಕ್ಕಿ ಗ್ರಾಮಗಳ ನಡುವೆ ಅಂತರ್ಜಾಲ ಸೇವೆಯೇ ಇಲ್ಲ. ಈ ಮಧ್ಯೆ ನದಿ ಹರಿಯುತ್ತಿದೆ.  ವೈಲ್ವಾಡ 100 ಮನೆಗಳಿರುವ ಗ್ರಾಮವಾಗಿದೆ. 

ಅಂತರ್ಜಾಲ ಸೇವೆ ಪಡೆಯಲು ಹೆಚ್ಚು ಹಣ ನೀಡಿ ಸುಮಾರು 1 ಕಿ.ಮೀ ದೂರದಿಂದ ಕೇಬಲ್ ಎಳೆಸಲಾಗಿದೆ. ಇಲ್ಲಿ ಅಂತರ್ಜಾಲ ಸೇವೆ ಇರುವ ಏಕೈಕ ಮನೆ ನಮ್ಮದು,  ವಿದ್ಯಾರ್ಥಿಗಳ ಕಷ್ಟವನ್ನು ಅರ್ಥಮಾಡಿಕೊಂಡು ಸಹಕಾರ ನೀಡುತ್ತಿರುವುದಕ್ಕೆ ಸಂತಸವಿದೆ ಎನ್ನುತ್ತಾರೆ ವೈಲ್ವಾಡಾ ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಸನತ್ ನಾಯ್ಕ್. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *