gandhi jayanti spl- ಜನವಿರೋಧಿ ಸರ್ಕಾರಗಳ ವಿರುದ್ಧ ಧರಣಿ ಸತ್ಯಾಗ್ರಹ

ಜನರನ್ನು ಭಾವನಾತ್ಮಕವಾಗಿ ಉತ್ತೇಜಿಸಿ ಜನದ್ರೋಹ ಮಾಡುವ ವ್ಯವಸ್ಥಿತ ಪರಿವಾರವನ್ನು ಹಿಮ್ಮೆಟ್ಟಿಸದಿದ್ದರೆ ಭಾರತದಲ್ಲಿ ರೈತರು, ಕಾರ್ಮಿಕರು, ಮಹಿಳೆಯರು ಎರಡನೇ ದರ್ಜೆಯ ಪ್ರಜೆಗಳಾಗುವ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿರುವ ಕಾರ್ಮಿಕ ಮುಖಂಡೆ ಯಮುನಾ ಗಾಂವ್ಕರ್ ಕಳೆದ ಒಂದು ದಶಕದಿಂದಲೂ ಜನಸಾಮಾನ್ಯರು, ಬಡವರಾದ ಕಾರ್ಮಿಕರು, ರೈತರು, ಮಹಿಳೆಯರನ್ನು ಶೋಷಿಸುವ ವ್ಯವಸ್ಥೆಯನ್ನು ಪೋಶಿಸುವ ಆಡಳಿತ ಉಳ್ಳವರ ಪರವಾಗಿ ಕೆಲಸಮಾಡುತ್ತಾ ಭಾರತವನ್ನು ಗುಲಾಮಗಿರಿಗೆ ತಳ್ಳುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಗಾಂಧಿಜಯಂತಿ ನಿಮಿತ್ತ ರಾಷ್ಟ್ರದಾದ್ಯಂತ ಇಂದು ನಡೆದ ಧರಣಿ ಸತ್ಯಾಗ್ರಹದ ಅಂಗವಾಗಿ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಸಂಘಟಿಸಿದ್ದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು ಬಂಡವಾಳಶಾಹಿ ಬಹುಜನಶ್ರಮಿಕವರ್ಗವನ್ನು ಶೋಷಿಸುತ್ತದೆ. ಇಂಥ ಶೋಷಕರನ್ನು ಬೆಂಬಲಿಸುತ್ತಿರುವ ಈಗಿನ ಸರ್ಕಾರಗಳು ಜನದ್ರೋಹಿ ನೀತಿ ಅನುಸರಿಸುತ್ತಿವೆ ಎಂದರು.

ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದ ಪ್ರಮುಖರು ಈ ದೇಶದಲ್ಲಿ ಬಹುಸಂಖ್ಯಾತರಾದ ಕಾರ್ಮಿಕರು, ರೈತರು. ಮಹಿಳೆಯರು ಶ್ರಮಿಕವರ್ಗವನ್ನು ಉಪೇಕ್ಷಿಸಿ ಆಡಳಿತ ನಡೆಸಲಾಗುತ್ತಿದೆ. ಕಾರ್ಮಿಕ ಮಸೂದೆ, ಭೂಸುಧಾರಣೆ ಮಸೂದೆ, ಕೃಷಿಮಾರುಕಟ್ಟೆ ಅಧಿನಿಯಮ ಬದಲಾವಣೆಗಳ ಹಿಂದೆ ಕಾರ್ಪೊರೇಟ್ಗಳನ್ನು ರಕ್ಷಿಸುವ ಉಪಾಯದ ಲಾಭಾಕಾಂಕ್ಷೆಯ ಅಪಾಯದ ಆಡಳಿತ ವ್ಯವಸ್ಥೆಯನ್ನು ಮಾಡುವ ಮೂಲಕ ಭಾರತೀಯ ಶ್ರಮಿಕ ವರ್ಗವನ್ನು ಹಿಂಸಿಸಲಾಗುತ್ತಿದೆ. ಇಂಥ ಅಪಾಯಕಾರಿ ಪರಿವಾರದ ಆಡಳಿತದ ವಿರುದ್ಧ ಜನಜಾಗೃತಿ, ಸಂಘಟನೆಮಾಡಿ ಪ್ಯಾಸಿಸ್ಟ್ ಶಕ್ತಿಗಳನ್ನು ಹಿಮ್ಮೆಟ್ಟಿಸುವ ಮೂಲಕ ಜನಪರರಿಗೆ ಆಡಳಿತ ನೀಡಬೇಕು ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಕನ್ನೇಶ್ ಕೋಲಶಿರ್ಸಿ, ರೈತಸಂಘದ ಅಧ್ಯಕ್ಷ ವೀರಭದ್ರ ನಾಯ್ಕ, ಕೆರಿಯಪ್ಪ ಸಂಪೆಸರ, ಚಂದ್ರಶೇಖರ್ ಕುಂಬ್ರಿಗದ್ದೆ, ಎಸ್.ಎಫ್.ಆಯ್ ಮುಖಂಡ ಸಾಕಿಬ್ ಗುರ್ಕಾರ್, ವಿಷ್ಣುನಾಯ್ಕ, ಆಯ್.ಸಿ.ನಾಯ್ಕ, ನಾಗಪ್ಪ ನಾಯ್ಕ,ಕೆ.ಟಿ.ನಾಯ್ಕ ಹೆಗ್ಗೇರಿ ಮಾತನಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *