ಮಾಣಿಹೊಳೆದಡದ ಜನರ ಬವಣೆ- ಸರ್ವ ಋತು ರಸ್ತೆಗಾಗಿ ಆಗ್ರಹ,ಮುಖ್ಯಮಂತ್ರಿಗಳಿಗೂ ಮನವಿ

ಉತ್ತರ ಕನ್ನಡ ಜಿಲ್ಲೆಯ ಅನೇಕ ಹಳ್ಳಿಗಳಿಗೆ ಸೇತುವೆ,ರಸ್ತೆ ವ್ಯವಸ್ಥೆ ಇಲ್ಲದೆ ಮಳೆಗಾಲ ಶಾಪವಾಗಿ ಕಾಡುವುದು ಇಲ್ಲಿಯ ವಿದ್ಯಮಾನ. ಇಂಥ ಹಳ್ಳಿಗಳ ಸಾಲಿನಲ್ಲಿ ಸಿದ್ಧಾಪುರದ ಮಾಣಿಹೊಳೆ ದಂಡೆಯ ಅನೇಕ ಗ್ರಾಮಗಳು ಸೇರುತ್ತವೆ. ಸಿದ್ಧಾಪುರದ ಕುಮಟಾ ರಸ್ತೆ ಮತ್ತು ಹೆಗ್ಗರಣೆ ರಸ್ತೆಗಳನ್ನು ಸಂಪರ್ಕಿಸುವ ಕತ್ರಿಗಾಲ, ಮಾಣಿಹೊಳೆ ರಸ್ತೆಯ ಎಡಕ್ಕೆ ಸುಮಾರು ನಾಲ್ಕ್ಐದು ಕಿ.ಮೀ. ದೂರದಲ್ಲಿ ಮಾಣಿಹೊಳೆ (ಅಘನಾಶಿನಿ) ತನ್ನಷ್ಟಕ್ಕೆ ತಾನು ಹರಿದು ಹೋಗುತ್ತದೆ. ಈ ಹೊಳೆಯ ಇಕ್ಕೆಲಗಳ ಅನೇಕ ಗ್ರಾಮಗಳಿಗೆ ಈಗಲೂ ಅವಶ್ಯ ಸೇತುವೆ, ಸಂಪರ್ಕ ರಸ್ತೆಗಳಿಲ್ಲ. ಈ ತೊಂದರೆಯಿಂದ ಬೇಸತ್ತ ಇಲ್ಲಿಯ ಹಾವಿನಬೀಳು, ಹಾಸಗೋಡು, ಕಸ್ಗೆ, ಕಾನ್ಮನೆ ಉಳ್ಳಾಣೆಜಡ್ಡಿ ಜನರು ಇದೇ ವಾರದ ಮೊದಲದಿನ ಮಾಧ್ಯಮ ಪ್ರತಿನಿಧಿಗಳನ್ನು ತಮ್ಮೂರಿಗೆ ಕರೆಸಿ ತಮ್ಮ ಬವಣೆ ಹೇಳಿಕೊಂಡರು.

ಈ ಭಾಗದಲ್ಲಿ ಮೊಬೈಲ್ ಸಂಪರ್ಕ ಇಲ್ಲ, ರಸ್ತೆಗಳಲ್ಲಿ ಮಳೆಗಾಲದಲ್ಲಿ ಓಡಾಡುವುದೇ ಕಷ್ಟ, ಕೆಲವು ಸಮಯದಲ್ಲಂತೂ ಇಲ್ಲಿ ಬೀಳುವ ಮರಗಳನ್ನು ತೆರವುಮಾಡದೆ ದಿನವೀಡಿ ಮಾರ್ಗಮಧ್ಯೆದಲ್ಲೇ ಉಳಿಯುವ ದುಸ್ಥಿತಿ, ಇಂಥ ತೊಂದರೆಯಿಂದಾಗಿ ಈ ಭಾಗದ ಕೆಲವರು ಅನಾರೋಗ್ಯ, ಹೆರಿಗೆ ನೋವು,ಬಾಣಂತನದ ಅವಧಿಯಲ್ಲಿ ಜೀವಬಿಟ್ಟಿದ್ದಾರೆ ಎಂದರು. ಹಾವಿನಬೀಳಿನ ಪ್ರಕಾಶ ಹೆಗಡೆ.

ಮಳೆಗಾಲದಲ್ಲಿ ಇಲ್ಲಿ ಸಂಪರ್ಕ ರಸ್ತೆ, ಸಂಪರ್ಕ ಸಾಧನಗಳದ್ದೇ ಸಮಸ್ಯೆ ನನ್ನ ಹೆರಿಗೆ ಸಮಯದಲ್ಲಿ ಈ ತೊಂದರೆ ಬೇಡ ಎಂದು ಎರಡು ತಿಂಗಳು ಶಿರಸಿಯ ಸಂಬಂಧಿಗಳ ಮನೆಯಲ್ಲಿ ಉಳಿದಿದ್ದೆ, ಅಸಹಾಯಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದೆ ಕಷ್ಟ ಅನುಭವಿಸಬೇಕಾಗುತ್ತದೆ ಈ ತೊಂದರೆ ಬಗ್ಗೆ ಜನಪ್ರತಿನಿಧಿಗಳೂ ಗಮನಹರಿಸದಿರುವುದು ನಮ್ಮ ದುರಂತ ಎನ್ನುತ್ತಾರೆ ಇದೇ ಗ್ರಾಮದ ಶ್ವೇತಾ ಹೆಗಡೆ

ಈಬಗ್ಗೆ ಈಗಾಗಲೇ ಹಲವು ಬಾರಿ ಜಿಲ್ಲಾಡಳಿತದ ವರೆಗೆ ಮನವಿ ಮಾಡಿದ್ದರೂ ಫಲ ಸಿಗಲಿಲ್ಲ ಹಾಗಾಗಿ ಈಗ ಮುಖ್ಯಮಂತ್ರಿಗಳ ವರೆಗೆ ನಿಯೋಗ ಹೋಗಿ ಈ ಸಮಸ್ಯೆ ಬಗೆಹರಿಸಬೇಕಾದ ಅನಿವಾರ್ಯತೆ ನಮಗಿದೆ ಎಂದು ಅಲವತ್ತುಕೊಂಡವರು ಕನ್ನ ನಾಯ್ಕ, ಮಂಜುಗೌಡ.

ಈ ಭಾಗದ ಸಮಸ್ಯೆ ಬಗ್ಗೆ ಮಾಧ್ಯಮಗಳ ಮೂಲಕ ಗಮನಸೆಳೆಯುವ ಪ್ರಯತ್ನ ಮಾಡಿರುವ ಸಿದ್ಧಾಪುರ ತಾಲೂಕಾ ಬಿ.ಎಸ್. ಎನ್.ಡಿ.ಪಿ. ಅಧ್ಯಕ್ಷ ವಿನಾಯಕ ನಾಯ್ಕ ತಾಲೂಕಿನಲ್ಲಿ ರಸ್ತೆ, ಸೇತುವೆಗಳಿಲ್ಲದೆ ಇಂಥ ತೊಂದರೆ ಇರುವ ಅನೇಕ ಗ್ರಾಮಗಳಿವೆ. ಈ ಗ್ರಾಮಗಳ ಸಮಸ್ಯೆ ಬಗೆ ಹರಿಸಲು ತಾಲೂಕಿಗೆ ಕನಿಷ್ಟ 200 ಕೋಟಿಗಳ ವಿಶೇಶ ಅನುದಾನ ಬೇಕು. ಈ ಬಗ್ಗೆ ನಮ್ಮನ್ನಾಳುತ್ತಿರುವ ಕಾಲು ಶತಮಾನಗಳ ಜನಪ್ರತಿನಿಧಿಗಳಿಂದ ಈ ಕೆಲಸ ಸಾಧ್ಯವೆ ಎನ್ನುವ ಅನುಮಾನ ನಮಗೆ ಎನ್ನುತ್ತಾರೆ.

ಹೀಗೆ ತಮ್ಮ ಬವಣೆ, ತೊಂದರೆ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಕಿವಿಯಾಗದೆ ಮಾಧ್ಯಮಗಳ ಮೊರೆ ಹೋಗಿರುವ ಇಲ್ಲಿಯ ಜನರ ನಿತ್ಯ ಸಮಸ್ಯೆ ರಸ್ತೆ, ಸಂಪರ್ಕಮಾಧ್ಯಮಗಳದ್ದು ಈ ಬಗ್ಗೆ ಒಂದು ತಿಂಗಳೊಳಗಾಗಿ ಅವಶ್ಯ ಭರವಸೆ ದೊರೆಯದಿದ್ದರೆ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ಹೋಗುವ ಇವರ ಯೋಚನೆ, ಯೋಜನೆ ಇವರ ಸಮಸ್ಯೆಗೆ ಉತ್ತರ ದೊರಕಿಸಬಹುದೆ ಎನ್ನುವುದೇ ಯಕ್ಷ ಪ್ರಶ್ನೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *