ಮಹಿಳೆಯರಿಗೆ ಉಚಿತ ವೃತ್ತಿ ಪರ ಹೊಲಿಗೆ ತರಬೇತಿ ಶಿಬಿರ

ಆಶಾಕಿರಣ ಟ್ರಸ್ಟ ಮತ್ತು ಲಯನ್ಸ್ ಶತಮಾನೋತ್ಸವ ಸ್ಮರಣೆಯ ವೃತ್ತಿಪರ ತರಬೇತಿ ಕೇಂದ್ರ ಹಾಳದಕಟ್ಟಾ ಸಿದ್ದಾಪುರ (ಉ.ಕ) ದಿಂದ ಮಹಿಳೆಯರಿಗಾಗಿ ಅಕ್ಟೋಬರ 15 ರಿಂದ ಮೂರು ತಿಂಗಳ ಅವಧಿಯ ಉಚಿತ ಹೊಲಿಗೆ ತರಬೇತಿ ಶಿಬಿರ ಏರ್ಪಡಿಸಲಾಗಿದೆ. 18 ರಿಂದ 35 ವಯೋಮಿತಿಯ ಮಹಿಳೆಯರಿಗೆ ಮಾತ್ರ ತರಬೇತಿ ಪಡೆಯಲು ಅವಕಾಶವಿದೆ. ಕೇವಲ 20 ಜನ ಅಭ್ಯರ್ಥಿಗಳಿಗೆ ಅವಕಾಶವಿದ್ದು ಆಸಕ್ತರು ನೋಂದಣೆ ಫಾರ್ಮ ತುಂಬಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 12-10-2020 ರಂದು ಜಗದ್ಗುರು ಮುರುಘ ರಾಜೇಂದ್ರ ಅಂಧ ಮಕ್ಕಳ ಶಾಲೆಯಲ್ಲಿ ಮುಂಜಾನೆ 10-30 ಘಂಟೆಗೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸ ಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಶಿಬಿರದ ಮಾಹಿತಿಗಳನ್ನು ತಿಳಿಸಲಾಗುವದು. ನೋಂದಣಿ ಫಾರ್ಮಗಳನ್ನು ಜಗದ್ಗುರು ಮುರುಘ ರಾಜೇಂದ್ರ ಅಂಧ ಮಕ್ಕಳ ಶಾಲೆಯಲ್ಲಿ ಮುಂಜಾನೆ 11 ಘಂಟೆಯಿಂದ ಅಪರಾಹ್ನ 1 ಘಂಟೆಯ ಒಳಗೆ (ಭಾನುವಾರ ಹೊರತು ಪಡಿಸಿ) ಪಡೆದುಕೊಳ್ಳಬಹುದು.
ಆಸಕ್ತರು ಮಾಹಿತಿಗಾಗಿ ಮತ್ತು ನೋಂದಣಿ ಫಾರ್ಮ ಪಡೆಯಲು ಸಂಪರ್ಕಿಸ ಬೇಕಾದ ವಿಳಾಸ:
ನಾಗರತ್ನ (ಶಿಕ್ಷಕರು, ಜಮುರಾ ಅಂಧ ಮಕ್ಕಳ ಶಾಲೆ)
ಸ್ಥಳ: ಜಗದ್ಗುರು ಮುರುಘ ರಾಜೇಂದ್ರ ಅಂಧ ಮಕ್ಕಳ ಶಾಲೆ, ಹಾಳದಕಟ್ಟಾ, ಸಿದ್ದಾಪುರ

ವಿಶ್ವನಾಥ ಶೇಟ್ ರಿಗೆ ಶೃದ್ಧಾಂಜಲಿ
ಸಿದ್ದಾಪುರ -5 ಕನ್ನಡ ಹಾಗೂ ಕೊಂಕಣಿ ಭಾಷಾ ಸಾಹಿತಿ ವಿಶ್ವನಾಥ ಶೇಟ್ ಹಾರ್ಸಿಕಟ್ಟಾ ರ ನಿಧನದಿಂದ ಸಾಹಿತ್ಯ ಲೊಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಆಕಾಶವಾಣಿ ಮೂಲಕ ಅನೇಕ ಚಿಂತನ, ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮ ನೀಡಿದ್ದರು. ಕೊಂಕಣಿ ಭಾಷೆಯಲ್ಲಿ ರಾಮಚರಿತ ಎಂಬ ಮಹಾಕಾವ್ಯ ರಚಿಸಿದ್ದರು. ಯಕ್ಷಗಾನ ಪ್ರಸಾದನ ಕಲೆ, ಹಾಗೂ ವೇಷ ಭೂಷಣ ತಯಾರಕರಾಗಿದ್ದು ಕಲೆಯನ್ನು ಬೆಳೆಸುವಲ್ಲಿ ಶ್ರಮಿಸಿದ್ದರು. ರಾಜ್ಯ ಯಕ್ಷಗಾನ ಹಾಗೂ ಜಾನಪದ ಅಕಾಡೆಮಿ ಮತ್ತು ಕೊಂಕಣಿ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಇನ್ನೂ ಕೆಲವು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು. ಸರಳ ಸಜ್ಜನಿಕೆಯ ಬರಹಕಾರರು ಕಲಾವಿದರಾಗಿದ್ದ ಅವರ ನಿಧನ ಪ್ರಯುಕ್ತ ತಾಲೂಕಾ ಕನ್ನಡಾ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಬರೆಹಗಾರ ಜಿ.ಜಿ. ಹೆಗಡೆ ಬಾಳಗೋಡ ಶ್ರದ್ಧಾಂಜಲಿ ಕೋರಿದ್ದಾರೆ.
ಶ್ರದ್ಧಾಂಜಲಿ
ಶ್ರೀ ಕೋಡಿಗದ್ದೆ ಮೂಕಾಂಬಿಕಾ ಯಕ್ಷಗಾನ ಕಲಾ ಸಂಘ(ರಿ) ದೊಡ್ಮನೆ ಮತ್ತು ಅಭಿಮಾನಿಗಳೊಂದಿಗೆ ಇತ್ತೀಚೆಗೆ ನಿಧನರಾದ ಶ್ರೀ ವಿಶ್ವನಾಥ ಶೆಟ್ ಹಾರ್ಸಿಕಟ್ಟಾ (ಮೆಣಸಿನ ಮನೆ) ರಿಗೆ ದಿನಾಂಕ: 04-10-2020ರ ಭಾನುವಾರ ಸಂಜೆ 5-00 ಘಂಟೆಗೆ ದೊಡ್ಮನೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು. ಒಂದು ನಿಮಿಷದ ಮೌನಾಚರಣೆಯೊಂದಿಗೆ ಪುಷ್ಮಾನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಂಕರನಾರಾಯಣ ಹೆಗಡೆ ಮಾತನಾಡಿ ವಿಶ್ವನಾಥ ಶೇಟ್ ಮತ್ತು ನಮ್ಮ ಸಂಘದ ಸಂಪರ್ಕ ತೀರಾ ಹತ್ತಿರದಿಂದ ಕೂಡಿದ್ದು ಬಣ್ಣಗಾರಿಕೆಯಲ್ಲಿ ವಿಶೇಷ ಪರಿಣಿತಿಯನ್ನು ಪಡೆದು ಸೇವೆ ಸಲ್ಲಿಸಿದ್ದರೆಂದು ಹೇಳಿದರು.

ಸದಸ್ಯರಾದ ತಿಮ್ಮಪ್ಪ ಭಟ್ಟ ಮಾತನಾಡಿ ಅವರ ಬಣ್ಣಗಾರಿಕಾಕಲೆ ಅಧ್ಯಯನ ಪೂರ್ವಕವಾಗಿ ಶಾಸ್ತ್ರೀಯವಾಗಿ ಅರ್ಥಪೂರ್ಣವಾಗಿ ಕೂಡಿರುತ್ತಿತ್ತೆಂದು ಪ್ರಶಂಸೆ ವ್ಯಕ್ತಪಡಿಸಿದರು. ಕಾರ್ಯದರ್ಶಿ ಕೇಶವ ಹೆಗಡೆ ಮಾತನಾಡಿ ವಿಶ್ವನಾಥ ಶೇಟ್ ರು ಉತ್ತಮ ವಾಗ್ಮಿಗಳು ಮತ್ತು ಕವಿಗಳು ಆಗಿದ್ದರು ಎಂದು ಹೇಳಿದರು ಮತ್ತು ಇತ್ತೀಚೆಗೆ ನಿಧನರಾದ ಶ್ರೀ ಬಾಬುರಾವ್ ಹಣಜಿಬೈಲ್ ಶ್ರೀ ಜಿ. ಜಿ. ಹೆಗಡೆ ತಲೆಕೆರೆ ಇವರು ಕೂಡಾ ಯಕ್ಷಗಾನಕ್ಷೇತ್ರಕ್ಕೆ ತಮ್ಮ ಕೊಡುಗೆಯನ್ನು ನೀಡಿದ್ದನ್ನು ಸ್ಮರಿಸಿಕೊಂಡು ಅವರಿಗೂ ಶೃದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವಸಂತ ಹೆಗಡೆ ಹಳ್ಳಿಬೈಲ್, ಕುಮಾರಿ ವರ್ಷಿಣಿ ಹಳ್ಳಿಬೈಲ್, ಗಣಪತಿ ಶಾಸ್ತ್ರಿ ಬೆಳವಂತೆ, ಕೃಷ್ಣಮೂರ್ತಿ ಭಟ್ಟ ಹಾಜರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *