19ರ ಯುವತಿಯೊಂದಿಗೆ 35 ವರ್ಷದ ಶಾಸಕ ‘ರಹಸ್ಯ’ ವಿವಾಹ, ಯುವತಿಯ ಪೋಷಕರಿಂದ ದೂರು ದಾಖಲು

ತಮಿಳುನಾಡಿನ 35 ವರ್ಷದ ಶಾಸಕರೊಬ್ಬರು 19ರ ಹರೆಯದ ಯುವತಿಯೊಂದಿಗೆ ರಹಸ್ಯ ವಿವಾಹಹವಾಗಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿದೆ.

ವಿಲ್ಲುಪುರಂ: ತಮಿಳುನಾಡಿನ 35 ವರ್ಷದ ಶಾಸಕರೊಬ್ಬರು 19ರ ಹರೆಯದ ಯುವತಿಯೊಂದಿಗೆ ರಹಸ್ಯ ವಿವಾಹಹವಾಗಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿದೆ.

ತಮಿಳುನಾಡಿನ ಕಲ್ಲಕುರಿಚಿ ಕ್ಷೇತ್ರದ ಎಐಎಡಿಎಂಕೆಯ ಶಾಸಕ  ಎ ಪ್ರಭು ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ 19 ವರ್ಷದ ಯುವತಿಯೊಂದಿಗೆ ವಿವಾಹವಾಗಿದ್ದಾರೆ. ಈ ವಿವಾಹ ಇದೇ ಸೋಮವಾರ (ಅಕ್ಟೋಬರ್ 5) ನಡೆದಿದೆ. ಆದರೆ ಇದೊಂದು ಗುಟ್ಟಿನಲ್ಲಿ ನಡೆದ ಮದುವೆ ಎಂದು ಆರೋಪಿಸಿರುವ ಯುವತಿಯ ಕುಟುಂಬ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಯುವತಿಯ  ತಂದೆ ಸ್ವಾಮಿನಾಥನ್ ತನ್ನ ಮಗಳನ್ನು ಅಪಹರಿಸಿ ಬಲವಂತವಾಗಿ ವಿವಾಹ ಮಾಡಿಕೊಳ್ಳಲಾಗಿದೆಎಂದು ಆರೋಪಿಸಿ ಶಾಸಕರ ಮದುವೆ ಮಂಟಪದ ಎದುರೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಈ ಸಂಬಂಧ ಸಂತ್ರಸ್ಥೆಯ ಪೋಷಕರು ತ್ಯಾಗದುರುಗಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ದೂರಿನಲ್ಲಿ ಸ್ವಾಮಿನಾಥನ್ ಶಾಸಕ ಪ್ರಭುವಿನಿಂದ ತಮಗೆ ಕೊಲೆ ಬೆದರಿಕೆ ಇದೆ. ಅಲ್ಲದೆ ಅವರು ಆಡಳಿತ ಪಕ್ಷದ ದೊಡ್ಡ ನಾಯಕರಾಗಿರುವುದರಿಂದ ಯಾರೂ ಅವರಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಹಿಂದೆ ಅದೇ ಶಾಸಕ ಇದೀಗ ವಿವಾಹವಾಗಿರುವ ನನ್ನ ಪುತ್ರಿಯನ್ನೂ ಕೊಲ್ಲುವ ಬೆದರಿಕೆ ಹಾಕಿದ್ದನೆಂದೂ ದೂರಿನಲ್ಲಿ ವಿವರಿಸಲಾಗಿದೆ.

ಇನ್ನು ಇದೊಂದು ಅಂತರ್ಜಾತಿಯ ವಿವಾಹವಾಗಿದೆ. ಆದರೆ ಸಂತ್ರಸ್ಥೆಯ ತಂದೆ “ತಮಗೆ ಜಾತಿಯ ಸಮಸ್ಯೆ ಇಲ್ಲ, ವಯಸ್ಸಿನ ಅಂತರವೇ ಸಮಸ್ಯೆಯಾಗಿದೆ” ಎಂದು ಹೇಳಿದ್ದಾರೆ.

ಕೊರೋನಾವೈರಸ್  ಸಾಂಕ್ರಾಮಿಕ ರೋಗದಿಂದಾಗಿ ಮದುವೆಯನ್ನು ಸರಳವಾಗಿ ನೆರವೇರಿಸಲಾಗಿದೆ.  ಹಾಗಾಗಿ ವಿವಾಹಕ್ಕೆ ಹೆಚ್ಚಿನ ಸಂಖ್ಯೆಯ ಜನರಿಗೆ ಆಹ್ವಾನವಿರಲಿಲ್ಲ ಎಂದು ಶಾಸಕ ಪ್ರಭು ಹೇಳಿದ್ದಾರೆ.

ಮೂಲಗಳ ಪ್ರಕಾರ, ಪ್ರಭು ಮದುವೆಯಾದ ಹುಡುಗಿಯನ್ನು ಒಂದು ದಶಕಕ್ಕೂ ಹೆಚ್ಚು ಕಾಲದಿಂದ ತಿಳಿದವರಾಗಿದ್ದರು.ಮತ್ತು ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಯ ತಂದೆ ಮಾತ್ರ “ಇದೊಂದು ಷಡ್ಯಂತ್ರ” ಎಂದು ಆರೋಪಿಸಿದ್ದಾರೆ. ಇದೀಗ ಈ ವಿವಾಹ ತಮಿಳು ನಾಡಿನಾದಂತ ದೊಡ್ದ ಚರ್ಚೆಗೆ ಆಸ್ಪದ ನೀಡಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *