ಮಕ್ಕಳಿಗಾಗಿ ಹೇಳಿ ಮಾಡಿಸಿದಂತಿರುವ ಗುಡುಂಕಲ್ ಜಲಪಾತ

ಕರೋನಾ, ಅಕಾಲಿಕ ಮಳೆಗಳಿಲ್ಲದಿದ್ದರೆ… ಈ ಅವಧಿಯಲ್ಲಿ ಜಲಪಾತ ನೋಡಿ, ದಣಿದು ಬಸವಳಿಯುವುದಿದೆಯಲ್ಲಾ… ಅದರ ಅನುಭವಕ್ಕೆ ಅದೇ ಸಾಟಿ. ನಮ್ಮ ಜಿಲ್ಲೆಯ ಜಲಪಾತಗಳನ್ನು ಅಲೆದು ಅನುಭವ ಪೇರಿಸಿಕೊಂಡ ಹೊರಗಿನವರಿಗೆ ಹೋಲಿಸಿಕೊಂಡರೆ ನಮಗೆ ಈ ಪ್ರಕೃತಿಯ ಸೊಬಗಿನ ಬಗ್ಗೆ ಮರುಕವೋ? ವಿಸ್ಮೃತಿಯೋ ತಿಳಿಯದ ಗೊಂದಲ.

ಮೊನ್ನೆ ಕೃಷಿ ಅಧಿಕಾರಿ ಪ್ರಶಾಂತ್ ಮಾಹಿತಿ ಆಧರಿಸಿ ಹಂದಿಮನೆಯ ಹೊಳೆಯ ಚಿಕ್ಕ ಜಲಪಾತ ನೋಡಿದಾಗ ಅದೇನೋ ಅಲ್ಹಾದ ಉಂಟಾದಂತಾಯಿತು. ಅಲ್ಲಿ ನಮಗೆ ಸಿಕ್ಕ ಸ್ಥಳಿಯರು ಕಾಣಿಸಿದ ಈ ಗುಡುಂಕಲ್ ಜಲಪಾತಕ್ಯಾದಗಿಯಿಂದ ಕುಮಟಾ ಮಾರ್ಗದಲ್ಲಿ 2 ಕಿ.ಮೀ. ನಂತರ ಹಂದಿಮನೆಯ ಹೊಳೆ ಸೃಷ್ಟಿಸಿರುವ ಸೊಬಗು. ರೈತರು ಈ ಹೊಳೆ ಕಟ್ಟಿ ಒಡ್ಡು ಮಾಡುವ ಸಂಕ್ರಾಂತಿಯ ಮೊದಲು ಕುಟುಂಬ ಸಹಿತ ಹೋಗಿ ನೋಡಿಬರಬಹುದಾದ ಹಂದಿಮನೆ, ಗುಡುಂಕಲ್ ಜಲಪಾತದ ವಿಶೇಷವೆಂದರೆ… ಶ್ರಮವೂ ಬೇಡ, ಅಪಾಯವೂ ಇಲ್ಲ. ಇಂಥ ಜಲಪಾತವನ್ನು ಆ ಭಾಗದ ಎಸ್,ಆರ್. ನಾಯ್ಕ, ಕೆ.ಟಿ. ನಾಯ್ಕರಂಥವರು ಸರ್ವ ಋತು ಜಲಪಾತವನ್ನಾಗಿಸಬಹುದಿತ್ತೇನೋ?ಒಂದು ಬ್ಯಾರೇಜ್ ಮಾದರಿಯ ನೀರು ಸಂಗ್ರಹದ ಚಿಕ್ಕ ಆಣೆಕಟ್ಟೆಮಾಡಿ, ಮಳೆಗಾಲದಲ್ಲಿ ನೀರು ಹರಿಯಬಿಟ್ಟು ಮಳೆಯ ನಂತರ ನೀರು ಸಂಗ್ರಹಿಸಿದರೆ ಜಲಪಾತದ ಸೊಬಗು ವೃದ್ಧಿಸುತ್ತದೆ. ಜೊತೆಗೆ ಈ ಭಾಗದ ರೈತರಿಗೆ ಇದರಿಂದ ಅನುಕೂಲಗಳಾಗಬಹುದು.

ಇದು ಒಂದು ಸಲಹೆಯಾದರೆ ಈಗಿರುವ ಸ್ಥಿತಿಯಲ್ಲೇ ಈ ಜಲಪಾತಕ್ಕೆ ಸಣ್ಣ ರಸ್ತೆ, ಒಂದು ನಾಮಫಲಕ ಇಟ್ಟು ಮಕ್ಕಳಿಗೆ ಜಲಪಾತ ಭೇಟಿ, ವೀಕ್ಷಣೆಗೆ ಅನುಕೂಲ ಮಾಡಿಕೊಟ್ಟರೆ ಮಕ್ಕಳು ಖುಷಿಪಡುತ್ತಾರೆ. ಈ ಬಗ್ಗೆ ನಮ್ಮ ವಿಡಿಯೋದಲ್ಲಿ ವಿವರಿಸಿದ್ದೇನೆ. ಇದೇ ಪಂಚಾಯತ್ ನ ಬುರುಡೆ ಜಲಪಾತದ ತಲೆ-ಬುಡ, ಬುರುಡೆ ಕಾಣದಂತೆ ಪ್ರವಾಸೋದ್ಯಮ ಇಲಾಖೆ ಬುರುಡೆ ಜಲಪಾತದ ಮುಖ ಕಟ್ಟಿದೆ. ಈ ಜಲಪಾತದಲ್ಲಿ ಸಾವು-ನೋವುಗಳಾಗದಂತೆ ತಡೆಯಲು ಅವಶ್ಯ ಕೆಲಸ ಮಾಡುವುದನ್ನು ಬಿಟ್ಟು ಅಪೂರ್ಣ ಮೆಟ್ಟಿಲು ಮಾಡಿ ವೀಕ್ಷಣೆಗೆ ನಿರ್ಬಂಧ ಹೇರಿರುವ ಜಲಪಾತವನ್ನು ನೋಡಲು ಬರುವವರಿಗೆ ನಿರಾಸೆಯಾಗುವಂತೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದು ನಮ್ಮ ನಾಡಿನ ಸೊಬಗನ್ನು ಹೊರಗಿನವರಿಗೆ ಪರಿಚಯಿಸಲು ಶ್ರಮಿಸಬೇಕಾದ ಜನಪ್ರತಿನಿಧಿಗಳು ಈ ಬಗ್ಗೆ ಉಪೇಕ್ಷೆ ಮಾಡುತ್ತಿರುವ ಬಗ್ಗೆ ಪ್ರವಾಸಿಗರೊಂದಿಗೆ ಸ್ಥಳಿಯರೂ ಬೇಸರಿಸಿದರು. ಸಿದ್ಧಾಪುರ, ಉತ್ತರ ಕನ್ನಡದ ಕಾಡು-ಜಲ ಗಳ ಸೊಬಗನ್ನು ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಪಡಿಸಬೇಕಾದ ನಾಯಕತ್ವ ಈ ಜಿಲ್ಲೆಗೆ ಶಾಪ ಎಂದೆನಿಸದೇ ಇರಲಿಲ್ಲ. ಈ ಗುಡುಂಕಲ್ ಮಕ್ಕಳ ಜಲಪಾತ, ಚಾರಿತ್ರಿಕ,ಪರಿಸರ ಮಹತ್ವದ ವಿಶ್ವವಿಖ್ಯಾತ ಬುರುಡೆ ಜಲಪಾತ ಸ್ಥಳಿಯರೊಂದಿಗೆ,ಪ್ರವಾಸಿಗರಿಗೂ ಹತ್ತಿರವಾಗಬೇಕಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *