ಮಕ್ಕಳಿಗಾಗಿ ಹೇಳಿ ಮಾಡಿಸಿದಂತಿರುವ ಗುಡುಂಕಲ್ ಜಲಪಾತ

ಕರೋನಾ, ಅಕಾಲಿಕ ಮಳೆಗಳಿಲ್ಲದಿದ್ದರೆ… ಈ ಅವಧಿಯಲ್ಲಿ ಜಲಪಾತ ನೋಡಿ, ದಣಿದು ಬಸವಳಿಯುವುದಿದೆಯಲ್ಲಾ… ಅದರ ಅನುಭವಕ್ಕೆ ಅದೇ ಸಾಟಿ. ನಮ್ಮ ಜಿಲ್ಲೆಯ ಜಲಪಾತಗಳನ್ನು ಅಲೆದು ಅನುಭವ ಪೇರಿಸಿಕೊಂಡ ಹೊರಗಿನವರಿಗೆ ಹೋಲಿಸಿಕೊಂಡರೆ ನಮಗೆ ಈ ಪ್ರಕೃತಿಯ ಸೊಬಗಿನ ಬಗ್ಗೆ ಮರುಕವೋ? ವಿಸ್ಮೃತಿಯೋ ತಿಳಿಯದ ಗೊಂದಲ.

ಮೊನ್ನೆ ಕೃಷಿ ಅಧಿಕಾರಿ ಪ್ರಶಾಂತ್ ಮಾಹಿತಿ ಆಧರಿಸಿ ಹಂದಿಮನೆಯ ಹೊಳೆಯ ಚಿಕ್ಕ ಜಲಪಾತ ನೋಡಿದಾಗ ಅದೇನೋ ಅಲ್ಹಾದ ಉಂಟಾದಂತಾಯಿತು. ಅಲ್ಲಿ ನಮಗೆ ಸಿಕ್ಕ ಸ್ಥಳಿಯರು ಕಾಣಿಸಿದ ಈ ಗುಡುಂಕಲ್ ಜಲಪಾತಕ್ಯಾದಗಿಯಿಂದ ಕುಮಟಾ ಮಾರ್ಗದಲ್ಲಿ 2 ಕಿ.ಮೀ. ನಂತರ ಹಂದಿಮನೆಯ ಹೊಳೆ ಸೃಷ್ಟಿಸಿರುವ ಸೊಬಗು. ರೈತರು ಈ ಹೊಳೆ ಕಟ್ಟಿ ಒಡ್ಡು ಮಾಡುವ ಸಂಕ್ರಾಂತಿಯ ಮೊದಲು ಕುಟುಂಬ ಸಹಿತ ಹೋಗಿ ನೋಡಿಬರಬಹುದಾದ ಹಂದಿಮನೆ, ಗುಡುಂಕಲ್ ಜಲಪಾತದ ವಿಶೇಷವೆಂದರೆ… ಶ್ರಮವೂ ಬೇಡ, ಅಪಾಯವೂ ಇಲ್ಲ. ಇಂಥ ಜಲಪಾತವನ್ನು ಆ ಭಾಗದ ಎಸ್,ಆರ್. ನಾಯ್ಕ, ಕೆ.ಟಿ. ನಾಯ್ಕರಂಥವರು ಸರ್ವ ಋತು ಜಲಪಾತವನ್ನಾಗಿಸಬಹುದಿತ್ತೇನೋ?ಒಂದು ಬ್ಯಾರೇಜ್ ಮಾದರಿಯ ನೀರು ಸಂಗ್ರಹದ ಚಿಕ್ಕ ಆಣೆಕಟ್ಟೆಮಾಡಿ, ಮಳೆಗಾಲದಲ್ಲಿ ನೀರು ಹರಿಯಬಿಟ್ಟು ಮಳೆಯ ನಂತರ ನೀರು ಸಂಗ್ರಹಿಸಿದರೆ ಜಲಪಾತದ ಸೊಬಗು ವೃದ್ಧಿಸುತ್ತದೆ. ಜೊತೆಗೆ ಈ ಭಾಗದ ರೈತರಿಗೆ ಇದರಿಂದ ಅನುಕೂಲಗಳಾಗಬಹುದು.

ಇದು ಒಂದು ಸಲಹೆಯಾದರೆ ಈಗಿರುವ ಸ್ಥಿತಿಯಲ್ಲೇ ಈ ಜಲಪಾತಕ್ಕೆ ಸಣ್ಣ ರಸ್ತೆ, ಒಂದು ನಾಮಫಲಕ ಇಟ್ಟು ಮಕ್ಕಳಿಗೆ ಜಲಪಾತ ಭೇಟಿ, ವೀಕ್ಷಣೆಗೆ ಅನುಕೂಲ ಮಾಡಿಕೊಟ್ಟರೆ ಮಕ್ಕಳು ಖುಷಿಪಡುತ್ತಾರೆ. ಈ ಬಗ್ಗೆ ನಮ್ಮ ವಿಡಿಯೋದಲ್ಲಿ ವಿವರಿಸಿದ್ದೇನೆ. ಇದೇ ಪಂಚಾಯತ್ ನ ಬುರುಡೆ ಜಲಪಾತದ ತಲೆ-ಬುಡ, ಬುರುಡೆ ಕಾಣದಂತೆ ಪ್ರವಾಸೋದ್ಯಮ ಇಲಾಖೆ ಬುರುಡೆ ಜಲಪಾತದ ಮುಖ ಕಟ್ಟಿದೆ. ಈ ಜಲಪಾತದಲ್ಲಿ ಸಾವು-ನೋವುಗಳಾಗದಂತೆ ತಡೆಯಲು ಅವಶ್ಯ ಕೆಲಸ ಮಾಡುವುದನ್ನು ಬಿಟ್ಟು ಅಪೂರ್ಣ ಮೆಟ್ಟಿಲು ಮಾಡಿ ವೀಕ್ಷಣೆಗೆ ನಿರ್ಬಂಧ ಹೇರಿರುವ ಜಲಪಾತವನ್ನು ನೋಡಲು ಬರುವವರಿಗೆ ನಿರಾಸೆಯಾಗುವಂತೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತಂದು ನಮ್ಮ ನಾಡಿನ ಸೊಬಗನ್ನು ಹೊರಗಿನವರಿಗೆ ಪರಿಚಯಿಸಲು ಶ್ರಮಿಸಬೇಕಾದ ಜನಪ್ರತಿನಿಧಿಗಳು ಈ ಬಗ್ಗೆ ಉಪೇಕ್ಷೆ ಮಾಡುತ್ತಿರುವ ಬಗ್ಗೆ ಪ್ರವಾಸಿಗರೊಂದಿಗೆ ಸ್ಥಳಿಯರೂ ಬೇಸರಿಸಿದರು. ಸಿದ್ಧಾಪುರ, ಉತ್ತರ ಕನ್ನಡದ ಕಾಡು-ಜಲ ಗಳ ಸೊಬಗನ್ನು ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ಪಡಿಸಬೇಕಾದ ನಾಯಕತ್ವ ಈ ಜಿಲ್ಲೆಗೆ ಶಾಪ ಎಂದೆನಿಸದೇ ಇರಲಿಲ್ಲ. ಈ ಗುಡುಂಕಲ್ ಮಕ್ಕಳ ಜಲಪಾತ, ಚಾರಿತ್ರಿಕ,ಪರಿಸರ ಮಹತ್ವದ ವಿಶ್ವವಿಖ್ಯಾತ ಬುರುಡೆ ಜಲಪಾತ ಸ್ಥಳಿಯರೊಂದಿಗೆ,ಪ್ರವಾಸಿಗರಿಗೂ ಹತ್ತಿರವಾಗಬೇಕಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *