ಸಿಗಂದೂರು ಚೌಡೇಶ್ವರಿ ಸರ್ಕಾರದ ವಶಕ್ಕೆ, ಸ್ಥಳಿಯರ ವಿರೋಧ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಮೊದಲು ಮೇಲ್ ಉಸ್ತುವಾರಿ ಸಮಿತಿ ನೇಮಕ ಮಾಡಿ ನಂತರ ಅದನ್ನು ಸರ್ಕಾರದ ನಿಯಂತ್ರಣಕ್ಕೆ ತಂದು ಕೊನೆಗೆ ಅದನ್ನು ವೈದಿಕರ ಮಠ,ಮಂದಿರಕ್ಕೆ ವಹಿಸುವ ಹಿನ್ನೆಲೆಯಲ್ಲಿ ಶೇಷಗಿರಿ ಭಟ್ಟರ ಕುಟುಂಬ ದಾಂಧಲೆ ಎಬ್ಬಿಸಿದ್ದು ಈ ಗಲಾಟೆ ಮೂಲಕ ವೈದಿಕರ ಪರವಾಗಿರುವ ಸರ್ಕಾರ ಶೂದ್ರವಿರೋಧಿ ಕಾರ್ಯಾಚರಣೆ ಅಂಗವಾಗಿ ಗಲಾಟೆ, ದೊಂಬಿ ಮಾಡಿರುವ ಶೇಷಗಿರಿಭಟ್ಟರ ಕುಟುಂಬವನ್ನು ರಕ್ಷಿಸುತ್ತಿರುವುದನ್ನು ನೋಡಿದರೆ ಇವೆಲ್ಲಾ ಪೂರ್ವನಿಯೋಜಿತ ಪುರೋಹಿತಶಾಹಿ ತಂತ್ರಗಳು ಎಂದು ಸ್ಫಷ್ಟವಾಗುತ್ತದೆ ಎಂದು ಆರೋಪಿಸಿರುವ ಕೆಲವು ಸಂಘಟನೆಗಳು ರಾಜ್ಯ ಸರ್ಕಾರ ಬಹುಸಂಖ್ಯಾತ ಹಿಂದುಳಿದವರ ವಿರುದ್ಧ ಕಾರ್ಯಾಚರಿಸುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡುವ ಶಕ್ತಿ ಹಿಂದುಳಿದ ವರ್ಗಗಳು, ಈ ವರ್ಗಗಳ ಸಂಘಟನೆಗಳಿಗಿದೆ ಎಂದಿವೆ.

ವಲಸೆ ವೈದಿಕರು, ಮೂಲನಿವಾಸಿ ಶೂದ್ರರ ಕಾಳಗಕ್ಕೆ ಕಾರಣವಾಗಿದ್ದ ಸಾಗರ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಸರ್ಕಾರ ವಶಕ್ಕೆ ಪಡೆಯುವ ಮೂಲಕ ತನ್ನ ವೈದಿಕ ಪ್ರೇಮ ಮೆರೆದಿದೆ.

ಸಿಗಂದೂರಿನಲ್ಲಿ ಕುಟುಂಬ ಕಲಹ. ಜಾತಿ ಕಲಹ, ಶೂದ್ರ ಅವಿವೇಕತನವನ್ನು ಬಳಸಿಕೊಂಡ ವಲಸೆ ವೈದಿಕರು ದೇವಾಲಯವನ್ನು ನೇರವಾಗಿ ತಮ್ಮ ಹಿಡಿತಕ್ಕೆ ಅಥವಾ ಪರೋಕ್ಷವಾಗಿ ತಮ್ಮ ಹಿಡಿತಕ್ಕೆ ಪಡೆಯಲು ಹವಣಿಸುತಿದ್ದರು. ಈ ಷಡ್ಯಂತ್ರದ ಭಾಗವಾಗಿ ಶೇಷಗಿರಿ ಭಟ್ಟರ ಕುಟುಂಬ ಚೌಡೇಶ್ವರಿ ದೇವಾಲಯದಲ್ಲಿ ಹೊಡೆದಾಡಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದು ಹಳೆ ಕತೆ. ಆದರೆ ಶಾಂತಿ ಕದಡಿದ ಭಟ್ಟರ ಕುಟುಂಬವನ್ನು ಬಂಧಿಸಿ, ಬೆಂಡೆತ್ತುವ ಬದಲು ಸರ್ಕಾರ ರಾಮಪ್ಪರ ನೇತೃತ್ವದ ಆಡಳಿತ ಮಂಡಳಿಯನ್ನು ಅಮಾನತ್ತು ಮಾಡಿ ವೈದಿಕರಿಗೆ ಸಹಕರಿಸಿದೆ. ರಾಮಪ್ಪ ಕುಟುಂಬದ ಶೂದ್ರ ಹುಂಬತನ, ಕೆಲವು ವ್ಯಕ್ತಿಗಳು, ಸಂಘಟನೆಗಳ ಸ್ವಾರ್ಥವನ್ನು ಬಳಸಿಕೊಂಡ ವೈದಿಕರು ಸರ್ಕಾರದ ಮೇಲೆ ಪ್ರಭಾವ ಬೀರಿ ದೇವಸ್ಥಾನದ ಆಡಳಿತ, ಮೇಲುಸ್ತುವಾರಿ ಜವಾಬ್ಧಾರಿಯನ್ನು ಸರ್ಕಾರಕ್ಕೆ ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ವಿರೋಧ ವ್ಯಕ್ತವಾಗಿದ್ದು ಶೂದ್ರರು, ಬಹುಸಂಖ್ಯಾತರ ವಿರುದ್ಧವಿರುವ ರಾಜ್ಯ ಬಿ.ಜೆ.ಪಿ. ಸರ್ಕಾರ ಸ್ಥಳಿಯ ಬಹುಸಂಖ್ಯಾತರಿಗೆ ಅನ್ಯಾಯ ಮಾಡಿದೆ. ಗೋಕರ್ಣ ದೇವಾಲಯ ಆಪೋಶನ ಮಾಡಿ ಸಿಗಂದೂರಿನ ಮೇಲೆ ಕಣ್ಣಿಟ್ಟಿದ್ದ ಹೊಸನಗರ ಮಠ ಮತ್ತವರ ವೈದಿಕ ಪರಿವಾರ ಸಿಗಂದೂರು ವಿವಾದ,ಈ ಬೆಳವಣಿಗೆಗಳಿಗೆ ಕಾರಣವಾಗಿದ್ದು. ಶೂದ್ರವಿರೋಧಿ ವೈದಿಕರ ಸರ್ಕಾರ ಮತ್ತು ಅವರ ಪರಿವಾರದ ವಿರುದ್ಧ ಜನಾಂದೋಲನ ಮಾಡಿ ವಲಸೆ ವೈದಿಕರ ಬಹುಸಂಖ್ಯಾತರ ವಿರೋಧಿ ಸರ್ಕಾರ ಮತ್ತವರ ಬೆಂಬಲಿಗರ ವಿರುದ್ಧ ಹೋರಾಟ ರೂಪಿಸುವುದಾಗಿ ಎಚ್ಚರಿಸಿದೆ. ಸರ್ಕಾರದ ಈ ಕ್ರಮದ ವಿರುದ್ಧ ರಾಜ್ಯ ಬಿ.ಎಸ್. ಎನ್.ಡಿ.ಪಿ., ರಾಷ್ಟ್ರೀಯ ಈಡಿಗ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *