ಐತಿಹಾಸಿಕ ಸಿನಿಮಾ ಮೂಲಕ ರಾಜ್ ವಂಶದ ಮತ್ತೊಂದು ಕುಡಿ ಸ್ಯಾಂಡಲ್ ವುಡ್ ಪ್ರವೇಶ

ಅಣ್ಣಾವ್ರ ಕುಟುಂಬದಿಂದ ಮತ್ತೊಂದು ಕುಡಿ ಸ್ಯಾಂಡಲ್​ವುಡ್​ಗೆ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದೆ. ಇದಕ್ಕೆ ಬೇಕಾದ ಸಕಲ ತಯಾರಿಯೊಂದಿಗೆ ಶೂಟಿಂಗ್ ಕೂಡ ಆರಂಭಿಸಿದೆ.

Yuva rajkumar

ಅಣ್ಣಾವ್ರ ಕುಟುಂಬದಿಂದ ಮತ್ತೊಂದು ಕುಡಿ ಸ್ಯಾಂಡಲ್​ವುಡ್​ಗೆ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದೆ. ಇದಕ್ಕೆ ಬೇಕಾದ ಸಕಲ ತಯಾರಿಯೊಂದಿಗೆ ಶೂಟಿಂಗ್ ಕೂಡ ಆರಂಭಿಸಿದೆ.

ಈಗಾಗಾಲೇ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿ ನಿರೀಕ್ಷೆ ಹುಟ್ಟು ಹಾಕಿದ್ದ ಯುವ-01 ಚಿತ್ರತಂಡ ಇದೀಗ ರಾಜ್ಯೋತ್ಸವದ ಪ್ರಯುಕ್ತ ಚಿತ್ರ ಟೈಟಲ್ ಅನ್ನು ಬಿಡುಗಡೆ ಮಾಡಿದೆ.  

ರಾಘವೇಂದ್ರ ರಾಜ್ ಕುಮಾರ್ ಅವರ ಎರಡನೇ ಪುತ್ರ ಯುವರಾಜ್ ಕುಮಾರ್ ಮೊದಲ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಹುಟ್ಟಿಕೊಂಡಿದೆ. ಅಣ್ಣಾವ್ರ ಮೊಮ್ಮಗನ ಚೊಚ್ಚಲ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದ್ದು, ಕನ್ನಡ ಪ್ರೇಕ್ಷಕರು ಬಹುಪರಾಕ್ ಹಾಕಿದ್ದಾರೆ. 

ಯುವ ಅವರ ಮೊದಲ ಸಿನಿಮಾಗೆ ಪುನೀತ್ ರುದ್ರನಾಗ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರವಿ ಬಸ್ರೂರ್ ಸಂಗೀತ ಟೀಸರ್‌ನಲ್ಲೇ ಸದ್ದು ಮಾಡಿದೆ. ಸಂಕೇಶ್ ಛಾಯಾಗ್ರಹಣ, ಚೇತನ್ ಡಿಸೋಜಾ ಸಾಹಸ ನಿರ್ದೇಶನವಿದೆ.

ಅದು ಕೂಡ ಯುವ ರಾಜ್​ ಕುಮಾರ್​ ಅವರ ಖಡಕ್ ಡೈಲಾಗ್​ಗಳನ್ನೊಳಗೊಂಡ ಭರ್ಜರಿ ಟೀಸರ್ ಮೂಲಕ  ರಾಘವೇಂದ್ರ ರಾಜ್​ ಕುಮಾರ್ ಅವರ ಎರಡನೇ ಮಗ ಯುವ ರಾಜ್​ಕುಮಾರ್ ಅಭಿನಯದ ಮೊದಲ ಚಿತ್ರ ಈ ಹಿಂದೆಯೇ ಸೆಟ್ಟೇರಿತ್ತು. ಆದರೆ ಚಿತ್ರದ ಟೈಟಲ್ ಮತ್ತು ಪಾತ್ರದ ಬಗ್ಗೆ ಚಿತ್ರತಂಡ ಯಾವುದೇ ಸುಳಿವು ನೀಡಿರಲಿಲ್ಲ. ಇದೀಗ 5 ನಿಮಿಷಗಳ ಟೀಸರ್ ಮೂಲಕ ‘ಯುವ ರಣಧೀರ ಕಂಠೀರವ’ನ ಎಂಟ್ರಿ ಝಲಕ್ ತೋರಿಸಿದ್ದಾರೆ.  

ಭರ್ಜರಿ ಡೈಲಾಗ್ ಮತ್ತು ಜಬರ್‌ದಸ್ತ್ ಫೈಟ್​ನ್ನು ಟೀಸರ್​ನಲ್ಲಿ ತೋರಿಸಲಾಗಿದ್ದು, ಇದರೊಂದಿಗೆ ‘ಯುವ ರಣಧೀರ ಕಂಠೀರವ’ ಚಿತ್ರವು ಐತಿಹಾಸಿಕ ಕಥಾ ಹಂದರ ಹೊಂದಿರಲಿದೆ ಎಂಬುದು ಬಹಿರಂಗವಾಗಿದೆ. ಯುವ ರಾಜ್​ಕುಮಾರ್ ಅವರ ಚೊಚ್ಚಲ ಚಿತ್ರದ ಟೀಸರ್​ ಬಿಡುಗಡೆಯನ್ನು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್​ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ಕುಮಾರ್ ಸೇರಿದಂತೆ ಕುಟುಂಬ ವರ್ಗ ಭಾಗಿಯಾಗಿ ಹರಸಿದರು.

ಚಿತ್ರಕಥೆ ಮತ್ತು ಸಂಭಾಷಣೆ ಬರೆಯಲು ಆರು ತಿಂಗಳ ಸಮಯಾವಕಾಶ ಬೇಕಾಗಿದೆ ಎಂದು ನಿರ್ದೇಶಕ ಪುನೀತ್ ತಿಳಿಸಿದ್ದಾರೆ, 2021 ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಶೂಟಿಂಗ್ ಆರಂಭಿಸುವುದಾಗಿ ಚಿತ್ರತಂಡ ತಿಳಿಸಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *