ಹೊರಗಿನ ಕಳ್ಳರನ್ನು ನಿಯಂತ್ರಿಸುವುದೇ ಸವಾಲು, ಪರಸ್ಥಳದ ಜನರ ಬಗ್ಗೆ ಇರಲಿ ಎಚ್ಚರ

ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳ್ಳತನ, ಬೆಟ್ಟಿಂಗ್ ವ್ಯವಹಾರ ನಡೆಯುತ್ತಿರುವ ಬಗ್ಗೆ ದೂರುಗಳಿವೆ. ಹೊರ ಊರಿನ ಜನರಿಂದ ಕಳ್ಳತನ, ಸ್ಥಳಿಯರ ಬೆಟ್ಟಿಂಗ್ ವ್ಯವಹಾರ ಇವುಗಳ ನಡುವೆ ಪರಸ್ಪರ ಸಂಬಂಧ ಇರುವ ಬಗ್ಗೆ ಇತ್ತೀಚೆಗೆ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಜೆ.ಡಿ.ಎಸ್. ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸಿದ್ಧಾಪುರದ ಶಿಕ್ಷಕರ ಸೌಹಾರ್ದ ಸಹಕಾರಿ ಸಂಘದಲ್ಲಿ ನಡೆದ ಕಳ್ಳತನದ ಹಿಂದೆ ಇಂಥ ಕಾರಣಗಳಿರಬಹುದೆಂದು ಚರ್ಚೆ ನಡೆಯುತ್ತಿದೆ.

ಅಂತರ ಜಿಲ್ಲಾ ಮನೆ ಕಳ್ಳನ ಬಂಧನ ಹಾಗೂ 05 ಲಕ್ಷ ರೂ ಕಿಮ್ಮತ್ತಿನ ಬಂಗಾರದ, ಬೆಳ್ಳಿಯ ಆಭರಣ, ನಗದು ಹಣ ಜಪ್ತಿ

ಮುಂಡಗೋಡ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದ 02 ವರ್ಷಗಳಿಂದ ರಾತ್ರಿ ವೇಳೆಯಲ್ಲಿ ಮನೆಯ ಜನರು ಮಲಗಿರುವಾಗಲೇ ಮನೆಯ ಹಿಂದಿನ ಬಾಗಿಲನ್ನು ದೂಡಿ ಚಿಲಕ ತೆಗೆದು ಮನೆಯ ಒಳಗೆ ಪ್ರವೇಶಿಸಿ ಮನೆ ಕಳ್ಳತನ ಮಾಡುತ್ತಿದ್ದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು. ದಿನಾಂಕ : 19-10-2020 ರಂದು ಮುಂಡಗೋಡ ಠಾಣಾ ವ್ಯಾಪ್ತಿಯ ಮೈನಳ್ಳಿಯಲ್ಲಿ ಒಂದೇ ದಿನ ಎರಡು ಮನೆ ಕಳ್ಳತನವಾಗಿದ್ದು ಆರೋಪಿಯು ಕಳುವು ಮಾಡುವಾಗ ಮನೆಯ ಜನರು ಎಚ್ಚರವಾಗಿ ಅವನನ್ನು ಬೆನ್ನು ಹತ್ತಿ ಹಿಡಿಯಲು ಪ್ರಯತ್ನಿಸಿದರಾದರೂ ಆರೋಪಿಯು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದನು. ಅದರಂತೆ ಕೂಡಲೇ ಕಾರವಾರ ಜಿಲ್ಲಾ ಮಾನ್ಯ ಎಸ್.ಪಿ. ಸಾಹೇಬರು, ಮಾನ್ಯ ಹೆಚ್ಚುವರಿ ಎಸ್.ಪಿ. ಸಾಹೇಬರು ಮತ್ತು ಮಾನ್ಯ ಶಿರಸಿ ಡಿ.ಎಸ್.ಪಿ. ರವರು ಮುಂಡಗೋಡ ಠಾಣಾ ಪೊಲೀಸ್ ನಿರೀಕ್ಷಕರ ನೇತ್ರತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಆರೋಪಿಯನ್ನು ಪತ್ತೆ ಹಚ್ಚಲು ಬಲೆ ಬೀಸಲಾಗಿತ್ತು. ದಿನಾಂಕ 27-10-2020 ರಂದು ಆರೋಪಿಯನ್ನು ಪತ್ತೆ ಹಚ್ಚಿದ್ದು ಅವನು ವಿಚಾರಣೆಯಲ್ಲಿ 2018 ರಿಂದ ಇಲ್ಲಿಯವರೆಗೆ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದನು. ಇಂದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಅವನಿಂದ ಕಳವು ಮಾಡಿದ ಬಂಗಾರದ ಆಭರಣಗಳು ಸುಮಾರು 70 ಗ್ರಾಂ ಅ||ಕಿ|| 3,50,000 ರೂಪಾಯಿ ಹಾಗೂ ಬೆಳ್ಳಿಯ ಆಭರಣಗಳು ಸುಮಾರು 200 ಗ್ರಾಂ ಅ||ಕಿ|| 15,000 ರೂಪಾಯಿ ಹಾಗೂ 31,000 ರೂ ನಗದು ಹಣ ಹೀಗೆ ಒಟ್ಟು 5 ಲಕ್ಷ ರೂ ಕಿಮ್ಮತ್ತಿನ ಬಂಗಾರದ ಆಭರಣಗಳು, ಬೆಳ್ಳಿಯ ಆಭರಣಗಳು ಹಾಗೂ ನಗದು ಹಣವನ್ನು ಜಪ್ತಪಡಿಸಿಕೊಳ್ಳಲಾಗಿದೆ.

ಕಾರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಶಿವಪ್ರಕಾಶ ದೇವರಾಜು. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಎಸ್. ಬದರಿನಾಥ, ಮತ್ತು ಶಿರಸಿ ಡಿ.ಎಸ್.ಪಿ. ಶ್ರೀ ಜಿ. ಟಿ. ನಾಯಕ ರವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಪ್ರಭುಗೌಡ. ಡಿ. ಕೆ, ಮಹಿಳಾ ಪಿ.ಎಸ್.ಐ. ಶ್ರೀಮತಿ ಮೋಹಿನಿ ಶೆಟ್ಟಿ. ಪಿ.ಎಸ್.ಐ. ಶ್ರೀ ಬಸವರಾಜ ಮಬನುರ, ಎ.ಎಸ್.ಐ. ಅಶೋಕ ರಾಠೋಡ, ಎ.ಎಸ್.ಐ. ಶ್ರೀ ಖೀರಪ್ಪಾ ಘಟಕಾಂಬಳೆ, ಎ.ಎಸ್.ಐ. ಶ್ರೀ ಶೇಡಜಿ ಚವ್ಹಾಣ ಹಾಗೂ ಸಿಬ್ಬಂದಿಯವರಾದ ಧರ್ಮರಾಜ ನಾಯ್ಕ, ರಾಘವೇಂದ್ರ ನಾಯ್ಕ, ಭಗವಾನ ಗಾಂವಕರ, ವಿನೋದಕುಮಾರ, ಜಿ. ಬಿ. ಅರುಣ ಬಾಗೇವಾಡಿ, ಶರತ ದೇವಳಿ, ತಿರುಪತಿ ಚೌಡಣ್ಣವರ, ವಿವೇಕ ಪಟಗಾರ ಇವರು ಆರೋಪಿಯನ್ನು ಹಿಡಿದು ಹಲವು ವರ್ಷಗಳಿಂದ ಆದ ಮನೆಕಳ್ಳತನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಕಾರ್ಯವನ್ನು ಮಾನ್ಯ ಕಾರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿರುತ್ತಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *