what are the spl things in siddapur-ಸಿದ್ಧಾಪುರ ಪ.ಪಂ. ಗೆ ಚಂದ್ರಕಲಾ ಅಧ್ಯಕ್ಷೆ,ರವಿಕುಮಾರ್ ಉಪಾಧ್ಯಕ್ಷ

ಸಿದ್ದಾಪುರ:   ಇಲ್ಲಿಯ  ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಬಿಜೆಪಿಯ ಎರಡನೇ ವಾರ್ಡ್ ನ ಸದಸ್ಯೆ ಚಂದ್ರಕಲಾ ಸುರೇಶ್ ನಾಯ್ಕ 6ನೇ ವಾರ್ಡ್ ನ ಸದಸ್ಯ ರವಿಕುಮಾರ್  ನಾಯ್ಕ ಕ್ರಮವಾಗಿ ಅಧ್ಯಕ್ಷ ಉಪಾಧ್ಯಕ್ಷರಾಗಿ ರಾಗಿ ಆಯ್ಕೆಯಾಗಿದ್ದಾರೆ. 

ಪ.ಪಂ. ಗೆ ಚುನಾವಣೆ ಯಾಗಿ ಒಂದು ವರ್ಷದ ನಂತರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಕಾರ್ಯ ನಡೆಯಿತು. 14 ಸದಸ್ಯರನ್ನು ಹೊಂದಿರುವ ಬಿಜೆಪಿ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಿತು. ಚುನಾವಣೆಯ ಪೂರ್ವದಲ್ಲಿ ಸಾಮಾನ್ಯ ವರ್ಗದ ಪುರುಷ ಮೀಸಲಾತಿ  ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗದ ಮಹಿಳೆ ಮೀಸಲಾತಿ ಬಂದಿತ್ತು ಆದರೆ  ಬದಲಾದ ಸನ್ನಿವೇಶದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪುರುಷ  ಮೀಸಲಾತಿ ಪ್ರಕಟವಾಗಿತ್ತು. ಮೀಸಲಾತಿಯ ಬದಲಾವಣೆಯಿಂದಾಗಿ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು ನಂತರ. ಯಥಾಪ್ರಕಾರ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಸಾಮಾನ್ಯ ಪುರುಷ ಮೀಸಲಾತಿ ಪ್ರಕಟವಾಯಿತು. ನವೆಂಬರ್ 10ರ ಒಳಗೆ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಚಂದ್ರಕಲಾ ನಾಯ್ಕ   ಯಶೋದ ಮಡಿವಾಳ್  ಮಂಜುಳಾ ನಾಯ್ಕ ಅಧ್ಯಕ್ಷ ಪದವಿಯ ಆಕಾಂಕ್ಷಿಯಾಗಿದ್ದರು, ಮಾಜಿ    ಸ್ಥಾಯಿ  ಸಮಿತಿ ಮಾಜಿ ಅಧ್ಯಕ್ಷ ಮಾರುತಿ ನಾಯಕ್  ರವಿ ನಾಯಕ್, ವಿನಯ್ ಹೊನ್ನೆಗುಂಡಿ,  ಉಪಾಧ್ಯಕ್ಷ ಪದವಿಯ ಆಕಾಂಕ್ಷಿಯಾಗಿದ್ದರು. ಇದೇ ನವೆಂಬರ್ ಏಳರಂದು ಜಿಲ್ಲಾ ಕೋರ್ ಕಮಿಟಿ ಸಭೆ ಬಾಲಭವನದಲ್ಲಿ ನಡೆದು ಪಟ್ಟಣ ಪಂಚಾಯತ್ ಸದಸ್ಯರು ಮುಖಂಡರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಾಗಿತ್ತು ಆದರೆ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕೆ ಜಿ ನಾಯ್ಕ ತೀರ್ಮಾನವೇ ಅಂತಿಮ ಎಂದು  ಎಲ್ಲಾ ಸದಸ್ಯರು ಅಭಿಪ್ರಾಯಪಟ್ಟಿದ್ದರು ಎನ್ನಲಾಗಿದೆ.

ಅದರಂತೆ ಇಂದು ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ಎರಡನೇ ವಾರ್ಡ್ ಸದಸ್ಯ ಚಂದ್ರಕಲಾ ಸುರೇಶ್ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ 6ನೇ ವಾರ್ಡ್ನ ಸದಸ್ಯ ರವಿ ಕುಮಾರ್ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಅಧ್ಯಕ್ಷೆಯಾಗಿ ಆಯ್ಕೆಯಾದ ಚಂದ್ರಕಲಾ ನಾಯ್ಕ ಮಾತನಾಡಿ ಆಯ್ಕೆ ಮಾಡಿದ್ದಕ್ಕೆ ಎಲ್ಲಾ ಸದಸ್ಯರಿಗೂ ಅಭಿನಂದನೆ ಸಲ್ಲಿಸಿದರು ಉಪಾಧ್ಯಕ್ಷರಾಗಿ ಆಯ್ಕೆಯಾದ ರವಿ ನಾಯ್ಕ ರವರು ಮಾತನಾಡಿ ಹಿರಿಯ ಸದಸ್ಯರು ಸಹಾಯ ಹಾಗೂ ಮಾರ್ಗದರ್ಶನದೊಂದಿಗೆ ಆಡಳಿತವನ್ನು ನಡೆಸುತ್ತೇವೆ ಎಂದರು. ತಹಶಿಲ್ದಾರರ ಮಂಜುಳಾ ಭಜಂತ್ರಿ ಚುನಾವಣಾ ಪ್ರಕ್ರಿಯೆ ನಡೆಸಿದರು.

sdp spl-https://www.youtube.com/watch?v=VIM4Lqp_4pY

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *