ನ.12 ರಂದು ಬಿಳಗಿ ಕಾಲೇಜಿಗೆ ಬೀಳಲಿದೆ ಬೀಗ,ನ. 17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜುಗಳ ಆರಂಭ

ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಿಳಗಿ ಜ್ಞಾನ ಸಾಗರ ಕಾಲೇಜಿಗೆ ಬೀಗ ಜಡಿಯಲು ಹಳೆಯ ವಿದ್ಯಾರ್ಥಿಗಳು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇತ್ತೀಚೆಗೆ ಸಿದ್ಧಾಪುರ ತಹಸಿಲ್ಧಾರರಿಗೆ ಮನವಿ ನೀಡಿರುವ ಜಿ.ಪಂ. ಮಾಜಿ ಸದಸ್ಯ ವಿ.ಎನ್.ನಾಯ್ಕ, ಪದ್ಮಾಕರ ಕಲ್ಕಣಿ, ಜಿ.ಕೆ.ನಾಯ್ಕ ಕೋಲಶಿರ್ಸಿ ಸೇರಿದ ಕೆಲವರು ಬಿಳಗಿ ಜ್ಞಾನಸಾಗರ ಕಾಲೇಜಿನ ಆಡಳಿತ ಮಂಡಳಿಯ ದುರಾಡಳಿತ,ಅವ್ಯವಸ್ಥೆ, ಅಕ್ರಮ ವ್ಯವಹಾರಗಳನ್ನು ಖಂಡಿಸಿ ಕಾಲೇಜಿಗೆ ಬೀಗ ಜಡಿಯುವ ಮೂಲಕ ಪ್ರತಿಭಟಿಸುವುದಾಗಿ ತಿಳುವಳಿಕೆ ನೀಡಲಾಗಿದೆ.

ರಾಮ ದೇವರ ಗರ್ಭಗುಡಿಗೆ ಶಿಲಾ ಬಾಗಿಲು ಸ್ಥಾಪನೆ
ಸಿದ್ದಾಪುರ. ತಾಲೂಕಿನ ಭುವನಗಿರಿ ಸಮೀಪದ ಹೊಸಳ್ಳಿಯಲ್ಲಿ ಜೀರ್ಣವಾಗಿರುವ ದೇವಸ್ಥಾನಕ್ಕೆ ಹೊಸ ಕಟ್ಟಡ ನಿರ್ಮಾಣದ ಕಾರ್ಯ ನಡೆಯುತ್ತಿದ್ದು, ಅದರ ಗರ್ಭಗುಡಿಯ ಪ್ರಧಾನ ಬಾಗಿಲನ್ನು ಇತ್ತೀಚೆಗೆ ಸ್ಥಾಪಿಸಲಾಯಿತು. ವೈದಿಕ ವಿದ್ವಾಂಸರಾದ ಶ್ರೀಧರ ಭಟ್ಟ ಬಡಾಳ ನಿರ್ದೇಶನದಲ್ಲಿ ಬಾಗಿಲಿಗೆ ಪೂಜೆ ಸಲ್ಲಿಸಿ ಸ್ಥಾಪನೆಮಾಡಲಾಯಿತು. ಶಿಲೆಯಲ್ಲಿ ಕೊರೆದ ಈ ಬಾಗಿಲನ್ನು ಈಶ್ವರ ನಾರಾಯಣ ನಾಯ್ಕ ಬೇಡ್ಕಣಿ ದಂಪತಿಗಳು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದರು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ ರಾಮಾ ನಾಯ್ಕ, ಕಟ್ಟಡ ಸಮಿತಿಯ ಅಧ್ಯಕ್ಷ ಮಹಾಬಲೇಶ್ವರ ರಾಮಾ ನಾಯ್ಕ ನೀರಗುಡಿ, ಎರಡೂ ಸಮಿತಿಗಳ ಪದಾಧಿಕಾರಿಗಳು, ವಿ.ಎಂ.ಭಟ್ಟ ಡೊಂಬೆಕೈ ದಂಪತಿಗಳು, ಊರಿನ ನಾಗರಿಕರು ಉಪಸ್ಥಿತರಿದ್ದರು.

ನ. 17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜುಗಳ ಆರಂಭ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಪುನರಾರಂಭಿಸಲಾಗುತ್ತಿದ್ದು…

A worker sanitises a class room at a college as authorities have allowed for the reopening of educational institutes in a graded manner.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಪುನರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ಸೋಮವಾರ ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸರ್ಕಾರಿ, ತಾಂತ್ರಿಕ, ಡಿಪ್ಲೊಮೋ, ಅನುದಾನಿತ, ಅನುದಾನರಹಿತ ಕಾಲೇಜು, ವಿಶ್ವವಿದ್ಯಾಲಯ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳಿಗೆ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆಫ್‌ಲೈನ್‌ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಎಸ್‌ಒಪಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಸೂಚನೆಗಳಿದ್ದು, ಅವುಗಳ ಪ್ರಕಾರವೇ ತರಗತಿಗಳು ನಡೆಯುತ್ತವೆ. ಹಾಗೆಯೇ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ನಿಗದಿತ ಸೂಚನೆಗಳಿವೆ ಎಂದು ತಿಳಿಸಿದ್ದಾರೆ.

ನ. 17ರಿಂದ ಭೌತಿಕ ತರಗತಿಗಳು ಆರಂಭಗೊಳ್ಳಲಿದೆ. ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಅವರ ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಹಾಕಿದ ಒಪ್ಪಿಗೆ ಪತ್ರ ಸಲ್ಲಿಸಬೇಕು.

ತರಗತಿಗಳಲ್ಲಿ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಮತ್ತು ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ಕೊಠಡಿಗಳ ಅನುಸಾರ, ದೈಹಿಕ ಅಂತರ ಕಾಪಾಡಿಕೊಂಡು ತರಗತಿ ವೇಳಾಪಟ್ಟಿ ಸಿದ್ಧಪಡಿಸಬೇಕು ಎಂದು ಸೂಚಿಸಲಾಗಿದೆ.

ಬೋಧನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಅವಶ್ಯಕವಿದ್ದಲ್ಲಿ ಪಾಳಿ ವ್ಯವಸ್ಥೆಯ (shift system) ಮೇರೆಗೆ ನಡೆಸುವುದು.

ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸುವುದು. ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಯಸಿದ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಪ್ರತಿ ದಿನವು ಭೌತಿಕ ಸಂಪರ್ಕ ತರಗತಿಗಳನ್ನು (Contact Classes) ನಡೆಸುವುದು. 

ಸಂಪರ್ಕ ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯಕವಿರುವಂತೆ ತರಗತಿ ವೇಳಾ ಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ  ಸಿದ್ದಪಡಿಸಿಕೊಳ್ಳುವುದು.

ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಒಂದು ತಿಂಗಳ  ಅಧ್ಯಯನ  ಸಾಮಗ್ರಿಗಳನ್ನು ಪ್ರತಿ Period/ Sessionಗೆ ಸಂಬಂಧಿಸಿದಂತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ವಾಟ್ಸಾಪ್/ಇ-ಮೇಲ್ ಮೂಲಕ ಕಡ್ಡಾಯವಾಗಿ ನೀಡುವುದು. ಅಧ್ಯಯನ ಸಾಮಗ್ರಿಗಳು Video Lectures, PowerPoint Presentations, E-Notes, E-Books, Audio Books ಮತ್ತು Practice Questions ಇತ್ಯಾದಿಗಳ ರೂಪದಲ್ಲಿ ಇರತಕ್ಕದ್ದು. ಸದರಿ ಅಧ್ಯಯನ ಸಾಮಗ್ರಿಗಳನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್‌ ಮಾಡತಕ್ಕದ್ದು.

ಇತರೆ ಮಾರ್ಗಸೂಚಿಗಳು
ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯಸಾಮಾಗ್ರಿಗಳನ್ನು ಸ್ಯಾನಿಟೈಸ್ ಮಾಡಿಸುವುದು.

ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿ ಕಡ್ಡಾಯವಾಗಿ 3 ದಿನಗಳ ಮುಂಚೆ ಕೋವಿಡ್-19 (RTPCR)‌ ಪರೀಕ್ಷೆಯನ್ನು ಮಾಡಿಕೊಂಡು Test Report Negative ಇದ್ದಲ್ಲಿ ಮಾತ್ರ ವಿ‍ಶ್ವವಿದ್ಯಾಲಯ / ಕಾಲೇಜುಗಳಿಗೆ ಹಾಜರಾಗುವುದು.

ಎಲ್ಲಾ ಕಾಲೇಜುಗಳು ತಮ್ಮ ತಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗೊಂದಿಗೆ  Mapping ಮಾಡಿಕೊಳ್ಳವುದು.

ಪ್ರತಿ ತರಗತಿಯಿಂದ ಒಬ್ಬ ವಿದ್ಯಾರ್ಥಿಯನ್ನು ಗುರುತಿಸಿ ತನ್ನ ಸಹಪಾಠಿಗಳಲ್ಲೇನಾದರು ಕೋವಿಡ್‌ ಗೆ ಸಂಬಂಧಿಸಿದ ಲಕ್ಷಗಳನ್ನು ಕಂಡುಬಂದಲ್ಲಿ ಅದನ್ನು ಕೋವಿಡ್‌ ಕಾರ್ಯಪಡೆ / ಸೆಲ್‌ ಗಮನಕ್ಕೆ ತರುವಂತೆ ಸೂಚಿಸುವುದು.

ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರನ್ನು ಸ್ವತ: ತಂದು ಅವರೇ ಉಪಯೋಗಿಸುವುದು.

ಉಪನ್ಯಾಸಕರು ಕಡ್ಡಾಯವಾಗಿ ಮಾಸ್ಕ್‌ ಮತ್ತು Face Shield/ Visor ಅನ್ನು ಧರಿಸುವುದು. ಕಾಲೇಜುಗಳಲ್ಲಿ ಲೈಬ್ರರಿ ಮತ್ತು ಕ್ಯಾಂಟೀನ್‌ಗಳನ್ನು ತೆರೆಯುವಂತಿಲ್ಲ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಎನ್‌.ಸಿ.ಸಿ ಹಾಗೂ ಎನ್‌.ಎಸ್‌.ಎಸ್‌  ಚಟುವಟಿಕೆಗಳನ್ನು ಪ್ರಾರಂಭಿಸುವಂತಿಲ್ಲ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *