ಕಾಡೆಮ್ಮೆ ಸಾವು- ನಾಟಕ, ಅಂಬಳಿಕೆಯಲ್ಲಿ ಈ ವರ್ಷ ವರ್ಷತೊಡಕಿನ ಪೂಜೆ ಇಲ್ಲ.

ಸಿದ್ಧಾಪುರ ತಾಲೂಕಿನ ಅರೆಂದೂರಿನಲ್ಲಿ ಕಾಡುಎಮ್ಮೆಯೊಂದರ ಶವ ಪತ್ತೆಯಾಗಿದ್ದು,ಸ್ಥಳಿಯ ಅರಣ್ಯಾಧಿಕಾರಿಗಳು ಅಂತಿಮವಿಧಿ ಪೂರೈಸಿದ್ದಾರೆ. 6 ವರ್ಷದ ಈ ಕಾಡೆಮ್ಮೆ ಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಸ್ಥಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ರಂಗ ಸೌಗಂಧ ಸಿದ್ದಾಪುರ ದಿಂದ ಗಳೆಯರ ಬಳಗ ಹಾಗೂ ಗಜಾನನೋತ್ಸವ ಸಮಿತಿ ಆಶ್ರಯದಲ್ಲಿ ದೇವಿಯ ದೀವಿಗೆ ಐತಿಹಾಸಿಕ ನಾಟಕ ಮಂಗಳವಾರ ಪ್ರದರ್ಶನಗೊಂಡಿತು.
ಟಿಎಸ್‍ಎಸ್‍ನ ಮಾಜಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಕಾರ್ಯಕ್ರಮ ಉದ್ಘಾಟಿಸಿ ಕರೊನಾ ಮಾರಕ ಸಾಂಕ್ರಮಿಕ ರೋಗ ವಿಶ್ವದ ಎಲ್ಲ ಕಡೆ ಹರಡಿದ್ದರಿಂದ ವಿವಿಧ ಕಲಾ ಸಂಘಟನೆಗಳು ಹಾಗೂ ಕಲಾವಿದರು ಸಂಕಷ್ಟ ಅನುಭವಿಸುವಂತಾಗಿ ಈಗ ಸ್ವಲ್ಪ ಮಟ್ಟಿಗೆ ಉಸಿರಾಡುವಂತಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಪಾಲ್ಗೊಳ್ಳುವುದಕ್ಕೆ ಅವಕಾಶ ಇಲ್ಲದ್ದರಿಂದ ಇಂದಿನ ತಾಂತ್ರಿಕ ದಿನದ ಉಪಯೋಗದ ಮೂಲಕ ನಾಟಕವನ್ನು ಲೈವ್ ಆಗಿ ನೋಡುವುದಕ್ಕೆ ಅವಕಾಶ ನೀಡಿರುವುದು ಪ್ರಸ್ತುತ ದಿನದಲ್ಲಿ ಅತ್ಯವಶ್ಯವಾಗಿದೆ.ರಂಗ ಸೌಗಂಧ ತಂಡ ಪ್ರತಿ ವರ್ಷ ಉತ್ತಮ ನಾಟಕ ಆಯ್ದುಕೊಂಡು ಪ್ರದರ್ಶನ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.
ಅಘನಾಶಿನಿ ಸಾಂಬಾರು ಮಂಡಳಿ ಅಧ್ಯಕ್ಷ ಎಸ್.ಆರ್.ಹೆಗಡೆ ಕುಂಬಾರಕುಳಿ,ವರ್ತಕ ಅನಂತ ಶಾನಭಾಗ ಉಪಸ್ಥಿತರಿದ್ದರು. ನಂತರ ರಂಗಸೌಗಂಧ ತಂಡದವರಿಂದ ಎಸ್.ವಿ.ಹೆಗಡೆ ಮಗೇಗಾರ ರಚನೆಯ ಗಣಪತಿ ಹೆಗಡೆ ಹುಲಿಮನೆ ನಿರ್ದೇಶನದ ದೇವಿಯ ದೀವಿಗೆ ನಾಟಕ ಪ್ರದರ್ಶನಗೊಂಡಿತು. ರಂಗದಲ್ಲಿ ಗಣಪತಿ ಹೆಗಡೆ ಗುಂಜಗೋಡ, ರಾಜಾರಾಮ ಭಟ್ಟ ಹೆಗ್ಗಾರಳ್ಳಿ, ನಾಗಪತಿ ಭಟ್ಟ ವಡ್ಡಿನಗದ್ದೆ, ಅಜಿತ್ ಭಟ್ಟ ಹೆಗ್ಗಾರಳ್ಳಿ, ರಾಮ ಅಂಕೋಲೇಕರ, ಪ್ರವೀಣಾ ಹೆಗಡೆ ಗುಂಜಗೋಡ, ಶಮಂತ ಶಿರಳಗಿ,ಐ.ಕೆ.ಸುಂಗೊಳ್ಳಿಮನೆ,ಕು.ಪ್ರಥಮ ರಾಜು ಭಟ್ಟ,ಕು.ದೀಕ್ಷಾ ಹೆಗಡೆ, ಕು.ಪಂಚಮಿ ಎನ್.ಭಟ್ಟ, ಕು.ಶಕ್ತಿಧರ ಯು.ಭಟ್ಟ, ಕು.ಮಾನಸ ಹೆಗಡೆ, ಕು.ಸಂಪತ್ ಡಿ.ಭಟ್ಟ ಇವರು ವಿವಿಧ ಪಾತ್ರ ನಿರ್ವಹಿಸಿದರು.
ಶ್ರೀಪಾದ ಹೆಗಡೆ ಕೋಡನಮನೆ ವಿನ್ಯಾಸ,ರಾಜೇಂದ್ರ ಕೊಳಗಿ,ಜಯರಾಮ ಭಟ್ಟ ಹೆಗ್ಗಾರಳ್ಳಿ ಸಂಗೀತ, ನಾಗರಾಜ ಭಂಡಾರಿ ಹಾಗೂ ಉದಯ ಶಿರಸಿ ಇವರು ಧ್ವನಿ ಹಾಗೂ ಬೆಳಕಿನಲ್ಲಿ ಸಹಕರಿಸಿದರು.
ಶ್ರೀಪಾದ ಹೆಗಡೆ ಹಾಗೂ ರಂಗನಿರ್ದೇಶಕ ಗಣಪತಿ ಹೆಗಡೆ ಹುಲಿಮನೆ ನಿರ್ವಹಿಸಿದರು.

ಅಂಬಳಕೆಯಲ್ಲಿ ಪೂಜೆ ಇಲ್ಲ- ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕ ಹುಕ್ಕಳಿ ಹಾಗೂ ಬೇಡ್ಕಣಿ ಗೌಡರ ಕುಟುಂಬದವರು ಸಾರ್ವಜನಿಕ ಭಕ್ತಾದಿಗಳಿಗೆ ತಿಳಿಸುವುದೇನೆಂದರೆ,
ಪ್ರತಿ ದೀಪಾವಳಿ ನಂತರ ವರುಷದೊಡಕು ಹಬ್ಬದ ದಿನ ಅಂಬಳಕೆ (ಮಿಣಸಿ ಕ್ರಾಸ್ ಹತ್ತಿರ) ಶ್ರೀ ಬಸವಣ್ಣ ದೇವಸ್ಥಾನದಲ್ಲಿ ಪ್ರತಿ ವರ್ಷ ಸದ್ರಿ ದಿವಸ ನಮ್ಮ ಕುಟುಂಬದವರು ಅನಾದಿ ಕಾಲದಿಂದ ಪೂಜೆ ಸಲ್ಲಿಸಿ ಪ್ರಸಾದ ವಿತರಿಸುವ ಕಾರ್ಯಕ್ರಮವನ್ನು ಮಾಡಿಕೊಂಡು ಬರುತ್ತಿದ್ದೇವೆ. ಈ ಪೂಜೆಗೆ ತಾಲೂಕಿನ ಭಕ್ತಾಧಿಗಳಲ್ಲದೆ ಹೊರ ಜಿಲ್ಲೆಯಿಂದ ಸಹ ಹೆಚ್ಚಿನ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಈ ವರ್ಷ ಎಲ್ಲೆಡೆ ಕರೋನಾ ಸೋಂಕು ಹಬ್ಬುತ್ತಿರುವುದರಿಂದ ಇಂತಹ ಜನ-ಜಾತ್ರೆ ಮಾಡುವುದು ಸರಿಯಲ್ಲ ಎಂತಾ ಸರ್ಕಾರದ ಆದೇಶ ಇರುವುದರಿಂದ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ ಸಾಧ್ಯ ಎಂತಾ ತಿಳಿದು, ಹುಕ್ಕಳಿ ಹಾಗೂ ಬೇಡ್ಕಣಿ ಗೌಡರ ಕುಟುಂಬದಿಂದ ಆಚರಿಸುತ್ತಿದ್ದ ಈ ಪೂಜಾ ಕಾರ್ಯಕ್ರಮವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ರದ್ದುಪಡಿಸಿರುತ್ತೇವೆ. ಕಾರಣ ಭಕ್ತಾಧಿಗಳು ಸಹಕರಿಸಬೇಕಾಗಿ ವಿನಂತಿ.
ಮನುಕುಲಕ್ಕೆ ಕಂಟಕವಾಗಿರುವ ಈ ಮಹಾಮಾರಿಯಿಂದ ಜಗತ್ತಿನ ಸಕಲ ಜೀವಿಗಳಿಗೂ ಮುಕ್ತಿ ದೊರೆಯಲಿ. ಜನರ ಬದುಕು ಮೊದಲಿನಂತೆ ಹಸನಾಗಲಿ ಎಂದು ಶ್ರೀ ಬಸವಣ್ಣ ದೇವರಲ್ಲಿ ಪ್ರಾರ್ಥಿಸುತ್ತೇವೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *