ರಾಜ್ಯದಲ್ಲಿ 24 ಗಂಟೆಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಣೆ- ಸಚಿವ ಡಾ. ಕೆ. ಸುಧಾಕರ್

 ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ  ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 

Sudhakara1

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ  ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಮಾಜಿ ಆರೋಗ್ಯ ಸಚಿವರು,ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ವೈದ್ಯ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2,300 ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನರಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕೆಂಬ ನಿಯಮವಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಈ ನಿಯಮದಂತೆ ಆಸ್ಪತ್ರೆ ಇಲ್ಲ. ವಿಶ್ವಬ್ಯಾಂಕ್ ಸಹಕಾರದಿಂದ ಮೂರು ವರ್ಷಗಳಲ್ಲಿ ಇವುಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು, ಜೊತೆಗೆ ಈಗ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24 ಗಂಟೆಯೂ ಸೇವೆ ದೊರೆಯುವ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಆರಂಭವಾಗಿ ದೊಡ್ಡ ಆಸ್ಪತ್ರೆಗಳವರೆಗೂ ಗುಣಮಟ್ಟದಲ್ಲಿ ರಾಜಿಯಾಗದಂತೆ ಕ್ರಮ ಕೈಗೊಳ್ಳಬೇಕಿದೆ. ಇದಕ್ಕಾಗಿ ಸಮಗ್ರವಾದ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ.ಕೆಲ ವೈದ್ಯರು ಗ್ರಾಮೀಣ ಪ್ರದೇಶಗಳಿಗೆ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಆರೋಗ್ಯ ಸಿಬ್ಬಂದಿ ಸೇವೆ ಸಲ್ಲಿಸುವ ಪ್ರದೇಶದ ಆಧಾರದಲ್ಲಿ ಬಡ್ತಿ, ವೇತನ, ಮಕ್ಕಳಿಗೆ ಶಿಕ್ಷಣ ನೀಡುವ ಅಂಶಗಳನ್ನು ಈ ಹೊಸ ನೀತಿಯಲ್ಲಿ ಸೇರಿಸಲಾಗುವುದು ಎಂದು ವಿವರಿಸಿದರು.

1,250 ಎಂಬಿಬಿಎಸ್ ವೈದ್ಯರು, 950 ತಜ್ಞರು, 150 ದಂತ ವೈದ್ಯರು ಸೇರಿ 2,500 ವೈದ್ಯರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಜೊತೆಗೆ 1,500 ಹಿರಿಯ ರೆಸಿಡೆಂಟ್ ವೈದ್ಯರನ್ನು ನೇಮಿಸಲಾಗುವುದು. ಡಿಸೆಂಬರ್  ಅಥವಾ ಜನವರಿ ವೇಳೆಗೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳಲ್ಲಿ ಹುದ್ದೆಗಳು ಭರ್ತಿಯಾಗಲಿದೆ. ಅರೆ ವೈದ್ಯಕೀಯ, ನರ್ಸಿಂಗ್ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು ಎಂದರು.

ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಉದ್ದೇಶವಿದ್ದು, ಅದಕ್ಕೆ ತಕ್ಕಂತೆ ನೀತಿಯಲ್ಲಿ ಬದಲಾವಣೆ ತರಲಾಗುವುದು ಎಂದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *