ದಿವಂಗತ ನಟ ಅಂಬರೀಶ್‌ಗಾಗಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು!

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅಂಬರೀಶ್ ಅವರ ಫೋಟೋ ಇಟ್ಟು ಪೂಜೆಸಲಾಗುತ್ತಿದೆ. 

Ambi_Temple1

ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಷ್ ಭೌತಿಕವಾಗಿ ನಮ್ಮನ್ನು ಅಗಲಿ ಎರಡು ವರ್ಷ ಆಗಿದ್ದರೂ ಜನಮಾನಸದಲ್ಲಿ ಅವರು ಎಂದಿಗೂ ಚಿರಸ್ಥಾಯಿಯಾಗಿದ್ದಾರೆ. ಅವರ ಮೇಲಿನ ಪ್ರೀತಿ, ಅಭಿಮಾನ ಜನರಲ್ಲಿ ಹಾಗೆಯೇ ಇದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅಂಬರೀಶ್ ಅವರ ಫೋಟೋ ಇಟ್ಟು ಪೂಜೆಸಲಾಗುತ್ತಿದೆ. 

ಅಲ್ಲದೇ, 8 ಲಕ್ಷ ರೂ.  ನಿಧಿ ಸಂಗ್ರಹದ ಮೂಲಕ  ‘ಅಂಬಿ ಅಮರ’ ದೇವಾಲಯ ನಿರ್ಮಿಸುವ ಮೂಲಕ ಮೆಚ್ಚಿನ ನಟನಿಗೆ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದ್ದು, ಅವರ ಎರಡನೇ ಪುಣ್ಯ ಸ್ಮರಣೆ ದಿನವಾದ ನವೆಂಬರ್ 24 ರಂದು ಅನಾವರಣ ಮಾಡಲಾಗುತ್ತಿದೆ.

”ನಾನು ಮಾತ್ರವಲ್ಲ, ನನ್ನ ತಂದೆ, ಗ್ರಾಮದಲ್ಲಿರುವ ಎಲ್ಲಾ ಸಂಬಂಧಿಕರು ಅಂಬರೀಶ್ ಅವರ ಅಭಿಮಾನಿಗಳು. ಅವರು ನಮ್ಮ ಹಳ್ಳಿಯಲ್ಲಿ ಮಾಡಿದ ಜನಪರ ಕಾರ್ಯಗಳಿಂದ ಜನರ ಜೀವನ ಬದಲಾಗಿದ್ದು, ದೇವರಂತೆ ನಂಬಿಕೆ ಇಡಲಾಗಿದೆ. ಪ್ರತಿಯೊಬ್ಬರ ಮನೆಯಲ್ಲೂ ಅಂಬಿ ಫೋಟೋವಿದೆ. ಗ್ರಾಮಸ್ಥರು, ಅಭಿಮಾನಿಗಳಗಳ ಪ್ರಯತ್ನದಿಂದ ಇದೀಗ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಹೊಟ್ಟೆಗೌಡನದೊಡ್ಡಿ ನಿವಾಸಿ ಸಿದ್ದೇಶ್ ಸಂತಸ ವ್ಯಕ್ತಪಡಿಸಿದರು.

ಅಂಬರೀಶ್ ಅಣ್ಣಾನ ಮೇಲೆ ಅಪಾರ ಪ್ರೀತಿಯಿಂದಾಗಿ ದೇವಾಲಯವನ್ನು ನಿರ್ಮಿಸಿದ್ದೇವೆ. ಅಂಬರೀಶ್ ಅವರ ಸಮಾಧಿ ಸ್ಥಳದಿಂದ ತಂದ ಚಿತಾಭಸ್ಮವನ್ನು ಇಲ್ಲಿಟ್ಟು ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಇದರ ಹಿಂದೆ ಯಾವುದೇ ರಾಜಕೀಯ ಇಲ್ಲ, ಸ್ವಯಂ ಪ್ರೇರಣೆಯಿಂದ ಈ ಕಾರ್ಯವನ್ನು ಮಾಡಿದ್ದೇವೆ ಎಂದು ಅಖಿಲ ಕರ್ನಾಟಕ ಡಾ. ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ನಾಗೇಶ್ ತಿಳಿಸಿದ್ದಾರೆ.

ದೇವಾಲಯ ನಿರ್ಮಾಣ ಕುರಿತಂತೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ,   ಅಂಬರೀಶ್ ಅವರ ಮೇಲಿನ ಅಭಿಮಾನಿಗಳ ಅಭಿಮಾನವನ್ನು ಪದಗಳಲ್ಲಿ ವರ್ಣಿಸಲು ಆಗುತ್ತಿಲ್ಲ. ಅವರು ಗಳಿಸಿದ ಪ್ರೀತಿಯನ್ನು ಅಭಿಷೇಕ್ ಹಾಗೂ ನನಗೆ ರವಾನಿಸಿದ್ದಾರೆ. ಅವರು ಅದ್ಬುತ ವ್ಯಕ್ತಿ, ಶತಕೋಟಿಗಳಲ್ಲಿ ಒಬ್ಬರು ಎಂದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *