bunch of local news- ಉದ್ಯೋಗ ಖಾತ್ರಿ ಸದುಪಯೋಗಕ್ಕೆ ಕರೆ

ಪಟಾಕಿ ಸದ್ದಿಲ್ಲದ ದೀಪಾವಳಿ ನಡುವೆ ಸಂಭ್ರಮದಿಂದ ಬಿಂಗಿ ಆಚರಣೆ.

ಸಿದ್ದಾಪುರ: ದೀಪಾವಳಿ ಹಬ್ಬವೆಂದರೆ ದೀಪಗಳ ಹಬ್ಬ. ಅಂತೆಯೇ ಜನಪದ ಕಲೆಗಳಲ್ಲೊಂದಾದ ಬಿಂಗಿಪದಕ್ಕೂ ಕೂಡ ಅಷ್ಟೇ ಪ್ರಾಧಾನ್ಯತೆ ಇದೆ. ಮಲೆನಾಡಿನ ಕೆಲವು ಗ್ರಾಮಗಳಲ್ಲಿ ಈಗಲೂ ಕೂಡ ಬಿಂಗಿ ಹಾಡುವಿಕೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಎಲೆ, ಹಣ್ಣಡಿಕೆ, ಸಿಂಗಾರ, ಪಚ್ಚತೆನೆಗಳಿಂದ ಸಿಂಗರಿಸಿದ ವಿಶೇಷವಾದ ಬಿಂಗಿ ದೀಪವನ್ನು ಹಿಡಿದು ರಾತ್ರಿಯಿಂದ ಬೆಳಗಿನ ತನಕ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಬಿಂಗಿ ಪದಗಳನ್ನು ಹಾಡಿ ಜನರ ಮನತಣಿಸುತ್ತಾರೆ. ಬಲವಿಂದ್ರನ ಹಾಡು, ಗೋವಿನ ಹಾಡು, ಬಸವನ ಹಾಡು, ಎತ್ತಿಗೆ ಬಾಸಿಂಗ ಕಟ್ಟುವ ಹಾಡು ಮುಂತಾದ ಹಾಡುಗಳನ್ನು ಸೊಗಸಾಗಿ ಹಾಡಲಾಗುತ್ತದೆ.
ತಾಲೂಕಿನ ಹಾರ್ಸಿಕಟ್ಟಾ ಸಮೀಪದ ಕಿಲಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಶೇಷ ಬಿಂಗಿ ಹಾಡುವಿಕೆಯನ್ನು ಆಚರಿಸಲಾಯಿತು. ರಾತ್ರಿಯಿಡೀ ನಿದ್ದೆಗೆಟ್ಟು ಯಾವುದೇ ಪ್ರತಿಫಲದ ಅಪೇಕ್ಷೆಯಿಲ್ಲದೇ ಹಿರಿಯರಿಂದ ಬಳುವಳಿಯಾಗಿ ಬಂದ ಈ ಕಲೆಯನ್ನು ಇಲ್ಲಿಯ ಯುವಕರು ಸಂಪ್ರದಾಯಬದ್ಧವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಇವರ ಈ ಕಲೆಯು ಹೀಗೆ ಮುಂದುವರಿಯಲಿ ಹಾಗೂ ಬಿಂಗಿಪದವನ್ನು ಉಳಿಸಿ ಬೆಳೆಸೋಣ ಎಂದು ಆಶಿಸೋಣ.

ಉದ್ಯೋಗ ಖಾತ್ರಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಕರೆ
ಸಿದ್ದಾಪುರ; ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯ ಡಿಯಲ್ಲಿ ಗ್ರಾಮೀಣ ಭಾಗದ ಜನತೆಗೆ ವರ್ಷದಲ್ಲಿ ಒಂದು ಕುಟುಂಬಕ್ಕೆ 100 ದಿನ ಉದ್ಯೋಗ ನೀಡುವುದಾಗಿದೆ. ಇದರಡಿಯಲ್ಲಿ 260 ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶಗಳಿವೆ. .ಈ ಕುರಿತು ಹೆಚ್ಚಿನ ಕಾಳಜಿಯನ್ನು ವಹಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಒಂಬುಡ್ಸ್‍ಮನ್ ಆರ್.ಜಿ.ನಾಯಕ ಹೇಳಿದರು.
ಅವರು ತಾಲೂಕಿನ ಕೋಲಶಿರ್ಸಿ ಮಾರಿಕಾಂಬಾ ಸಭಾಭವನದಲ್ಲಿ ಮನುವಿಕಾಸ ಸಂಸ್ಥೆ ಹಾಗೂ ಈಡಲ್ ಗಿವ್ ಫೌಂಡೇಶನ್ ಸಹಯೋಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಶ್ರಮಿಕ ಕುಟುಂಬಗಳಿಗೆ ಸಲಕರಣೆಗಳನ್ನು (ಗುದ್ದಲಿ,ಪಿಕಾಸಿ, ಬುಟ್ಟಿ)ವಿತರಿಸಿ ಮಾತನಾಡಿದರು. ಆಹಾರ ಭದ್ರತೆಯೊಂದಿಗೆ ಉದ್ಯೋಗವನ್ನು ನೀಡುವುದು ಕಾಯದೆಯ ಮುಖ್ಯ ಉದ್ದೇಶವಾಗಿದೆ.ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯಾಗಿದ್ದು ಒಂದು ಉತ್ತಮ ಕಾರ್ಯಕ್ರಮವಾಗಿದೆ. ಇದರ ಅನುಷ್ಠಾನದಲ್ಲಿ ಮನುವಿಕಾಸ ಸಂಸ್ಥೆ ಹೆಚ್ಚಿನ ಆಸಕ್ತಿ ವಹಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಉತ್ತರ ಕನ್ನಡ ಜಿಲ್ಲಾ ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಫೇವಾರ್ಡ ಯು.ಕೆ ಅಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮುದಾಯದ ಕಾಮಗಾರಿಗಳ ಜೊತೆಯಲ್ಲಿ ಅನೇಕ ವೈಯಕ್ತಿಕ ಕಾಮಗಾರಿಗಳನ್ನು ಮಾಡುವುದಕ್ಕೆ ಅವಕಾಶಗಳಿವೆ. ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದಾಗಿದೆ. ಕೋವಿಡ್ ಸಂದರ್ಭದಲ್ಲಿ ಉದ್ಯೋಗ ಇಲ್ಲದವರಿಗೆ ಈ ಯೋಜನೆ ಬದುಕಿಗೆ ಭರವಸೆಯನ್ನು ತುಂಬಿದೆ. ಅನೇಕರು ಕೆಲಸಗಳನ್ನು ಮಾಡಿ ಜೀವನದ ನಿರ್ವಹಣೆಯನ್ನು ಮಾಡಿಕೊಳ್ಳುವುದಕ್ಕೆ ಸಹಕಾರಿಯಾಗಿದೆ.ಸಂಸ್ಥೆಯು ಇದಕ್ಕೆ ಪೂರಕವಾದ ಅಗತ್ಯ ಸಹಕಾರವನ್ನು ನೀಡಿ ನೆರವಾಗಿದೆ ಎಂದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ತಾಲೂಕ ಸಾಮಾಜಿಕ ಲೆಕ್ಕ ಪರಿಶೋಧಕರಾದ ನಾಗರಾಜ ಹೆಗಡೆ, ಸ್ಥಳೀಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರು, ಗ್ರಾಮ ಪಂಚಾಯತ ನಿಕಟಪೂರ್ವ ಉಪಾಧ್ಯಕ್ಷ ಕೆ.ಆರ್.ವಿನಾಯಕ(ಬಾಬು ನಾಯ್ಕ), ಪಿಡಿಓ ಸುಬ್ರಹ್ಮಣ್ಯ ಹೆಗಡೆ ಮನುವಿಕಾ ಸಂಸ್ಥೆಯ ಸಿ.ಓಓ ಸಂಜೀವ ಕುಲಕರ್ಣಿ ಮಾತನಾಡಿದರು.
ಮನುವಿಕಾಸ ಸಂಸ್ಥೆಯ ಅಶ್ವತ ನಾಯ್ಕ ಸ್ವಾಗತಿಸಿದರು,ನಿರ್ದೇಶಕ ಗಣಪತಿ ಭಟ್ ಪ್ರಸ್ತಾವಿಕವಾಗಿ ಮಾತನಾಡಿದರು. ಪವನ ಬೊಮ್ಮನಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಪುನಿತ ನಾಯ್ಕ ವಂದಿಸಿದರು.

RKMS Martial Arts Uttarakannada ಸಂಸ್ಥೆ ವತಿಯಿಂದ ಶಿರಸಿಯ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಉ.ಕ. ಜಿಲ್ಲೆಯ ಹೆಮ್ಮೆಯ *ಏಕಲವ್ಯ ಪ್ರಶಸ್ತಿ ವಿಜೇತ ಹಾಗೂ ಕಾಮನ್ವೆಲ್ತ್ ಗೇಮ್ಸ್ ಜಾವೆಲಿನ್ ತ್ರೋ ವಿನ್ನರ್ ಹಾಗೂ ಪ್ರಸ್ತುತ ಸ್ಪೋರ್ಟ್ಸ್ ಕೋಚ್ ಆದಂತಹ ಕಾಶೀನಾಥ್ ನಾಯ್ಕ್ ಬೆಂಗಳೆ ರಿಗೆ ಉತ್ತರ ಕನ್ನಡ ಕರಾಟೆ ಶಿಕ್ಷಕರಾದ ಆನಂದ ಕ್ರಷ್ಣ ನಾಯ್ಕ ಮತ್ತು ಕರಾಟೆ ವಿದ್ಯಾರ್ಥಿಗಳು ಹಾಗೂ ಶಿರಸಿ ಯ ಪ್ರಶಾಂತ, ರವೀಂದ್ರ ನಾಯ್ಕ ಮತ್ತು ಶಿರಸಿ ತಾಲೂಕಿನ ನಾಗರಿಕರು ಸೇರಿ ಸನ್ಮಾನಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *