ಎ.ರವೀಂದ್ರ ಬಂಡಲ್ ಬಿಡುತ್ತಾರಾ?!

ಕಳೆದ ನಾಲ್ಕು ದಶಕಗಳಿಂದ ಅರಣ್ಯ ಭೂಮಿ ಸಾಗುವಳಿದಾರರ ಅರಣ್ಯ ಅತಿಕ್ರಮಣ ಹೋರಾಟ ಸಮೀತಿ ಮೂಲಕ ಹೋರಾಟ ಮಾಡುತ್ತಿರುವ ಎ.ರವೀಂದ್ರ ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶದ ಅರಣ್ಯ ವಾಸಿಗಳ ವಾಸ್ತವ ಸ್ಥಿತಿ-ಗತಿಗಳ ಅಧೀಕೃತ ಅಂಕಿ-ಸಂಖ್ಯೆಗಳನ್ನು ಹೇಳಬಲ್ಲರು. 40 ವರ್ಷಗಳ ಹೋರಾಟದಲ್ಲಿ ಬುಡಮಟ್ಟದಿಂದ ಪ್ರಾರಂಭಿಸಿ ರಾಷ್ಟ್ರಮಟ್ಟದ ವರೆಗೆ ಅಧ್ಯಯನ, ಕಾನೂನು ಹೋರಾಟ ಮಾಡಿ ಅರಣ್ಯಭೂಮಿ ಸಾಗುವಳಿದಾರರನ್ನು ಭೂಮಾಲಿಕರನ್ನಾಗಿಸುವ ಅವರ ಹೋರಾಟದ ಬದ್ಧತೆಯನ್ನು ಅವರ ವಿರೋಧಿಗಳೂ ಮೆಚ್ಚಬೇಕು.

ಇಂಥ ರವೀಂದ್ರ ನಾಥ ನಾಯ್ಕ ಜಿಲ್ಲೆಯಿಂದ ಹೊರಗೆ ಕಾರ್ಯಕ್ರಮಕ್ಕೆ ಹೋದಾಗ ಭಾಷಣದಲ್ಲಿ ಹೇಳಿದ ಕರಾವಕ್ಕು ಅಂಕಿ-ಸಂಖ್ಯೆಗಳನ್ನು ದಾಖಲಿಸಿಕೊಂಡ ಪತ್ರಕರ್ತರೊಬ್ಬರು ನಂತರ ಇವರ ಸಂದರ್ಶನ ಮಾಡಿದಂತೆ ಮಾಡಿ! ಅರಣ್ಯ ಭೂಮಿ ಹಕ್ಕು ಹೋರಾಟ ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರಂತೆ.

ಭಾಷಣ, ಸಂದರ್ಶನ, ಮಾತು ಎಲ್ಲಾ ಕಡೆ ಅಂಕಿ-ಸಂಖ್ಯೆ ಏರುಪೇರಾಗದಿರುವುದನ್ನು ದೃಢೀಕರಿಸಿಕೊಂಡ ನಂತರ ಎ. ರವೀಂದ್ರರಿಗೆ ‘ಸರ್ ನಿಮ್ಮ ಅಂಕಿಸಂಖ್ಯೆ ಗಳ ವಿಶ್ವಾಸಾರ್ಹತೆ ಬಗ್ಗೆ ನಾವು ಬೆಟ್ಟುಕಟ್ಟಿಕೊಂಡಿದ್ದೆವು. ಆದರೆ ನಿಮ್ಮ ಸತ್ಯ-ಬದಲಾಗದ ಅಂಕಿಸಂಖ್ಯೆ ಗಳ ಕರಾರುವಾಕ್ಕುತನ ನನಗೆ 5 ಸಾವಿರ ಉಳಿಸಿದೆ,’ ಎಂದರಂತೆ…. ಹೀಗೆ ಅರಣ್ಯಭೂಮಿ ಹಕ್ಕು ಹೋರಾಟ, ಅದಕ್ಕೆ ಸಂಬಂಧಿಸಿದ ದಾಖಲೆಗಳು, ಹೋರಾಟಗಳಿಂದ ಪ್ರಸಿದ್ಧರಾಗಿರುವ ಎ. ರವೀಂದ್ರ ಈಗಲೂ ಅರಣ್ಯ ಹಕ್ಕು ಹೋರಾಟ ಅಭಿಯಾನವನ್ನು ಚಳವಳಿಯಾಗಿ, ನ್ಯಾಯಾಂಗದಲ್ಲಿ ಅದನ್ನೊಂದು ಹೋರಾಟವಾಗಿ ಪರಿಗಣಿಸಿದ್ದಾರೆ. ರವೀಂದ್ರನಾಥ ನಾಯ್ಕ ನಮ್ಮ ಸಮಾಜಮುಖಿ ಯೂ ಟ್ಯೂಬ್ ಚಾನೆಲ್ ನ ಕಾರ್ಯಕ್ರಮಕ್ಕೆ ಮೂಖಾಮುಖಿಯಾಗಿ ತಮ್ಮ ಹೋರಾಟ, ಫಲಶೃತಿಗಳ ಬಗ್ಗೆ ಅವಶ್ಯ ದಾಖಲೆಗಳೊಂದಿಗೆ ವಿವರಿಸಿದರು ಅವರ ಸಂದರ್ಶನದ ಎರಡು ಕಂತುಗಳು ನಮ್ಮ samaajamukhi, samaajamukhi.net ನಲ್ಲಿ ಲಭ್ಯವಿವೆ. ಈ ಸಂದರ್ಶನ ಅವರ ಸಾಮರ್ಥ್ಯ, ವಿಮರ್ಶಕರ ಆರೋಪ,ಪ್ರಶ್ನೆಗಳಿಗೂ ತಕ್ಕ ಉತ್ತರ ನೀಡಿವೆ. samajamukhi.net ಮತ್ತು samaajamukhi ಯೂಟ್ಯೂಬ್ ಚಾನೆಲ್ ಗಳಿಗೆ subscibe ಆಗುವ ಮೂಲಕ ಸಹಕ ರಿಸಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *