ಎ.ರವೀಂದ್ರ ಬಂಡಲ್ ಬಿಡುತ್ತಾರಾ?!

ಕಳೆದ ನಾಲ್ಕು ದಶಕಗಳಿಂದ ಅರಣ್ಯ ಭೂಮಿ ಸಾಗುವಳಿದಾರರ ಅರಣ್ಯ ಅತಿಕ್ರಮಣ ಹೋರಾಟ ಸಮೀತಿ ಮೂಲಕ ಹೋರಾಟ ಮಾಡುತ್ತಿರುವ ಎ.ರವೀಂದ್ರ ಉತ್ತರ ಕನ್ನಡ ಜಿಲ್ಲೆ, ರಾಜ್ಯ, ದೇಶದ ಅರಣ್ಯ ವಾಸಿಗಳ ವಾಸ್ತವ ಸ್ಥಿತಿ-ಗತಿಗಳ ಅಧೀಕೃತ ಅಂಕಿ-ಸಂಖ್ಯೆಗಳನ್ನು ಹೇಳಬಲ್ಲರು. 40 ವರ್ಷಗಳ ಹೋರಾಟದಲ್ಲಿ ಬುಡಮಟ್ಟದಿಂದ ಪ್ರಾರಂಭಿಸಿ ರಾಷ್ಟ್ರಮಟ್ಟದ ವರೆಗೆ ಅಧ್ಯಯನ, ಕಾನೂನು ಹೋರಾಟ ಮಾಡಿ ಅರಣ್ಯಭೂಮಿ ಸಾಗುವಳಿದಾರರನ್ನು ಭೂಮಾಲಿಕರನ್ನಾಗಿಸುವ ಅವರ ಹೋರಾಟದ ಬದ್ಧತೆಯನ್ನು ಅವರ ವಿರೋಧಿಗಳೂ ಮೆಚ್ಚಬೇಕು.

ಇಂಥ ರವೀಂದ್ರ ನಾಥ ನಾಯ್ಕ ಜಿಲ್ಲೆಯಿಂದ ಹೊರಗೆ ಕಾರ್ಯಕ್ರಮಕ್ಕೆ ಹೋದಾಗ ಭಾಷಣದಲ್ಲಿ ಹೇಳಿದ ಕರಾವಕ್ಕು ಅಂಕಿ-ಸಂಖ್ಯೆಗಳನ್ನು ದಾಖಲಿಸಿಕೊಂಡ ಪತ್ರಕರ್ತರೊಬ್ಬರು ನಂತರ ಇವರ ಸಂದರ್ಶನ ಮಾಡಿದಂತೆ ಮಾಡಿ! ಅರಣ್ಯ ಭೂಮಿ ಹಕ್ಕು ಹೋರಾಟ ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರಂತೆ.

ಭಾಷಣ, ಸಂದರ್ಶನ, ಮಾತು ಎಲ್ಲಾ ಕಡೆ ಅಂಕಿ-ಸಂಖ್ಯೆ ಏರುಪೇರಾಗದಿರುವುದನ್ನು ದೃಢೀಕರಿಸಿಕೊಂಡ ನಂತರ ಎ. ರವೀಂದ್ರರಿಗೆ ‘ಸರ್ ನಿಮ್ಮ ಅಂಕಿಸಂಖ್ಯೆ ಗಳ ವಿಶ್ವಾಸಾರ್ಹತೆ ಬಗ್ಗೆ ನಾವು ಬೆಟ್ಟುಕಟ್ಟಿಕೊಂಡಿದ್ದೆವು. ಆದರೆ ನಿಮ್ಮ ಸತ್ಯ-ಬದಲಾಗದ ಅಂಕಿಸಂಖ್ಯೆ ಗಳ ಕರಾರುವಾಕ್ಕುತನ ನನಗೆ 5 ಸಾವಿರ ಉಳಿಸಿದೆ,’ ಎಂದರಂತೆ…. ಹೀಗೆ ಅರಣ್ಯಭೂಮಿ ಹಕ್ಕು ಹೋರಾಟ, ಅದಕ್ಕೆ ಸಂಬಂಧಿಸಿದ ದಾಖಲೆಗಳು, ಹೋರಾಟಗಳಿಂದ ಪ್ರಸಿದ್ಧರಾಗಿರುವ ಎ. ರವೀಂದ್ರ ಈಗಲೂ ಅರಣ್ಯ ಹಕ್ಕು ಹೋರಾಟ ಅಭಿಯಾನವನ್ನು ಚಳವಳಿಯಾಗಿ, ನ್ಯಾಯಾಂಗದಲ್ಲಿ ಅದನ್ನೊಂದು ಹೋರಾಟವಾಗಿ ಪರಿಗಣಿಸಿದ್ದಾರೆ. ರವೀಂದ್ರನಾಥ ನಾಯ್ಕ ನಮ್ಮ ಸಮಾಜಮುಖಿ ಯೂ ಟ್ಯೂಬ್ ಚಾನೆಲ್ ನ ಕಾರ್ಯಕ್ರಮಕ್ಕೆ ಮೂಖಾಮುಖಿಯಾಗಿ ತಮ್ಮ ಹೋರಾಟ, ಫಲಶೃತಿಗಳ ಬಗ್ಗೆ ಅವಶ್ಯ ದಾಖಲೆಗಳೊಂದಿಗೆ ವಿವರಿಸಿದರು ಅವರ ಸಂದರ್ಶನದ ಎರಡು ಕಂತುಗಳು ನಮ್ಮ samaajamukhi, samaajamukhi.net ನಲ್ಲಿ ಲಭ್ಯವಿವೆ. ಈ ಸಂದರ್ಶನ ಅವರ ಸಾಮರ್ಥ್ಯ, ವಿಮರ್ಶಕರ ಆರೋಪ,ಪ್ರಶ್ನೆಗಳಿಗೂ ತಕ್ಕ ಉತ್ತರ ನೀಡಿವೆ. samajamukhi.net ಮತ್ತು samaajamukhi ಯೂಟ್ಯೂಬ್ ಚಾನೆಲ್ ಗಳಿಗೆ subscibe ಆಗುವ ಮೂಲಕ ಸಹಕ ರಿಸಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *