ಶಿರಸಿ ಕಾಂಗ್ರೆಸ್ ಸಮಾವೇಶದ ಚಿತ್ರಗಳು & ಇತರ ಸ್ಥಳೀಯ ಸುದ್ದಿಗಳು

ಕನ್ನಡಕ್ಕೆ ಶಕ್ತಿ ತುಂಬುವ ಕೆಲಸ ಅಗತ್ಯ – ನಾಗರಾಜ ಭೈರಿ
ಸಿದ್ದಾಪುರ-28 : ಕನ್ನಡ ನೆಲದಲ್ಲಿ ಕನ್ನಡಕ್ಕೆ ಅಗ್ರಸ್ಥಾನ ದೊರೆಯಬೇಕು. ಕನ್ನಡಕ್ಕೆ ಶಕ್ತಿ ತುಂಬುವ ಕೆಲಸ ಎಲ್ಲ ಸಂಘ-ಸಂಸ್ಥೆಗಳ ಮೂಲಕ ಆಗಬೇಕು. ಮಾನ್ಯ ಅಂತಾರಾಷ್ಟ್ರೀಯ ಸಂಸ್ಥೆ ಕನ್ನಡ ನೆಲದಲ್ಲಿ ಕ್ರಿಯಾತ್ಮಕವಾಗಿ ವಿವಿಧ ಲಯನ್ಸ್ ಕ್ಲಬ್, ಜಿಲ್ಲೆ ಹಾಗೂ ಬಹುಜಿಲ್ಲೆಗಳ ಒಕ್ಕೂಟದೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ಪ್ರಾದೇಶಿಕ ಭಾಷೆಗಳಿಗೆ ಮಹತ್ವ ನೀಡುತ್ತದೆ ಎಂದು ಲಯನ್ಸ್ ಮಲ್ಟಿಪಲ್ ಡಿಸ್ಟ್ರಿಕ್ಟ್ ಚೇರ್ಮನ್ ಲಯನ್ ನಾಗರಾಜ ಭೈರಿ ಹೇಳಿದರು.
ಅವರು ಸಿದ್ದಾಪುರ ಲಯನ್ಸ್ ಕ್ಲಬ್‍ಗೆ ದಿನಾಂಕ: 27-11-2020 ರಂದು ಭೇಟಿ ನೀಡಿ ಕ್ಲಬ್ಬಿನ ಸದಸ್ಯರನ್ನುದ್ದೇಶಿಸಿ ತಮಗಿತ್ತ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಅವರು ಮಾತನ್ನಾಡುತ್ತಾ ಭಾಷೆ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡುವುದರ ಜೊತೆ, ಪರಸ್ಪರ ಪ್ರೀತಿ ವಿಶ್ವಾಸವನ್ನು ಹೆಚ್ಚಿಸುತ್ತದೆ. ಲಯನ್ಸ್ ಸಮೂಹ ತನ್ನ ಕಾರ್ಯ ಚಟುವಟಿಕೆಗಳನ್ನು ಅಲ್ಲಲ್ಲಿಯ ಪ್ರಾದೇಶಿಕ ಭಾಷೆಗಳ ಮೂಲಕ ನಡೆಸಲು ಪ್ರೋತ್ಸಾಹಿಸುತ್ತದೆ. ಜಾಗತಿಕ ಅರಿವಿನೊಂದಿಗೆ ಪ್ರಾದೇಶಿಕ ಪ್ರೀತಿ ನೆಲೆಗೊಳ್ಳಬೇಕು ಎಂದು ಹೇಳಿದರು.

ಸಿದ್ದಾಪುರದಲ್ಲಿನ ಅಂಧರ ಶಾಲೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಲ್ಲಿ ಮಹಿಳೆಯರಿಗಾಗಿ ನಡೆಯುತ್ತಿರುವ ಹೊಲಿಗೆ ತರಬೇತಿ ವರ್ಗವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದು, 48 ವರುಷಗಳಿಂದ ವಿವಿಧ ಜನಪರ ಸೇವೆಯಲ್ಲಿ ಸಿದ್ದಾಪುರ ಕ್ಲಬ್ ನಡೆಯುತ್ತಿದ್ದ ಬಗ್ಗೆ ಶ್ಲಾಘಿಸಿದರು.
ಸನ್ಮಾನ ಸ್ವೀಕರಿಸಿ, ಮಾಜಿ ಜಿಲ್ಲಾ ಗವರ್ನರ್ ಕೆ.ಎಂ. ಮುನಿಯಪ್ಪ ಬೆಂಗಳೂರು ರವರು ಮಾತನಾಡಿ, ಸಮಾಜದ ಋಣ ಬಲು ದೊಡ್ಡದು. ವಿವಿಧ ಸೇವಾ ಚಟುವಟಿಕೆಗಳ ಮೂಲಕ ಸಾಮಾಜಿಕ ಋಣಭಾರ ಇಳಿಸಿಕೊಳ್ಳಲು ಸಾಧ್ಯ. ಪ್ರೀತಿ ವಿಶ್ವಾಸಗಳು ಮನುಷ್ಯನ ಸಂಬಂಧಗಳನ್ನು ಗಟ್ಟಿಗೊಳಿಸುವುದರ ಜೊತೆ ಮಾನವೀಯ ಅನುಕಂಪಗಳನ್ನು ಹೆಚ್ಚಿಸಿ ಇನ್ನೊಬ್ಬರ ಕಷ್ಟದಲ್ಲಿ ಸಹಕರಿಸಲು ಸಾಧ್ಯ ಎಂದು ಹೇಳಿದರು.
ಮಾಜಿ ಲಯನ್ಸ್ ಜಿಲ್ಲಾ ಗವರ್ನರ್, ಜಿ.ಪಿ. ದಿವಾಕರ ಅವರು ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ಲಯನ್ಸ್ ಸಮೂಹಗಳು ಶಹರ ಗ್ರಾಮಾಂತರ ಪ್ರದೇಶಗಳೆಂಬ ಪ್ರತ್ಯೇಕತೆಯನ್ನು ಸೃಷ್ಟಿಸದೇ ತಮ್ಮ ನಿರ್ದಿಷ್ಟ ಗುರಿಗಳೊಂದಿಗೆ ಕಾರ್ಯತತ್ಪರವಾಗಿವೆ. ವೃತ್ತಿಪರ ತರಬೇತಿ ನೀಡುವುದು ಉತ್ತಮ ಸೇವಾಕಾರ್ಯ. ಸಿದ್ದಾಪುರ ಲಯನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಆಶಾಕಿರಣ ಟ್ರಸ್ಟ್‍ದವರ ಜೆ.ಎಂ.ಆರ್. ಅಂಧರ ಶಾಲೆಯಲ್ಲಿ ಮಹಿಳೆಯರಿಗಾಗಿ ನಡೆಯುತ್ತಿರುವ ಹೊಲಿಗೆ ತರಬೇತಿ ಕೇಂದ್ರ ವೀಕ್ಷಿಸಿ ಹೊಲಿಗೆ ಯಂತ್ರವೊಂದನ್ನು ದಾನವಾಗಿ ನೀಡಿ, ತರಬೇತು ಕಾರ್ಯಕ್ರಮವನ್ನು ಉತ್ತಮವಾಗಿ ನಡೆಸುತ್ತಿದ್ದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಜಿಲ್ಲಾ ಗವರ್ನರ್ ಡಾ. ರವಿ ಹೆಗಡೆ ಹೂವಿನಮನೆ ಮಾತನಾಡಿ ಸನ್ಮಾನಿತರನ್ನು ಅಭಿನಂದಿಸಿ, ಕೋವಿಡ್ 19 ರ ನಿಯಂತ್ರಣ ಹಾಗೂ ರಕ್ಷಣೆ ಸಲುವಾಗಿ ಕೋಟ್ಯಾಂತರ ರೂ.ಗಳ ಆರ್ಥಿಕ ನೆರವನ್ನು ಲಯನ್ಸ್ ಸಂಸ್ಥೆಗಳ ಮೂಲಕ ವಿತರಿಸಲಾಗಿದೆ. ಜನರ ಕಷ್ಟದಲ್ಲಿ ಭಾಗಿಯಾಗುವುದು ಅತ್ಯುತ್ತಮ ಸೇವೆ ಎಂದು ಹೇಳಿ ಸನ್ಮಾನವನ್ನು ನೆರವೇರಿಸಿದರು.
ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷೆ ಶ್ಯಾಮಲಾ ಹೆಗಡೆ ಹೂವಿನಮನೆ ವಹಿಸಿ, ಸಿದ್ದಾಪುರ ಕ್ಲಬ್‍ನ ಜಿಲ್ಲೆ, ರಾಜ್ಯ, ಅಂತರ್‍ರಾಷ್ಟ್ರೀಯ ಮಟ್ಟದ ಲಯನ್ಸ್ ನಾಯಕರು ಭೇಟಿ ನೀಡಿದ್ದು, ಸಂತಸದ ಸಂಗತಿ. ಅವರೊಂದಿಗೆ ಇಂದು ಭೇಟಿ ನೀಡಿದ ಮೂವರು ಲಯನ್ಸ್ ನಾಯಕರು ತಮ್ಮ ವಿವಿಧ ಕಾರ್ಯ ಚಟುವಟಿಕೆಗಳ ಮೂಲಕ ಲಯನ್ಸ್ ಸಮೂಹದ ಕೀರ್ತಿಯನ್ನು ಹೆಚ್ಚಿಸಿದ್ದು, ನಮ್ಮ ಕ್ಲಬ್ಬಿನ ಸನ್ಮಾನ ಸ್ವೀಕರಿಸಿದ ಬಗ್ಗೆ ಸಂತಸವಾಗಿದೆ ಎಂದರು.
ಲಯನ್ ಆರ್.ಎಂ. ಹೆಗಡೆ ಬಾಳೇಸರ, ಕಾರ್ಯದರ್ಶಿ ರಾಘವೇಂದ್ರ ಭಟ್ಟ ಕಲ್ಲಾಳ, ಜಿಲ್ಲಾ ಚೇರ್ಮನ್ ಸತೀಶಗೌಡರ್ ಹೆಗ್ಗೋಡ್ಮನೆ, ನಾಗರಾಜ ಪಾಟೀಲ ಮಳವತ್ತಿ ಉಪಸ್ಥಿತರಿದ್ದರು.
ಜಿ.ಜಿ. ಹೆಗಡೆ ಬಾಳಗೋಡ ಸ್ವಾಗತಿಸಿ ನಿರೂಪಿಸಿದರು. ನಾಗರಾಜ ಎಂ. ದೋಶೆಟ್ಟಿ ವಂದಿಸಿದರು.

ನಿಧನ ಸುದ್ದಿ- ಗಂಗೂಬಾಯಿ ಗಣಪತಿ ಭಟ್ಟ.
ಸಿದ್ದಾಪುರ: ತಾಲೂಕಿನ ಗಾಳಿಜಡ್ಡಿ ಸಮೀಪದ ಗಂಗೂಬಾಯಿ ಗಣಪತಿ ಭಟ್ಟ(85) ಗಾಳೀಮನೆ ಇವರು ಸೋಮವಾರ ನಿಧನಹೊಂದಿದರು.
ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರಬಂಧು-ಬಳಗವಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *