mala adiga of nri (usa) ಹೆಮ್ಮೆ ಪಡುವ ವಿಷಯ: ಜಿಲ್‌ ಬೈಡನ್‌ ಅವರ ನೀತಿ ನಿರ್ದೇಶಕರಾಗಿ ಕುಂದಾಪುರ ಮೂಲದ ಮಾಲಾ ಅಡಿಗ ನೇಮಕ

ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡನ್‌ ಅವರ ಪತ್ನಿ ಜಿಲ್‌ ಬೈಡನ್‌ ಅವರ ನೀತಿ ನಿರ್ದೇಶಕರಾಗಿ ಭಾರತೀಯ ಮೂಲದ ಮಾಲಾ ಅಡಿಗ ಅವರು ಆಯ್ಕೆಯಾಗಿದ್ದಾರೆ

Mala adiga

ಉಡುಪಿ: ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡನ್‌ ಅವರ ಪತ್ನಿ ಜಿಲ್‌ ಬೈಡನ್‌ ಅವರ ನೀತಿ ನಿರ್ದೇಶಕರಾಗಿ ಭಾರತೀಯ ಮೂಲದ ಮಾಲಾ ಅಡಿಗ ಅವರು ಆಯ್ಕೆಯಾಗಿದ್ದಾರೆ. 

ಭಾರತ ಮೂಲದ ಮಾಲಾ ಅಡಿಗ ಅವರು ಬೈಡನ್ ಆಡಳಿತದಲ್ಲಿ ಪ್ರಮುಖ ಹುದ್ದೆ ಪಡೆದುಕೊಂಡಿದ್ದಾರೆ.  ಬೈಡನ್ ಪ್ರತಿಷ್ಠಾನದಲ್ಲಿ ಉನ್ನತ ಶಿಕ್ಷಣ ಮತ್ತು ಸೇನಾ ಕುಟುಂಬಗಳ ವಿಭಾಗದ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಾಲಾ ಅಡಿಗ ಅವರು, ಒಬಾಮ ಆಡಳಿತದ ಅವಧಿಯಲ್ಲಿ ಒಬಾಮ ಸರ್ಕಾರದ ಅವಧಿಯಲ್ಲಿ ಜೋ ಬೈಡನ್ ಉಪಾಧ್ಯಕ್ಷರಾಗಿದ್ದಾಗ ಅವರ ಪತ್ನಿ ಜಿಲ್ ಬೈಡನ್ ಅವರಿಗೆ ನೀತಿ ಸಲಹೆಗಾರರೂ ಆಗಿದ್ದರು. ಈ ಬಾರಿ ಅವರು ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ನೀತಿ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ.

ಮಾಲಾ ಅಡಿಗ ಅವರು ಹುಟ್ಟಿಬೆಳೆದದ್ದು, ಅಮೆರಿಕದಲ್ಲಾದರೂ, ಆಕೆ ಉಡುಪಿ ಜಿಲ್ಲೆಯ ಕುಂದಾಪುರದ ಕಕ್ಕುಂಜೆ ಗ್ರಾಮದ ಮಣ್ಣಿನ ಮಗಳು. ಅವರು ಕಕ್ಕುಂಜೆ ಡಾ. ಚಂದ್ರಶೇಖರ ಅಡಿಗ ಮೊಮ್ಮಗಳು, ಡಾ.ರಮೇಶ್‌ ಅಡಿಗರ ಮಗಳು. ಡಾ.ರಮೇಶ್‌ ಅಡಿಗ ಅವರು ವೈದ್ಯಕೀಯ ಪದವಿ ಪಡೆದು ತಮ್ಮ 24ನೇ ವಯಸ್ಸಿನಲ್ಲೇ ಅಮೆರಿಕಕ್ಕೆ ತೆರಳಿದ್ದರು. ಕಳೆದ 50 ವರ್ಷಗಳಿಂದ ಅಲ್ಲಿಯೇ ನೆಲೆ ನಿಂತಿದ್ದಾರೆ.

ಮಾಲಾ ಅಮೆರಿಕಾದಲ್ಲೇ ಜನಿಸಿದರು ತಮ್ಮ ಊರನ್ನು ಮರೆತಿಲ್ಲ,  ತಮ್ಮ ಪತಿ ಚಾರ್ಲ್ ಬೈರೋ ಜೊತೆ ಹಲವು ವಿವಾಹ ಸಮಾರಂಭಗಳಿಗೆ ಕುಂದಾಪುರಕ್ಕೆ ಆಗಮಿಸುತ್ತಿರುತ್ತಾರೆ.  ಕುಂದಾಪುರದ ಚೈತನ್ಯ ವಿಶೇಷ ಶಾಲೆಯ ಪೋಷಕಿಯೂ ಆಗಿರುವ ಮಾಲಾ ಮತ್ತು ಚಾರ್ಲ್ಸ್‌ಗೆ ಆಶಾ ಎಂಬ 15 ವರ್ಷದ ಮಗಳು ಇದ್ದಾಳೆ.

ಮಾಲಾ ತುಂಬಾ ಪರಿಶ್ರಮ ಪಡುವ ಮಹಿಳೆ, ಹೀಗಾಗಿ ಆಕೆ ಅತ್ಯುನ್ನತ ಸ್ಥಾನಕ್ಕೇರಿದ್ದಾರೆ. ವಾರ್ಷಿಕವಾಗಿ ಭಾರತಕ್ಕೆ ಪ್ರವಾಸ ಬರುವ ಆಕೆ ಎಲ್ಲಾ ಕುಟುಂಬ ಸಮಾರಂಭಗಳಲ್ಲಿ ಭಾಗವಹಿಸುತ್ತಾರೆ ಎಂದು ಮಾಲಾ ಸಂಬಂಧಿ ಸುಜಾತಾ ನಕ್ಕತ್ತಾಯ ಎಂಬುವರು ಹೇಳಿದ್ದಾರೆ.

ಕುಂದಾಪುರದಲ್ಲಿ ಕಕ್ಕುಂಜೆ ಅಡಿಗರ ಮನೆತನ ಬಹಳ ಪ್ರಸಿದ್ಧ. ಈ ಮನೆತನದ ಸೂರ್ಯನಾರಾಯಣ ಅಡಿಗರು ಕರ್ಣಾಟಕ ಬ್ಯಾಂಕ್‌ನ ಅಧ್ಯಕ್ಷರಾಗಿದ್ದರು. ಇದೇ ಮನೆತನದ ಮಗಳು ಮಾಲಾ ಅಡಿಗ, ಈಗ ಅಮೆರಿಕಾದ ಪ್ರಥಮ ಮಹಿಳೆಯ ನೀತಿ ನಿರ್ದೇಶಕಿಯಾಗಿದ್ದಾರೆ. ಇದು ಕುಂದಾಪುರಕ್ಕೆ ಮಾತ್ರವಲ್ಲ ಕನ್ನಡ ನಾಡಿಗೆ ಹೆಮ್ಮೆಯ ವಿಷಯ. ಊರಿನವರಿಗೆಲ್ಲ ಬಹಳ ಸಂತೋಷವಾಗಿದೆ. ಮಾಲಾ ಅಡಿಗ ಅವರು ತಮ್ಮ ಹುದ್ದೆಯಲ್ಲಿ ಯಶಸ್ವಿಯಾಗಲಿ, ಇನ್ನೂ ದೊಡ್ಡ ಹುದ್ದೆಗೇರಲಿ ಎಂಬುದೇ ನಮ್ಮೆಲ್ಲರ ಹಾರೈಕೆ ಎಂದು ಹೇಳಿದ್ದಾರೆ.

ಮಾಲಾ ಅಡಿಗ ಅಮೆರಿಕಾಗ ಗ್ರಿನೆಲ್ ಕಾಲೇಜು, ಮಿನ್ನೆಸೋಟಾ ಸ್ಕೂಲ್ ಆಪ್ ಹೆಲ್ತ್ ವಿವಿ, ಶಿಕಾಗೋ ಲಾ ಸ್ಕೂಲ್ ವಿವಿಗಳಿಂದ ಪದವಿ ಗಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *