mala adiga of nri (usa) ಹೆಮ್ಮೆ ಪಡುವ ವಿಷಯ: ಜಿಲ್‌ ಬೈಡನ್‌ ಅವರ ನೀತಿ ನಿರ್ದೇಶಕರಾಗಿ ಕುಂದಾಪುರ ಮೂಲದ ಮಾಲಾ ಅಡಿಗ ನೇಮಕ

ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡನ್‌ ಅವರ ಪತ್ನಿ ಜಿಲ್‌ ಬೈಡನ್‌ ಅವರ ನೀತಿ ನಿರ್ದೇಶಕರಾಗಿ ಭಾರತೀಯ ಮೂಲದ ಮಾಲಾ ಅಡಿಗ ಅವರು ಆಯ್ಕೆಯಾಗಿದ್ದಾರೆ

Mala adiga

ಉಡುಪಿ: ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡನ್‌ ಅವರ ಪತ್ನಿ ಜಿಲ್‌ ಬೈಡನ್‌ ಅವರ ನೀತಿ ನಿರ್ದೇಶಕರಾಗಿ ಭಾರತೀಯ ಮೂಲದ ಮಾಲಾ ಅಡಿಗ ಅವರು ಆಯ್ಕೆಯಾಗಿದ್ದಾರೆ. 

ಭಾರತ ಮೂಲದ ಮಾಲಾ ಅಡಿಗ ಅವರು ಬೈಡನ್ ಆಡಳಿತದಲ್ಲಿ ಪ್ರಮುಖ ಹುದ್ದೆ ಪಡೆದುಕೊಂಡಿದ್ದಾರೆ.  ಬೈಡನ್ ಪ್ರತಿಷ್ಠಾನದಲ್ಲಿ ಉನ್ನತ ಶಿಕ್ಷಣ ಮತ್ತು ಸೇನಾ ಕುಟುಂಬಗಳ ವಿಭಾಗದ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಾಲಾ ಅಡಿಗ ಅವರು, ಒಬಾಮ ಆಡಳಿತದ ಅವಧಿಯಲ್ಲಿ ಒಬಾಮ ಸರ್ಕಾರದ ಅವಧಿಯಲ್ಲಿ ಜೋ ಬೈಡನ್ ಉಪಾಧ್ಯಕ್ಷರಾಗಿದ್ದಾಗ ಅವರ ಪತ್ನಿ ಜಿಲ್ ಬೈಡನ್ ಅವರಿಗೆ ನೀತಿ ಸಲಹೆಗಾರರೂ ಆಗಿದ್ದರು. ಈ ಬಾರಿ ಅವರು ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ನೀತಿ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ.

ಮಾಲಾ ಅಡಿಗ ಅವರು ಹುಟ್ಟಿಬೆಳೆದದ್ದು, ಅಮೆರಿಕದಲ್ಲಾದರೂ, ಆಕೆ ಉಡುಪಿ ಜಿಲ್ಲೆಯ ಕುಂದಾಪುರದ ಕಕ್ಕುಂಜೆ ಗ್ರಾಮದ ಮಣ್ಣಿನ ಮಗಳು. ಅವರು ಕಕ್ಕುಂಜೆ ಡಾ. ಚಂದ್ರಶೇಖರ ಅಡಿಗ ಮೊಮ್ಮಗಳು, ಡಾ.ರಮೇಶ್‌ ಅಡಿಗರ ಮಗಳು. ಡಾ.ರಮೇಶ್‌ ಅಡಿಗ ಅವರು ವೈದ್ಯಕೀಯ ಪದವಿ ಪಡೆದು ತಮ್ಮ 24ನೇ ವಯಸ್ಸಿನಲ್ಲೇ ಅಮೆರಿಕಕ್ಕೆ ತೆರಳಿದ್ದರು. ಕಳೆದ 50 ವರ್ಷಗಳಿಂದ ಅಲ್ಲಿಯೇ ನೆಲೆ ನಿಂತಿದ್ದಾರೆ.

ಮಾಲಾ ಅಮೆರಿಕಾದಲ್ಲೇ ಜನಿಸಿದರು ತಮ್ಮ ಊರನ್ನು ಮರೆತಿಲ್ಲ,  ತಮ್ಮ ಪತಿ ಚಾರ್ಲ್ ಬೈರೋ ಜೊತೆ ಹಲವು ವಿವಾಹ ಸಮಾರಂಭಗಳಿಗೆ ಕುಂದಾಪುರಕ್ಕೆ ಆಗಮಿಸುತ್ತಿರುತ್ತಾರೆ.  ಕುಂದಾಪುರದ ಚೈತನ್ಯ ವಿಶೇಷ ಶಾಲೆಯ ಪೋಷಕಿಯೂ ಆಗಿರುವ ಮಾಲಾ ಮತ್ತು ಚಾರ್ಲ್ಸ್‌ಗೆ ಆಶಾ ಎಂಬ 15 ವರ್ಷದ ಮಗಳು ಇದ್ದಾಳೆ.

ಮಾಲಾ ತುಂಬಾ ಪರಿಶ್ರಮ ಪಡುವ ಮಹಿಳೆ, ಹೀಗಾಗಿ ಆಕೆ ಅತ್ಯುನ್ನತ ಸ್ಥಾನಕ್ಕೇರಿದ್ದಾರೆ. ವಾರ್ಷಿಕವಾಗಿ ಭಾರತಕ್ಕೆ ಪ್ರವಾಸ ಬರುವ ಆಕೆ ಎಲ್ಲಾ ಕುಟುಂಬ ಸಮಾರಂಭಗಳಲ್ಲಿ ಭಾಗವಹಿಸುತ್ತಾರೆ ಎಂದು ಮಾಲಾ ಸಂಬಂಧಿ ಸುಜಾತಾ ನಕ್ಕತ್ತಾಯ ಎಂಬುವರು ಹೇಳಿದ್ದಾರೆ.

ಕುಂದಾಪುರದಲ್ಲಿ ಕಕ್ಕುಂಜೆ ಅಡಿಗರ ಮನೆತನ ಬಹಳ ಪ್ರಸಿದ್ಧ. ಈ ಮನೆತನದ ಸೂರ್ಯನಾರಾಯಣ ಅಡಿಗರು ಕರ್ಣಾಟಕ ಬ್ಯಾಂಕ್‌ನ ಅಧ್ಯಕ್ಷರಾಗಿದ್ದರು. ಇದೇ ಮನೆತನದ ಮಗಳು ಮಾಲಾ ಅಡಿಗ, ಈಗ ಅಮೆರಿಕಾದ ಪ್ರಥಮ ಮಹಿಳೆಯ ನೀತಿ ನಿರ್ದೇಶಕಿಯಾಗಿದ್ದಾರೆ. ಇದು ಕುಂದಾಪುರಕ್ಕೆ ಮಾತ್ರವಲ್ಲ ಕನ್ನಡ ನಾಡಿಗೆ ಹೆಮ್ಮೆಯ ವಿಷಯ. ಊರಿನವರಿಗೆಲ್ಲ ಬಹಳ ಸಂತೋಷವಾಗಿದೆ. ಮಾಲಾ ಅಡಿಗ ಅವರು ತಮ್ಮ ಹುದ್ದೆಯಲ್ಲಿ ಯಶಸ್ವಿಯಾಗಲಿ, ಇನ್ನೂ ದೊಡ್ಡ ಹುದ್ದೆಗೇರಲಿ ಎಂಬುದೇ ನಮ್ಮೆಲ್ಲರ ಹಾರೈಕೆ ಎಂದು ಹೇಳಿದ್ದಾರೆ.

ಮಾಲಾ ಅಡಿಗ ಅಮೆರಿಕಾಗ ಗ್ರಿನೆಲ್ ಕಾಲೇಜು, ಮಿನ್ನೆಸೋಟಾ ಸ್ಕೂಲ್ ಆಪ್ ಹೆಲ್ತ್ ವಿವಿ, ಶಿಕಾಗೋ ಲಾ ಸ್ಕೂಲ್ ವಿವಿಗಳಿಂದ ಪದವಿ ಗಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *