ರೈತರ ಉಪವಾಸ,ಬಿ.ಜೆ.ಪಿ. ಅಭಿಯಾನ!

ಪ್ರತಿಭಟನೆ ಜೊತೆಗೆ ರೈತರಿಂದ ಉಪವಾಸ ಸತ್ಯಾಗ್ರಹ: ಪ್ರತಿಯಾಗಿ ಬಿಜೆಪಿಯಿಂದ ಜಾಗೃತಿ ಅಭಿಯಾನ 

 ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಪ್ರಧಾನಕ್ಕಿಂತ ಮೊದಲು ಕೃಷಿ ಶಬ್ದ ಬರುತ್ತದೆ ಎಂದು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕೃಷಿ ಮಸೂದೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆಡಳಿತಾರೂಢ ಬಿಜೆಪಿ ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ರೈತರ ಸಭೆಗಳನ್ನು ನಡೆಸಲು ತೀರ್ಮಾನಿಸಿದೆ. 

Farmers protest against the new farm laws at Singhu border in New Delhi Sunday

ಲಕ್ನೊ: ಇತ್ತೀಚೆಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕೃಷಿ ಮಸೂದೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆಡಳಿತಾರೂಢ ಬಿಜೆಪಿ ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ರೈತರ ಸಭೆಗಳನ್ನು ನಡೆಸಲು ತೀರ್ಮಾನಿಸಿದೆ. 

ಈ ಕಿಸಾನ್ ಸಮ್ಮೇಳನ ಇಂದು ಆರಂಭವಾಗಲಿದ್ದು ಡಿಸೆಂಬರ್ 18ರವರೆಗೆ ಮುಂದುವರಿಯಲಿದೆ ಎಂದು ಪಕ್ಷದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಕಿಸಾನ್ ಸಮ್ಮೇಳನವನ್ನು ಉದ್ದೇಶಿಸಿ ಅಯೋಧ್ಯೆ, ಬಸ್ತಿಗಳಲ್ಲಿ ಮಾತನಾಡಲಿದ್ದು, ರಾಜ್ಯ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ರೈತರ ಸಭೆಯನ್ನು ಗೊಂಡಾದಲ್ಲಿ ಇದೇ 15ರಂದು ಉದ್ದೇಶಿಸಿ ಮಾತನಾಡಲಿದ್ದಾರೆ ಹಾಗೂ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತೊಂದು ಕಿಸಾನ್ ಸಮ್ಮೇಳನವನ್ನು ವಾರಣಾಸಿಯಲ್ಲಿ ಇದೇ 15ರಂದು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಉತ್ತರ ಪ್ರದೇಶ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋವಿಂದ ನಾರಾಯಣ್ ಶುಕ್ಲ ತಿಳಿಸಿದ್ದಾರೆ.

ಕೇಸರಿ ಪಕ್ಷದ ಕಿಸಾನ್ ಸಮ್ಮೇಳನಕ್ಕೆ ಪ್ರತಿಯಾಗಿ ಇನ್ನೊಂದೆಡೆ, ಎಲ್ಲಾ ರೈತ ಸಂಘಟನೆಗಳ ಮುಖ್ಯಸ್ಥರು ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ರೈತ ಮುಖಂಡ ಗುರ್ನಮ್ ಸಿಂಗ್ ಚಡುನಿ ದೆಹಲಿಯಲ್ಲಿ ತಿಳಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಉಪವಾಸ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ನಿನ್ನೆ ಸಿಂಘು ಗಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚಡುನಿ ತಿಳಿಸಿದ್ದಾರೆ.

ಅಲ್ಲದೆ ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲಾಗುವುದು, ರೈತರು ಪ್ರಧಾನ ಮಂತ್ರಿ ಮೋದಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಪ್ರತಿಭಟನೆ ಇನ್ನೊಂದೆಡೆ ಮುಂದುವರಿಯಲಿದೆ ಎಂದರು.

ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ರೈತರ ಪ್ರತಿಭಟನೆಗೆ ಸಮಾಜವಾದಿ ಪಕ್ಷದ ಬೆಂಬಲವಿದೆ ಎಂದು ಅಖಿಲೇಶ್ ಯಾದವ್ ತಿಳಿಸಿದ್ದಾರೆ. ಕಳೆದ ಡಿಸೆಂಬರ್ 7ರಂದು ಸಮಾಜವಾದಿ ಪಕ್ಷ ಕಿಸಾನ್ ಯಾತ್ರೆಯನ್ನು ಆರಂಭಿಸಿತ್ತು. ಇಂದು ಪಕ್ಷದ ಕಾರ್ಯಕರ್ತರು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲಿದ್ದಾರೆ ಎಂದರು.

 ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಪ್ರಧಾನಕ್ಕಿಂತ ಮೊದಲು ಕೃಷಿ ಶಬ್ದ ಬರುತ್ತದೆ ಎಂದು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *