Laxman kodse writes – ಮನಕಲಕುವ ಕಥಾನಕ-ಬೊಪ್ಪ ನನ್ನನ್ನು ಕ್ಷಮಿಸು

ಉದಯಕುಮಾರ್ ಹಬ್ಬು ಅವರ `ಬೊಪ್ಪ ನನ್ನನ್ನು ಕ್ಷಮಿಸು’ ಶೀರ್ಷಿಕೆಯಿಂದಲೇ ಸೆಳೆದುಕೊಳ್ಳುವ ಕಥಾನಕ. ಆತ್ಮಕತೆಯಾದರೂ ಕಾದಂಬರಿಯಂತೆ ಓದಿಸಿಕೊಳ್ಳುವ ಕೃತಿ. ಗಾಂಧೀಜಿ ಪ್ರಭಾವಕ್ಕೆ ಒಳಗಾಗಿದ್ದ ಶಾನುಭೋಗ ಹಬ್ಬು ಅವರ ತತ್ವನಿಷ್ಠ ಬದುಕು ಕರುಣಿಸಿದ ಬಡತನವನ್ನು ಎದುರಿಸಿ ಬದುಕು ಕಟ್ಟಿಕೊಂಡ ಸಾಹಸಗಾಥೆ. ತಂದೆ ತಾಯಿ ಅಣ್ಣ ತಮ್ಮಂದಿರ ತುಂಬು ಕುಟುಂಬದಲ್ಲಿದ್ದರೂ ಬಾಲ್ಯದ ದಿನಗಳನ್ನು ಕಂಡವರ ಮನೆಗಳಲ್ಲಿ ಕಳೆಯಬೇಕಾದ ಪರಿಸ್ಥಿತಿಯನ್ನು ಉದಯಕುಮಾರ್ ಎಳೆಎಳೆಯಾಗಿ ಬಿಡಿಸಿ ಕೊಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ ಪಟೇಲರ ಮನೆಯಲ್ಲಿ, ನಂತರದ ಮೂರು-ನಾಲ್ಕು ವರ್ಷಗಳನ್ನು ಉಮ್ಮಚ್ಚಿ, ಹಳದೀಪುರ, ಬರಬಳ್ಳಿ ಎಂಬಲ್ಲಿ ಅಜ್ಜಿಯ ಮನೆ, ಸಂಬಂಧವೇ ಇಲ್ಲದ ಇನ್ನೊಬ್ಬ ಭಟ್ಟರ ಮನೆಯಲ್ಲಿ ಕಳೆದ ದಿನಗಳು ಮನಸ್ಸನ್ನು ಕಲಕುವ ಹೃದಯಸ್ಪರ್ಶಿ ಘಟನೆಗಳಿಂದ ಕೂಡಿವೆ. ಓದಿನ ನಿಮಿತ್ತ ಒಂಬತ್ತನೆಯ ವರ್ಷದಲ್ಲಿಯೇ ಅಪ್ಪ, ಅವ್ವ, ಅಣ್ಣ ತಮ್ಮ ಇದ್ದ ತುಂಬು ಕುಟುಂಬದಿಂದ ದೂರ ಹೋಗಿ ಪರ ಊರಿನಲ್ಲಿ ಪರದೇಸಿಯಂತೆ ಐದು ವರ್ಷಗಳನ್ನು ಕಳೆದಿದ್ದ ನನಗೆ ಹಬ್ಬು ಅವರ ಅಂದಿನ ದಿನಗಳ ಕಷ್ಟ ಕಾರ್ಪಣ್ಯಗಳು ನನ್ನದೇ ಅನುಭವಗಳನ್ನು ಮತ್ತೆ ನೆನಪಿಸಿಕೊಳ್ಳುವಂತೆ ಮಾಡಿದವು (ಬಹು ವರ್ಷಗಳ ಹಿಂದೆ ಓದಿದ್ದ ನೊಬಡಿಸ್ ಚೈಲ್ಡ್ ಇಂಗ್ಲಿಷ್ ಕೃತಿಯ ನೆನಪು ಕೂಡ ಬಂದಿತು).

ಬಡತನದ ಕಾರಣ ಎದುರಾಗುತ್ತಿದ್ದ ಅಪಮಾನ, ಅವಗಣನೆ, ತಿರಸ್ಕಾರಗಳ ನಡುವೆಯೂ ಶಿಕ್ಷಣವನ್ನು ಕೈಬಿಡಲಾಗದ ದಿಟ್ಟ ಸಂಕಲ್ಪ, ಅದಕ್ಕಾಗಿ ನೇಗಿಲು ಹಿಡಿದು ಗೆಯ್ಯುವ, ಅಂಗಡಿಯಲ್ಲಿ ದುಡಿಯುವ ಪರಿಸ್ಥಿತಿಗೆ ಒಯ್ಯುವುದನ್ನು ಅನುಕಂಪಕ್ಕೆ ಆಸ್ಪದ ಇಲ್ಲದ ರೀತಿಯಲ್ಲಿ ನಿರ್ಲಿಪ್ತ ಭಾವದಲ್ಲಿ ನಿರೂಪಿಸಿರುವುದು ಹಬ್ಬು ಅವರ ಬರವಣಿಗೆಯ ಹೆಚ್ಚುಗಾರಿಕೆ.
ಉದಯಕುಮಾರ್ ಅವರ ಸೋದರರಲ್ಲಿ ಒಬ್ಬರಾದ ಅರುಣ ಕುಮಾರ್ ಹಬ್ಬು ಪ್ರಜಾವಾಣಿಯಲ್ಲಿ ನನ್ನ ಸಹೋದ್ಯೋಗಿಯಾಗಿದ್ದವರು. ನನ್ನೊಂದಿಗೆ ಒಂದೇ ಪಾಳಿಯಲ್ಲಿ ಕೆಲಸ ಮಾಡಿದ ಸಜ್ಜನರು. ಆದ್ದರಿಂದ ಈ ಕಥಾನಕ ಹೆಚ್ಚು ಆಪ್ತವಾಗಿ ನನ್ನನ್ನು ತಟ್ಟಿದೆ. ಉದಯಕುಮಾರ್ ಅವರು ಫೇಸ್ ಬುಕ್ ನಲ್ಲಿ ಹಾಕಿದ್ದ ದಾರಾಶಿಕೊ ಕುರಿತ ಕಾದಂಬರಿಯನ್ನು ಕುತೂಹಲದಿಂದ ಗಮನಿಸಿದ್ದವನಿಗೆ ಈ ಕೃತಿಯ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿತ್ತು. ಅವರ ಈ ಆತ್ಮಕತೆಯ ವಿವರಗಳು ಮನಸ್ಸನ್ನು ಕಲಕುವಷ್ಟು ಭಾವತೀವ್ರತೆಯಿಂದ ಕೂಡಿವೆ.

ಉಡುಪಿ ಜಿಲ್ಲೆಯ ಮುಂಡ್ಕೂರಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಕೆಲಸ ಮಾಡಿ ನಿವೃತ್ತರಾಗಿರುವ ಉದಯಕುಮಾರ್ ಹಬ್ಬು ಸದ್ಯ ಕಿನ್ನಿಗೋಳಿಯಲ್ಲಿ ನೆಲೆಸಿ ಓದು ಬರವಣಿಗೆಯಲ್ಲಿ ನಿರತರಾಗಿ, ವರ್ತಮಾನದ ಸಂಗತಿಗಳಿಗೆ ಆರೋಗ್ಯಕರವಾಗಿ ಸ್ಪಂದಿಸುತ್ತಿರುವುದನ್ನು ಗಮನಿಸುತ್ತಿದ್ದೇನೆ. ಒಳ್ಳೆಯ ಓದಿನ ಕೃತಿಯನ್ನು ನೀಡಿದ ಹಬ್ಬು ಅವರಿಗೆ ಅಭಿನಂದನೆಗಳು..

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *