ಕಾಗೇರಿ ಕುಟಿಲತೆಗೆ ಕೆ.ಜಿ.ನಾ. ಕೆಂಡ! ಬದುಕಲ್ಲಿ ಮರೆಯದ ಮುಟ್ಟಿಕೊಳ್ಳುವಂಥ ಏಟು ನೀಡುವ ಎಚ್ಚರಿಕೆ

ರಾಜಕೀಯ ಪ್ರತಿಷ್ಠೆ, ಸ್ವಜಾತಿ ಪ್ರೇಮ, ರಾಜಕೀಯ ಸೇಡಿಗೆ ಸ್ಥಳೀಯ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಿದರೆ ಮುಟ್ಟಿ ನೋಡಿಕೊಳ್ಳುವಂಥ ಜೀವನದಲ್ಲಿ ಮರೆಯದ ಕೊಡುಗೆ ಕೊಡಬೇಕಾಗುತ್ತದೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಯವರಿಗೆ ಪರೋಕ್ಷವಾಗಿ ಎಚ್ಚರಿಸಿರುವ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕೆ. ಜಿ. ನಾಯ್ಕ ಹಣಜಿಬೈಲ್ ಸಮಯ, ಸಂದರ್ಭ ನೋಡಿ ತಮ್ಮ ಅಸಮಾಧಾನ ಹೊರ ಹಾಕುವ ಸುಳಿವು ನೀಡಿದ್ದಾರೆ.

ಇಂದು ಸಿದ್ಧಾಪುರ ಪ. ಪಂ. ನಲ್ಲಿ ಕರೆದ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆ. ಜಿ. ನಾ. ಶಿರಸಿ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ರಸ್ತೆ, ನೀರು, ಗಟಾರದಂಥ ಸಾರ್ವಜನಿಕ ಸಮಸ್ಯೆ ಕೇಳದ ಇಲ್ಲಿಯ ಆಡಳಿತ ಕೆಲವರ,ಕೆಲವು ಕೆಲಸಗಳಿಗೆ ಮಾತ್ರ ಆದ್ಯತೆ ನೀಡುವ ಪ್ರಮುಖರ ಆಸಕ್ತಿ ಏನು? ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆಯವರ ಹೆಸರು ಹೇಳದೆ ಪರೋಕ್ಷ ವಾಗಿ ಆರೋಪ ಮಾಡಿದ ಅವರು ಪಟ್ಟಣ ಪಂಚಾಯತ್ ಆಸ್ತಿಯನ್ನು ಇತರರಿಗೆ ನೀಡುವ ತರಾತುರಿ ಇತರ ಕೆಲಸಗಳ ವಿಚಾರದಲ್ಲ್ಯಾಕೆ ಆಗುತ್ತಿಲ್ಲ ಎಂದು ಹರಿಹಾಯ್ದರು.

ನಗರದ ರವೀಂದ್ರನಗರ ಸ.ನಂ.267 ಬ2 (ಬಾಲಿಕೊಪ್ಪ) ಪ್ರದೇಶದ ಅರ್ಧ ಎಕರೆ ಭೂಮಿಯನ್ನು ಪ.ಪಂ. ನಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮಂಜೂರು ಮಾಡಿರುವ ಜಿಲ್ಲಾಡಳಿತದ ತರಾತುರಿಯ ಕ್ರಮದ ಹಿಂದೆ ಕಾಣದ ಕೈ ಇದೆ. ಅದು ರಾಜಕೀಯ ಸೇಡು, ವೈಯಕ್ತಿಕ ಹಿತಾಸಕ್ತಿ ಪರವಾಗಿ ಸಾರ್ವಜನಿಕ ಹಿತಾಸಕ್ತಿಯ ವಿರುದ್ಧವಿದೆ. ಈ ವಿಚಾರದಲ್ಲಿ ನ್ಯಾಯಾಂಗ ಹೋರಾಟ ಮತ್ತು ನೇರ ಪ್ರತಿಭಟನೆಗೆ ಸಿದ್ಧವಿದ್ದು ಸಂಬಂಧಿಸಿದವರ ಮನೆ ಮುಂದೆ ಧರಣಿ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದರು.

ಬಾಲಿಕೊಪ್ಪ ಸಮಾಜಮಂದಿರದ ಪ್ರದೇಶ ಸೇರಿದಂತೆ ನಗರದ ಸಾರ್ವಜನಿಕ ಆಸ್ತಿ, ಪಟ್ಟಣಪಂಚಾಯತ್ ಆಸ್ತಿ ವಿಚಾರದಲ್ಲಿ ತಮ್ಮ ವೈಯಕ್ತಿಕ ಹಿತಾಸಕ್ತಿ ಮರೆತು ನ್ಯಾಯ ಒದಗಿಸಿದ್ದೇನೆ ಎಂದ ನಾಯ್ಕ ನಮಗೆ ಪರೋಕ್ಷ ಬೆದರಿಕೆ, ರಾಜಕೀಯ ಹೆದರಿಕೆ ಕೊಟ್ಟು ಹಿಮ್ಮೆಟ್ಟಿಸುವ ಪ್ರಯತ್ನ ಮಾಡಿದರೆ ಅದಕ್ಕೂ ಸಿದ್ಧ ಆದರೆ ಪರಿಣಾಮ ಘೋರವಾಗಿರಲಿದೆ ಎಂದು ಎಚ್ಚರಿಸಿದರು.

ನನ್ನ ರಾಜಕೀಯ ಜೀವನದಲ್ಲಿ ಪ.ಪಂ. ಆಸ್ತಿ, ಸಾರ್ವಜನಿಕ ಸ್ವತ್ತು ರಕ್ಷಣೆಗಾಗಿ ಹೋರಾಡಿ ಅನೇಕರ ವಿರೋಧ ಕಟ್ಟಿಕೊಂಡಿದ್ದೇನೆ ಈ ವಿಚಾರದಲ್ಲಿ ರಾಜಿ ಇಲ್ಲ, ಕೆಲವು ವಿಷಯಗಳಲ್ಲಿ ನಾನೆಷ್ಟು ಕಠಿಣ ಎಂದರೆ ಒಂದು ಕಾರಣಕ್ಕೆ ವರ್ಷಪೂರ್ತಿ ಶಿಕ್ಷಕರೊಂದಿಗೆ ಮಾತು ಬಿಟ್ಟ ವಿದ್ಯಾರ್ಥಿ ನಾನು, ಎನೂ ಇಲ್ಲದಿದ್ದಾಗಲೇ ಏನೇನೋ ಮಾಡಿದ್ದೇವೆ ಈಗ ತಲೆತಗ್ಗಿಸುವ ಪ್ರಶ್ನೆಯೇ ಇಲ್ಲ – ಕೆ.ಜಿ. ನಾಯ್ಕ

ಸಿದ್ಧಾಪುರ ನಗರದ ಬಾಲಿಕೊಪ್ಪ ಸಮಾಜಮಂದಿರದ ಪ.ಪಂ. ಆಸ್ತಿ ವಿಚಾರದಲ್ಲಿ ಹಿಂದೆ ಕಾಂಗ್ರೆಸ್ ವಿರೋಧ ಕಟ್ಟಿಕೊಂಡಿದ್ದ ಕೆ.ಜಿ.ನಾಯ್ಕ ಈಗ ಜಿಲ್ಲಾಡಳಿತ,ವಿಧಾನಸಭಾಅಧ್ಯಕ್ಷರ ವಿರೋಧ ಕಟ್ಟಿಕೊಳ್ಳುತಿದ್ದಾರೆ. ಈ ವಿಚಾರ ಸೇರಿದಂತೆ ಕೆ.ಜಿ.ನಾಯ್ಕರ ರಾಜಕೀಯ ನಡೆಗೆ ಸ್ಥಳಿಯ ಬಿ.ಜೆ.ಪಿ. ತಾಲೂಕು ಘಟಕ ಮತ್ತು ಪ.ಪಂ. ಸದಸ್ಯರು ಷರತ್ತುರಹಿತ ಬೆಂಬಲ ವ್ಯಕ್ತಪಡಿಸುತ್ತಿರುವುದು ವಿಶೇಶವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *