ಹೊಸ ತಳಿಯ ಕೊರೊನಾ ವೈರಸ್ ಪತ್ತೆ, ಸೋಂಕು ಹರಡುವಿಕೆ ವೇಗ ಶೇ.70ರಷ್ಟು ಹೆಚ್ಚಳ; ತುರ್ತು ಸಭೆ ಕರೆದ ಬ್ರಿಟನ್‌ ಸರ್ಕಾರ!

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಹಾಲಿ ಇರುವ ವೈರಸ್ ತಳಿಗಿಂತ ಇದು ಶೇ.70ರಷ್ಟು ಹರಡುವಿಕೆ ವೇಗವನ್ನು ಹೊಂದಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

Coronavirus

ಲಂಡನ್‌: ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್‌ ಪತ್ತೆಯಾಗಿದ್ದು, ಹಾಲಿ ಇರುವ ವೈರಸ್ ತಳಿಗಿಂತ ಇದು ಶೇ.70ರಷ್ಟು ಹರಡುವಿಕೆ ವೇಗವನ್ನು ಹೊಂದಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಹೌದು.. ಬ್ರಿಟನ್ ನಲ್ಲಿ ಕೊರೋನಾ ವೈರಸ್ ನ ಹೊಸ ತಳಿ ಪತ್ತೆಯಾಗಿದೆ. ಇದು ವಿಜ್ಞಾನಿಗಳ ನಿರೀಕ್ಷೆಯನ್ನೂ ಮೀರಿ ಅತ್ಯಂತ ವೇಗವಾಗಿ ಹರಡುತ್ತಿದ್ದು, ಪರಿಸ್ಥಿತಿ ಕೈಮೀರಿದೆ ಎಂದು ಸ್ವತಃ ಬ್ರಿಟನ್‌ ಸರ್ಕಾರ ಹೇಳಿದೆ. ಇದರ ಬೆನ್ನಲ್ಲೇ ಬ್ರಿಟನ್‌ನಿಂದ ಬರುವ ಎಲ್ಲಾ ವಿಮಾನಗಳನ್ನು  ಯೂರೋಪ್ ಹಲವು ರಾಷ್ಟ್ರಗಳು ರದ್ದುಪಡಿಸಿವೆ. 

ಬ್ರಿಟನ್‌ನ ಕೆಲವು ಭಾಗದಲ್ಲಷ್ಟೇ ಹೊಸ ಕೊರೊನಾವೈರಸ್ ಪತ್ತೆಯಾಗಿದೆ. ಹೀಗಾಗಿ ಬ್ರಿಟನ್‌ನ ನಗರ ಪ್ರದೇಶಗಳಲ್ಲಿ ಕಠಿಣ ಲಾಕ್‌ಡೌನ್‌ ಹೇರಲಾಗಿದೆ. ಹಲವು ಪ್ರದೇಶಗಳಲ್ಲಿ ಭಾನುವಾರದಿಂದಲೇ ಲಾಕ್‌ ಡೌನ್ ಜಾರಿಯಾಗಿದೆ. ಕೆಲವು ಪ್ರದೇಶಗಳಲ್ಲಿ ಡಿಸೆಂಬರ್ 26ರಿಂದ  ಜಾರಿಯಾಗಲಿದೆ. ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆಗಾಗಿ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಈ ವಿಷಯವನ್ನು ಬ್ರಿಟನ್ ಸರ್ಕಾರ ಘೋಷಿಸಿದ ಬೆನ್ನಲ್ಲೇ ನೆರೆಯ ರಾಷ್ಟ್ರಗಳು, ಬ್ರಿಟನ್‌ಗೆ ವಿಮಾನ ಸಂಪರ್ಕವನ್ನು ರದ್ದುಪಡಿಸಿವೆ. ಬ್ರಿಟನ್‌ನಲ್ಲಿ ಪತ್ತೆಯಾದಂತಹ ವೈರಸ್‌ನ  ಪ್ರಕರಣಗಳು ಡೆನ್ಮಾರ್ಕ್‌ನಲ್ಲಿ, ನೆದರ್‌ಲೆಂಡ್ಸ್‌ನಲ್ಲಿ ಪತ್ತೆಯಾಗಿವೆ.

ಯೂರೋಪ್‌ನ ಎಲ್ಲಾ ರಾಷ್ಟ್ರಗಳಿಗೆ ಈ ವೈರಸ್ ಹರಡಿರುವ ಅಪಾಯವಿದೆ. ಹೀಗಾಗಿಯೇ ಬ್ರಿಟನ್‌ ಜತೆಗೆ ವಿಮಾನ ಸಂಪರ್ಕವನ್ನು ಇತರೆ ರಾಷ್ಟ್ರಗಳು ರದ್ದುಪಡಿಸಿವೆ. ಬೆಲ್ಜಿಯಂ, ಆಸ್ಟ್ರಿಯಾ, ನೆದರ್‌ಲೆಂಡ್ಸ್‌, ಡೆನ್ಮಾರ್ಕ್, ಸ್ಪೇನ್‌ ಈಗಾಗಲೇ ಬ್ರಿಟನ್‌ನಿಂದ ವಿಮಾನ ಸಂಚಾರವನ್ನು  ರದ್ದುಪಡಿಸಿವೆ. ಜರ್ಮನಿಯೂ ಈ ಕ್ರಮವನ್ನು ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿದೆ.

ಹೊಸ ಸ್ವರೂಪದ ವೈರಸ್‌ ಹಾಲಿ ಇರುವ ವೈರಸ್ ಗಿಂತ ಶೇ.70ರಷ್ಟು ಹೆಚ್ಚು ಹರಡುವಿಕೆ ವೇಗ ಹೊಂದಿದೆ ಎಂದು ಹೇಳಲಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯು ಐರೋಪ್ಯ ರಾಷ್ಟ್ರಗಳಿಗೆ ಸೂಚನೆ ನೀಡಿದೆ.

ತುರ್ತು ಸಭೆ
ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ವೈರಸ್‌ ಬಗ್ಗೆ ಚರ್ಚಿಸಲು ಕೇಂದ್ರದ ಆರೋಗ್ಯ ಸಚಿವಾಲಯವು ಸೋಮವಾರ ಜಂಟಿ ಮೇಲ್ವಿಚಾರಣಾ ಸಮಿತಿಯ ತುರ್ತು ಸಭೆಯನ್ನು ಕರೆದಿದೆ. ಆರೋಗ್ಯ ಸೇವೆಗಳ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಂಟಿ ಮೇಲ್ವಿಚಾರಣಾ ಸಮಿತಿಯು  ಸೋಮವಾರ ಸಭೆ ಸೇರಿ ಹೊಸ ವೈರಸ್‌ ಬಗ್ಗೆ ಚರ್ಚೆ ನಡೆಸಲಿದೆ. ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಯಾಗಿರುವ ಡಾ. ರಾಡ್ರಿಕೊ ಎಚ್‌. ಆಫ್ರಿನ್‌ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *