

ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ.

ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ.




ಕಿಡ್ನಾಪ್ ಆದ ಮಹಿಳೆಯನ್ನು ರುತಿಕಾ ಎಂದು ಗುರುತಿಸಲಾಗಿದ್ದು ಈಕೆಯ ತಾಯಿ ರೂಪ ಶಿರ್ಸಿಕರ್ ಸ್ವತಃ ಮಗಳನ್ನು ಕಿಡ್ನಾಪ್ ಮಾಡಿ ಕುಟುಂಬದವರೊಡನೆ ಪರಾರಿಯಾಗಿದ್ದಾಳೆ.
ರುತಿಕಾ ಶಿರಸಿಯ ಬಸವೇಶ್ವರ ನಗರದ ಮಣಿಕಂಠ ಎಂಬುವವನನ್ನು ಪ್ರೀತಿಸಿ ವಿವಾಹವಾಗಿದ್ದಳು. ಆದರೆ ಈ ಬಗ್ಗೆ ರುತಿಕಾ ತಾಯಿ ರೂಪಾಗೆ ಒಪ್ಪಿಗೆ ಇರಲಿಲ್ಲ. ಮಗಳು ತನಗಿಷ್ಟವಿಲ್ಲದ ಯುವಕನನ್ನು ಮದುವೆಯಾಗಿದ್ದಾಳೆ ಎಂಬ ಕೋಪಕ್ಕೆ ಇಂದು ಬೆಳಿಗ್ಗೆ ಮೂವರು ಯುವಕರೊಡನೆ ರುತಿಕಾ ಮನೆಗೆ ಆಗಮಿಸಿದ್ದಾಳೆ. ಆ ವೇಳೆ ರುತಿಕಾ ಮನೆಯವರೆಲ್ಲರ ಮೇಲೆ ಪೆಪ್ಪರ್ ಸ್ಪ್ರೇ ಎರಚಿದ ರೂಪಾ ಮಗಳು ರುತಿಕಾಳನ್ನು ತಾನು ಬಂದಿದ್ದ ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಪರಾರಿಯಾಗಿದ್ದಾಳೆ


ಘಟನೆ ಸಂಬಂಧ ರುತಿಕಾ ಪತಿ ಮಣಿಕಂಠ ಶಿರಸಿ ಮಾರುಕಟ್ಟೆ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೋಲೀಸರೀಗ ರೂಪಾ ಹಾಗೂ ರುತಿಕಾಗಾಗಿ ಶೋಧ ನಡೆಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






