ಗ್ರಾ.ಪಂ. ಚುನಾವಣೆ ಗೆಲ್ಲಬೇಕಾದವರು

ಎರಡನೇ ಹಂತದ ನಾಳೆಯ ಗ್ರಾ.ಪಂ. ಚುನಾವಣೆ ಮುಗಿದರೆ ರಾಜ್ಯದಲ್ಲಿ ಮತ್ತೆ ಕನಿಷ್ಟ 5 ವರ್ಷ ಗ್ರಾ.ಪಂ. ಚುನಾವಣೆ ಇಲ್ಲ. ಈ ವರ್ಷದ ಚುನಾವಣೆ ವಿಶೇಶವೆಂದರೆ….. ಕೆಲವು ಹೊಸಮುಖಗಳು ಚುನಾವಣೆ ಎದುರಿಸಿದ್ದು ಮತ್ತು ಅದೇ ಕೆಲವು ಹಳೆ ತಲೆಗಳು ಚುನಾವಣಾ ಕಣದಲ್ಲಿರುವುದು.

ರಾಜ್ಯ, ಜಿಲ್ಲೆ, ತಾಲೂಕು ಮಟ್ಟಗಳಲ್ಲಿ ಈ ಚುನಾವಣೆ ನಡೆದು ಗ್ರಾಮೀಣ ಜನರು ಈ ವರ್ಷ ತಮ್ಮ ಹೊಸಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳುತಿದ್ದಾರೆ. ಸಿದ್ಧಾಪುರದಲ್ಲಿ ಚುನಾವಣೆಯ ತುರುಸು ತಾರಕಕ್ಕೇರಿದ್ದು ಬಿ.ಜೆ.ಪಿ.ಯಲ್ಲಿ ಬಿ.ಜೆ.ಪಿ. ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ ಮತ್ತು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡುವಿನ ಮೊದಲ ಬಲಾಬಲ ಪರೀಕ್ಷೆ ಎನ್ನಲಾಗುತ್ತಿದೆ.

ಈಗ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ ಬಣ ಸಿದ್ಧಾಪುರ ತಾಲೂಕಿನಾದ್ಯಂತ ಹೆಚ್ಚು ಜನರನ್ನು ಕಣಕ್ಕಿಳಿಸಿದ್ದಾರೆ. ಇವರ ಬಣದ ಕಾರ್ಯಕರ್ತರ ವಿರುದ್ಧ ಶಾಸಕ ವಿಶ್ವೇಶ್ವರ ಹೆಗಡೆ ಕೆಲವು ಸ್ವಜಾತಿಯವರು, ಈಗ ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡು ಕಾಂಗ್ರೆಸ್ ಬಂಡಾಯ ಮತ್ತು ಅಧೀಕೃತ ಬಿ.ಜೆ.ಪಿ. ಸೇರ್ಪಡೆಯಾದವರಿಗೆ ಧನ ಸಹಾಯ ಮಾಡಿ ಬಲಾಬಲ ಪರೀಕ್ಷೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಈ ಬಿ.ಜೆ.ಪಿ. ಬಣ ಹೋರಾಟದ ಎದುರು ಕಾಂಗ್ರೆಸ್ ಕಾರ್ಯಕರ್ತರು ಸೆಣಸುತಿದ್ದು ಕಾಂಗ್ರೆಸ್ ನಲ್ಲಿ ಕೂಡಾ ವಸಂತನಾಯ್ಕ ಬಣ ಮತ್ತು ದೇಶಪಾಂಡೆ ಪರವಾಗಿರುವ ಬಿ.ಜೆ.ಪಿ. ಬಣ ತಯಾರಾಗಿರುವ ವರ್ತಮಾನವಿದೆ.

ವಸಂತನಾಯ್ಕರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಜವಾಬ್ಧಾರಿ ನಿರ್ವಹಿಸಿರುವ ವಿ.ಎನ್. ನಾಯ್ಕ ಮತ್ತು ಕೆಲವರು ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಮತ್ತು ಸುಷ್ಮಾ ರಾಜ್ ಗೋಪಾಲರೆಡ್ಡಿ ನೀಡಿರುವ ತಲಾ ಐದು ಸಾವಿರ ರೂಪಾಯಿಗಳನ್ನು ಅಭ್ಯರ್ಥಿಗಳಿಗೆ ತಲುಪಿಸಿರುವ ವರ್ತಮಾನವಿದೆ.

ಬಿ.ಜೆ.ಪಿ. ಯಲ್ಲಿ ಕೆ.ಜಿ.ನಾಯ್ಕರ ನೇತೃತ್ವದ ಬಣ ತಮ್ಮ ಅಭ್ಯರ್ಥಿಗಳಿಗೆ ತಲಾ 10-15 ಸಾವಿರ ತಲುಪಿಸಿದ್ದರೆ, ಶಾಸಕರು, ಸಂಸದರ ಅಭ್ಯರ್ಥಿಗಳು ಅವರ ನೇರ ಸಂಪರ್ಕದ ಹುರಿಯಾಳುಗಳಿಗೆ ತಲಾ 25 ಸಾವಿರ ಚುನಾವಣಾ ವೆಚ್ಚ ಬಂದಿರುವ ವರ್ತಮಾನವಿದೆ. ಇಂಥ ಜಿದ್ದಾಜಿದ್ದಿನ ಸ್ಫರ್ಧೆಯಲ್ಲಿ ಈಗಿನ ಜಿ.ಪಂ. ಸದಸ್ಯ, ಬಿ.ಜೆ.ಪಿ. ತಾಲೂಕಾಧ್ಯಕ್ಷ ನಾಗರಾಜ್ ನಾಯ್ಕ ಬೇಡ್ಕಣಿ ಯುವಕರು, ಉತ್ತಮ ಅಭ್ಯರ್ಥಿಗಳ

ನ್ನು ಹಾಕಿರುವುದರಿಂದ ಬಿ.ಜೆ.ಪಿ. ಬೆಂಬಲಿತರೇ 20 ಗ್ರಾಮ ಪಂಚಾಯತ್ ಗಳಲ್ಲಿ ಗೆದ್ದು ಅಧಿಕಾರ ಹಿಡಿಯಲಿದ್ದಾರೆ ಎಂದರೆ,

ಜಿ.ಪಂ. ಮಾಜಿ ಸದಸ್ಯ ವಿ.ಎನ್. ನಾಯ್ಕ ಬಿ.ಜೆ.ಪಿ. ಅಂತ:ಕಲಹ, ಜೆ.ಡಿ.ಎಸ್. ನಿಷ್ಕ್ರೀಯತೆ ನಡುವೆ ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದು 20 ಕ್ಕಿಂತ ಹೆಚ್ಚು ಗ್ರಾಮ ಪಂಚಾಯತ್ ಗಳಲ್ಲಿ ಕಾಂಗ್ರೆಸ್ ಬೆಂಬಲಿತರೇ ಅಧಿಕಾರ ಹಿಡಿಯಲಿದ್ದಾರೆ ಎನ್ನುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಶಿರಸಿ ಕೊಪ್ಪದ ಅರುಣ ನಾಯ್ಕ ಕೊಪ್ಪ, ಬಿದ್ರಕಾನಿನ ರಾಮಚಂಧ್ರ ನಾಯ್ಕ ಸದೇಗುಡ್ಡೆ, ಕೋಲಶಿರ್ಸಿಯ ಬಾಲಕೃಷ್ಣ ನಾಯ್ಕ, ಗೋಪಾಲ ನಾಯ್ಕ, ಬೇಡ್ಕಣಿಯ ಪದ್ಮಪ್ರೀಯಾ ನಾಯ್ಕ, ವೀರಭದ್ರ ನಾಯ್ಕ ಮಳಲವಳ್ಳಿ, ಕೆ.ಟಿ. ನಾಯ್ಕ ಹೆಗ್ಗೇರಿ ಮತ್ತು ಎಸ್.ಆರ್. ನಾಯ್ಕ, ಹೆಗ್ಗರಣಿಯ ಶೇಖರ್ ನಾಯ್ಕ, ಬಿಕ್ಕಳಸೆಯ ಅಣ್ಣಪ್ಪ ನಾಯ್ಕ, ಶಿರಳಗಿಯ ಅಣ್ಣಪ್ಪ ನಾಯ್ಕ, ಬಿಳಗಿಯ ಸುವರ್ಣ ನಾಯ್ಕ, ಇಟಗಿಯ ಮಹಾಬಲೇಶ್ವರ ಭಟ್, ದೊಡ್ಮನೆಯ ಸುಬ್ರಾಯ ಹೆಗಡೆ ಗೋಳಗೋಡಿನ ಗಂಗಾಧರ ನಾಯ್ಕ ಸೇರಿದ ಕೆಲವರು ಆಯ್ಕೆಯಾದರೆ ಉತ್ತಮ ಎನ್ನುವ ಸಾರ್ವಜನಿಕ ಅಭಿಪ್ರಾಯವಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *