ಕೊಬ್ರಿ ಹೋರಿ ಕ್ರೀಡಾಕೂಟದಲ್ಲಿ ದುರಂತ: ಕೆರೆಗೆ ಹಾರಿದ ಎತ್ತು ನೀರಲ್ಲಿ ಮುಳುಗಿ ಸಾವು

ಹಾವೇರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಗ್ರಾಮೀಣ ಕ್ರೀಡೆಯಾದ ಕೋಬ್ರಿ ಹೋರಿ ಭಾಗವಾದ ಎತ್ತೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಹಾವೇರಿಯ ಸುತಗಟ್ಟಿ ಗ್ರಾಮದ ಕೆರೆಯಲ್ಲಿ ಎತ್ತು ಮುಳುಗಿ ಸಾವನ್ನಪ್ಪಿದೆ. ಕ್ರೀಡೆಯ ನಡುವೆ ತನ್ನನ್ನು ಬೆನ್ನಟ್ಟುತ್ತಿದ್ದವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಎತ್ತು ಪ್ರೇಕ್ಷಕರ ಗುಂಪಿನ ಮೂಲಕ ನುಗ್ಗಿ ಕೆರೆಗೆ ಹಾರಿದ

ಹುಬ್ಬಳ್ಳಿ: ಹಾವೇರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಗ್ರಾಮೀಣ ಕ್ರೀಡೆಯಾದ ಕೊಬ್ರಿ ಹೋರಿ ಭಾಗವಾದ ಎತ್ತೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಹಾವೇರಿಯ ಸುತಗಟ್ಟಿ ಗ್ರಾಮದ ಕೆರೆಯಲ್ಲಿ ಎತ್ತು ಮುಳುಗಿ ಸಾವನ್ನಪ್ಪಿದೆ. ಕ್ರೀಡೆಯ ನಡುವೆ ತನ್ನನ್ನು ಬೆನ್ನಟ್ಟುತ್ತಿದ್ದವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಎತ್ತು ಪ್ರೇಕ್ಷಕರ ಗುಂಪಿನ ಮೂಲಕ ನುಗ್ಗಿ ಕೆರೆಗೆ ಹಾರಿದೆ.

ಎತ್ತು ಕೆರೆಯಲ್ಲಿ ದೂರಕ್ಕೆ ಈಜಲು ಯತ್ನಿಸಿದರೂ ವಿಫಲವಾಯಿತು ಮತ್ತು ಪ್ರಾಣ ಕಳೆದುಕೊಂಡಿತು. ಕೊಬ್ರಿ ಹೋರಿ ಕ್ರೀಡೆಯಲ್ಲಿ ಮೃತಪಟ್ಟ ಎತ್ತನ್ನು ಬಲರಾಮ ಎನ್ನಲಾಗಿದ್ದು ಇದು ಎಲ್ಲರ ಆಕರ್ಷಣೆಯ ಕೇಂದ್ರವಾಗಿತ್ತು.

ಕೊರೋನಾ ಸಾಂಕ್ರಾಮಿಕದ ನಡುವೆ ಇಷ್ಟು ದೊಡ್ಡ ಕೂಟಕ್ಕೆ ಜಿಲ್ಲಾಡಳಿತ ಹೇಗೆ ಅವಕಾಶ ನೀಡಿತು ಎಂಬ ಬಗ್ಗೆಯೂ ಈ ಘಟನೆಯು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸುತಗಟ್ಟಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ನೂರಾರು ಜನರು ಸೇರಿದ್ದರು. ಕೋಬ್ರಿ ಹೋರಿ ಕ್ರೀಡೆ  ಅಲಂಕೃತ ಎತ್ತುಗಳನ್ನು ಜನಸಮೂಹದ ಮೂಲಕ ಓಡಿಸುವ ಆಟವಾಗಿದ್ದು ಜನರು ಎತ್ತನ್ನು ಹಿಡಿಯಲು ಪ್ರಯತ್ನಿಸುತ್ತಾರೆ. ಸಾಂಪ್ರದಾಯಿಕ ಕಾರ್ಯಕ್ರಮವನ್ನು ಹಾವೇರಿಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಆಡಲಾಗುತ್ತದೆ.

ಇಷ್ಟು ದೊಡ್ಡ ಕೂಟಕ್ಕೆ ಸಂಘಟಕರು ಅನುಮತಿ ಕೋರಿಲ್ಲ ಎಂದು ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. “ಇದಲ್ಲದೆ ಜನರು ಬೃಹತ್ ಉತ್ಸವ, ಕಾರ್ಯಕ್ರಮಗಳನ್ನು ನಡೆಸದಂತೆ ಜನರಿಗೆ ಮನವಿ ಮಾಡುವ ಮೂಲಕ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇಲ್ಲಿಯವರೆಗೆ ಯಾವುದೇ ಪ್ರಕರಣಗಳನ್ನು ದಾಖಲಿಸಲಾಗಿಲ್ಲ. ಯಾರಾದರೂ ದೂರು ನೀಡಲು ಮುಂದೆ ಬಂದರೆ ನಾವು ಈ ಬಗ್ಗೆ ಕ್ರಮ ಜರುಗಿಸುತ್ತೇವೆ” ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಲ್ಲಿಕಟ್ಟು ಕ್ರೀಡೆಯಂತೆಯೇ ಕೊಬ್ರಿ ಹೋರಿ ಸಹ ಇಂತಹಾ ದುರಂತಗಳಿಂದ ಮುಕ್ತವಾಗಿಲ್ಲ.ಈ ಕ್ರೀಡೆಯ ವೇಳೆ ಹಿಂದೆ ಸಹ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜನವರಿ 2018 ರಲ್ಲಿ ಸಹ ಇದೇ ಕೊಬ್ರಿ ಹೋರಿ ನಡೆಯುವಾಗ ಒಬ್ಬ ವ್ಯಕ್ತಿ ಗಾಯಗೊಂಡು ಪ್ರಾಣ ಬಿಟ್ಟಿದ್ದನು.ಅಲ್ಲದೆ ಇನ್ನೂ ಆರು ಜನರು ಗಾಯಗೊಂಡಿದ್ದರು. ಕೊಬ್ರಿ ಹೋರಿ ಕಾರ್ಯಕ್ರಮವನ್ನು ಜನದಟ್ಟಣೆಯ ಕಾರ್ಯಕ್ರಮ ಎನ್ನಲಾಗುತ್ತದೆ. ಇದಕ್ಕಾಗಿ ಸುತ್ತಮುತ್ತಲಿನ ಜಿಲ್ಲೆಗಳ ಜನರು ಕೂಡ ಈ ಗ್ರಾಮೀಣ ಸಾಂಪ್ರದಾಯಿಕ ಕ್ರೀಡೆಯನ್ನು ವೀಕ್ಷಿಸಲು ಬರುತ್ತಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *