ಬದುಕು ಮುಗಿಸಿದ ಡಾ. ಸುರೇಶ್ ನಾಯಕ

ಡಾ. ಸುರೇಶ್ ನಾಯಕ ಎಂದಾಗ ನಮಗೆ ತಟ್ಟನೆ ನೆನಪಾಗುವುದು ಯಶವಂತ ಚಿತ್ತಾಲರ ಬದುಕು’ಬರಹದ ಹರಿಕಾರ. ಹೌದು ಕೊಂಕಣ ರೈಲ್ವೆ ಅಧಿಕಾರಿಯಾಗಿದ್ದು ಕೊಂಡು ಸಾಹಿತ್ಯ ತಮ್ಮ ಬದುಕು ಉಸಿರು ಎನ್ನುತ್ತಲೇ ಪ್ರಯಾಣದ ವೇಳೆಯಲ್ಲಿ ಪುಸ್ತಕವನ್ನು ತಮ್ಮ ಸೂಟ್ಕೇಸ್ ನಲ್ಲಿ ಹಾಕಿಕೊಂಡೆ ಬಿಡುವಿನ ಸಮಯದಲ್ಲಿ ಸಾಹಿತ್ಯವಲಯದಲ್ಲಿ ಗುರುತಿಸಿಕೊಂಡವರು.

ಡಾ. ಸೈಯದ್ ಜಮೀರುಲ್ಲಾ ಷರೀಫ್ ರ ಮಾರ್ಗದರ್ಶನದಲ್ಲಿ ಸುರೇಶ್ ನಾಯಕ್ ಹಾಗೂ ನಾನು ಒಟ್ಟೊಟ್ಟಿಗೆ ಪಿ ಎಚ್ ಡಿ ಮಾರ್ಗದರ್ಶನದಲ್ಲಿ ಪದವಿ ಪಡೆದುಕೊಂಡವರು. ಯಶವಂತ ಚಿತ್ತಾಲರ ಬದುಕು’ಬರಹ ಸಂಶೋಧನೆಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿತು.

ಅಷ್ಟಕ್ಕೇ ಸುಮ್ಮನಾಗದ ಸುರೇಶ್ ನಾಯಕ್ ಸಂಶೋಧನಾ ದೀಪ, ಅನನ್ಯ ಕಾದಂಬರಿಕಾರ ಯಶವಂತ ಚಿತ್ತಾಲ್, ಕನಕನ ತಲ್ಲಣಗಳು, ಹೊಳೆಸಾಲು ಸೇರಿದಂತೆ ಹತ್ತಕ್ಕೂ ಹೆಚ್ಚು ಪ್ರತಿಯನ್ನು ಕನ್ನಡ ಸಾಹಿತ್ಯಲೋಕಕ್ಕೆ ನೀಡಿದ್ದಾರೆ.ತಮ್ಮ ತಂದೆಯ ಹೆಸರಿನಲ್ಲಿ ಶ್ರೀ ನಾರಾಯಣ ಸಾಹಿತ್ಯಕ-ಸಾಂಸ್ಕೃತಿಕ ಪ್ರತಿಷ್ಠಾನ’ವನ್ನು ಸ್ಥಾಪಿಸಿಕೊಂಡು ಅದರ ಮೂಲಕ ಜಾನಪದ ಯಕ್ಷಗಾನ ಸಾಹಿತ್ಯಕ ಚರ್ಚೆ ಕಮ್ಮಟವನ್ನು ಏರ್ಪಡಿಸಿ ಸಾಹಿತ್ಯದ ಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದರು.

ಡಾಕ್ಟರ್ ಸೈಯದ್ ಜಮೀರುಲ್ಲಾ ಷರೀಫ್ ಸಾಹಿತ್ಯ ಪ್ರತಿಷ್ಠಾನದ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು.ತಮ್ಮ ತೀಕ್ಷ್ಣ ವಿಮರ್ಶೆ ಮೂಲಕ ಬಹುಬೇಗ ನಾಡಿಗೆ ಪರಿಚಿತರಾದವರು.2020 ನಮಗೆ ಬಹಳ ದೊಡ್ಡ ದುರಂತ ಕೋವಿಡ್ 19ರ ಕಾರಣದಿಂದ ಆತ್ಮೀಯರಾದ ಹಲವು ಒಡನಾಡಿಗಳನ್ನು ನಾವು ಕಳೆದುಕೊಂಡಿದ್ದು ಇದೀಗ ಗೆಳೆಯ ಆತ್ಮೀಯ ಒಡನಾಡಿ ಸುರೇಶ ನಾಯಕ ಇಂದು 31-12-2020 ಮುಂಜಾನೆ 9:00 ಗಂಟೆಗೆ ನಮ್ಮನ್ನೆಲ್ಲ ಬಿಟ್ಟು ಇಹಲೋಕ ತ್ಯಜಿಸಿರುವುದು ಅವರ ಕುಟುಂಬಕ್ಕೆ , ಅವರ ಒಡನಾಡಿ ಗಳಿಗೆ ಹಾಗೂ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.

ಅವರ ಪತ್ನಿ ಸುವರ್ಣ ಮತ್ತು ಮಕ್ಕಳಿಗೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿ ಶ್ರೀದುರ್ಗಾಪರಮೇಶ್ವರಿ ಕರುಣಿಸಲಿ ಎಂಬ ಪ್ರಾರ್ಥನೆ.ಅಪರಿಚಿತರಾಗಿ ಬಂದು ಪರಿಚಿತರಾಗಿ ಹೋಗುವಾಗ ನೆನಪೊಂದೇ ಶಾಶ್ವತ ಎನ್ನುವಂತೆ ಸುರೇಶ್ ನಾಯಕ್ ಅವರ ಪ್ರೀತಿ ಸಾಹಿತ್ಯದ ಒಡನಾಟ ಎಲ್ಲವೂ ನೆನಪಿನ ಬುತ್ತಿಯಲ್ಲಿ ಇಟ್ಟುಕೊಳ್ಳುತ್ತಾ ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಇಂದು ಮತ್ತೊಮ್ಮೆ ಪ್ರಾರ್ಥಿಸಿಕೊಳ್ಳುತ್ತೇನೆ.ಓಂ ಶಾಂತಿ.

ಡಾ. ಶ್ರೀಧರ್ ಗೌಡ ಉಪ್ಪಿನ ಗಣಪತಿ

ಡಾ.ಸುರೇಶ್ ನಾಯ್ಕ ನಮ್ಮ ಸಮಾಜಮುಖಿ ಪತ್ರಿಕೆಯ ಬಹುಕಾಲದ ಓದುಗರಾಗಿದ್ದರು. ಸಮಾಜಮುಖಿ ವಾರ ಪತ್ರಿಕೆಗೆ ಬರೆಯುತಿದ್ದ ಅವರು ಕೆಲವು ಸಾಹಿತಿಗಳು, ಸಾಹಿತ್ಯ ಕೃತಿಗಳ ಬಗ್ಗೆ ಆಗಾಗ ಬರೆದುಕೊಟ್ಟವರು. ಕಳೆದ ದಶಕದಲ್ಲಿ ಅಪರೂಪವಾಗಿದ್ದ ಅವರ ನಿಧನ ನಮ್ಮ ಸಮಾಜಮುಖಿ ಬಳಗಕ್ಕೂ ಅತೀವ ನೋವು ತಂದಿದೆ. ಕನ್ನಡ ಸಾರಸ್ವತ ಲೋಕದ ಬಿಂದುವಂತಿದ್ದು ಸಿಂಧುವಾಗಿದ್ದ ಅವರಿಗೆ ನಮ್ಮ ನಮನ. ಅವರ ಕುಟುಂಬ ವರ್ಗ ಬೇಗ ಸುಧಾರಿಸಿಕೊಳ್ಳುವಂತಾಗಲಿ – ಕನ್ನೇಶ್

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *