ಬದುಕು ಮುಗಿಸಿದ ಡಾ. ಸುರೇಶ್ ನಾಯಕ

ಡಾ. ಸುರೇಶ್ ನಾಯಕ ಎಂದಾಗ ನಮಗೆ ತಟ್ಟನೆ ನೆನಪಾಗುವುದು ಯಶವಂತ ಚಿತ್ತಾಲರ ಬದುಕು’ಬರಹದ ಹರಿಕಾರ. ಹೌದು ಕೊಂಕಣ ರೈಲ್ವೆ ಅಧಿಕಾರಿಯಾಗಿದ್ದು ಕೊಂಡು ಸಾಹಿತ್ಯ ತಮ್ಮ ಬದುಕು ಉಸಿರು ಎನ್ನುತ್ತಲೇ ಪ್ರಯಾಣದ ವೇಳೆಯಲ್ಲಿ ಪುಸ್ತಕವನ್ನು ತಮ್ಮ ಸೂಟ್ಕೇಸ್ ನಲ್ಲಿ ಹಾಕಿಕೊಂಡೆ ಬಿಡುವಿನ ಸಮಯದಲ್ಲಿ ಸಾಹಿತ್ಯವಲಯದಲ್ಲಿ ಗುರುತಿಸಿಕೊಂಡವರು.

ಡಾ. ಸೈಯದ್ ಜಮೀರುಲ್ಲಾ ಷರೀಫ್ ರ ಮಾರ್ಗದರ್ಶನದಲ್ಲಿ ಸುರೇಶ್ ನಾಯಕ್ ಹಾಗೂ ನಾನು ಒಟ್ಟೊಟ್ಟಿಗೆ ಪಿ ಎಚ್ ಡಿ ಮಾರ್ಗದರ್ಶನದಲ್ಲಿ ಪದವಿ ಪಡೆದುಕೊಂಡವರು. ಯಶವಂತ ಚಿತ್ತಾಲರ ಬದುಕು’ಬರಹ ಸಂಶೋಧನೆಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿತು.

ಅಷ್ಟಕ್ಕೇ ಸುಮ್ಮನಾಗದ ಸುರೇಶ್ ನಾಯಕ್ ಸಂಶೋಧನಾ ದೀಪ, ಅನನ್ಯ ಕಾದಂಬರಿಕಾರ ಯಶವಂತ ಚಿತ್ತಾಲ್, ಕನಕನ ತಲ್ಲಣಗಳು, ಹೊಳೆಸಾಲು ಸೇರಿದಂತೆ ಹತ್ತಕ್ಕೂ ಹೆಚ್ಚು ಪ್ರತಿಯನ್ನು ಕನ್ನಡ ಸಾಹಿತ್ಯಲೋಕಕ್ಕೆ ನೀಡಿದ್ದಾರೆ.ತಮ್ಮ ತಂದೆಯ ಹೆಸರಿನಲ್ಲಿ ಶ್ರೀ ನಾರಾಯಣ ಸಾಹಿತ್ಯಕ-ಸಾಂಸ್ಕೃತಿಕ ಪ್ರತಿಷ್ಠಾನ’ವನ್ನು ಸ್ಥಾಪಿಸಿಕೊಂಡು ಅದರ ಮೂಲಕ ಜಾನಪದ ಯಕ್ಷಗಾನ ಸಾಹಿತ್ಯಕ ಚರ್ಚೆ ಕಮ್ಮಟವನ್ನು ಏರ್ಪಡಿಸಿ ಸಾಹಿತ್ಯದ ಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದರು.

ಡಾಕ್ಟರ್ ಸೈಯದ್ ಜಮೀರುಲ್ಲಾ ಷರೀಫ್ ಸಾಹಿತ್ಯ ಪ್ರತಿಷ್ಠಾನದ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು.ತಮ್ಮ ತೀಕ್ಷ್ಣ ವಿಮರ್ಶೆ ಮೂಲಕ ಬಹುಬೇಗ ನಾಡಿಗೆ ಪರಿಚಿತರಾದವರು.2020 ನಮಗೆ ಬಹಳ ದೊಡ್ಡ ದುರಂತ ಕೋವಿಡ್ 19ರ ಕಾರಣದಿಂದ ಆತ್ಮೀಯರಾದ ಹಲವು ಒಡನಾಡಿಗಳನ್ನು ನಾವು ಕಳೆದುಕೊಂಡಿದ್ದು ಇದೀಗ ಗೆಳೆಯ ಆತ್ಮೀಯ ಒಡನಾಡಿ ಸುರೇಶ ನಾಯಕ ಇಂದು 31-12-2020 ಮುಂಜಾನೆ 9:00 ಗಂಟೆಗೆ ನಮ್ಮನ್ನೆಲ್ಲ ಬಿಟ್ಟು ಇಹಲೋಕ ತ್ಯಜಿಸಿರುವುದು ಅವರ ಕುಟುಂಬಕ್ಕೆ , ಅವರ ಒಡನಾಡಿ ಗಳಿಗೆ ಹಾಗೂ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.

ಅವರ ಪತ್ನಿ ಸುವರ್ಣ ಮತ್ತು ಮಕ್ಕಳಿಗೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿ ಶ್ರೀದುರ್ಗಾಪರಮೇಶ್ವರಿ ಕರುಣಿಸಲಿ ಎಂಬ ಪ್ರಾರ್ಥನೆ.ಅಪರಿಚಿತರಾಗಿ ಬಂದು ಪರಿಚಿತರಾಗಿ ಹೋಗುವಾಗ ನೆನಪೊಂದೇ ಶಾಶ್ವತ ಎನ್ನುವಂತೆ ಸುರೇಶ್ ನಾಯಕ್ ಅವರ ಪ್ರೀತಿ ಸಾಹಿತ್ಯದ ಒಡನಾಟ ಎಲ್ಲವೂ ನೆನಪಿನ ಬುತ್ತಿಯಲ್ಲಿ ಇಟ್ಟುಕೊಳ್ಳುತ್ತಾ ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಇಂದು ಮತ್ತೊಮ್ಮೆ ಪ್ರಾರ್ಥಿಸಿಕೊಳ್ಳುತ್ತೇನೆ.ಓಂ ಶಾಂತಿ.

ಡಾ. ಶ್ರೀಧರ್ ಗೌಡ ಉಪ್ಪಿನ ಗಣಪತಿ

ಡಾ.ಸುರೇಶ್ ನಾಯ್ಕ ನಮ್ಮ ಸಮಾಜಮುಖಿ ಪತ್ರಿಕೆಯ ಬಹುಕಾಲದ ಓದುಗರಾಗಿದ್ದರು. ಸಮಾಜಮುಖಿ ವಾರ ಪತ್ರಿಕೆಗೆ ಬರೆಯುತಿದ್ದ ಅವರು ಕೆಲವು ಸಾಹಿತಿಗಳು, ಸಾಹಿತ್ಯ ಕೃತಿಗಳ ಬಗ್ಗೆ ಆಗಾಗ ಬರೆದುಕೊಟ್ಟವರು. ಕಳೆದ ದಶಕದಲ್ಲಿ ಅಪರೂಪವಾಗಿದ್ದ ಅವರ ನಿಧನ ನಮ್ಮ ಸಮಾಜಮುಖಿ ಬಳಗಕ್ಕೂ ಅತೀವ ನೋವು ತಂದಿದೆ. ಕನ್ನಡ ಸಾರಸ್ವತ ಲೋಕದ ಬಿಂದುವಂತಿದ್ದು ಸಿಂಧುವಾಗಿದ್ದ ಅವರಿಗೆ ನಮ್ಮ ನಮನ. ಅವರ ಕುಟುಂಬ ವರ್ಗ ಬೇಗ ಸುಧಾರಿಸಿಕೊಳ್ಳುವಂತಾಗಲಿ – ಕನ್ನೇಶ್

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *