ಸಂಘ ಶಕ್ತಿಯ ವಿರುದ್ಧ ದಲಿತ ಶಕ್ತಿಯ ಗೆಲುವು! ತಾನು ಕಸಗುಡಿಸುತ್ತಿದ್ದ ಪಂಚಾಯ್ತಿಗೆ ಈಗ ಅಧ್ಯಕ್ಷೆಯಾದ ಮಹಿಳೆ

ಶಿರಸಿ-ಸಿದ್ಧಾಪುರ, ಉತ್ತರ ಕನ್ನಡ, ಕರಾವಳಿ ಉದ್ದಕ್ಕೂ ವಿಸ್ತರಿಸಿದ ಸಂಘ ಶಕ್ತಿಯ ವಿರುದ್ಧ ಬಹುಜನಶಕ್ತಿ ಅಥವಾ ದಲಿತಶಕ್ತಿ ಶಕ್ತಿಯುತವಾಗುವ ಲಕ್ಷಣ ಈ ಗ್ರಾಮ ಪಂಚಾಯತ್ ಚುನಾವಣೆ ಪ್ರತಿಬಿಂಬಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಪ್ರಮಾಣದ ಸಾವಿರ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್ ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಹೆಚ್ಚು ಶಾಸಕರು, ಸಂಸದರನ್ನು ಹೊಂದಿರುವ ಬಿ.ಜೆ.ಪಿ. ಮೂರಂಕಿ ಸಂಖ್ಯೆಗಳನ್ನು ದಾಟಿಲ್ಲ, ಜೆ.ಡಿ.ಎಸ್. ಮೂರಂಕಿಗೆ ಸಮಾಧಾನ ಪಟ್ಟಿದೆ.

ಬನವಾಸಿಯಲ್ಲಿ 9 ವಾರ್ಡ್ ಗಳಲ್ಲಿ 9 ಕಡೆ ಮುಸ್ಲಿಂ ಸಮೂದಾಯದವರೇ ಆಯ್ಕೆಯಾಗಿ ಆಡಳಿತಾರೂಢ ಬಿ.ಜೆ.ಪಿ.ಗೆ ಮುಟ್ಟಿನೋಡಿಕೊಳ್ಳುವಂಥಹ ಏಟು ನೀಡಿದೆ.

ಸಿದ್ಧಾಪುರದಲ್ಲಿ ಆಡಳಿತ ಬಿ.ಜೆ.ಪಿ 23 ಗ್ರಾಮ ಪಂಚಾಯತ್ಗಳ 46 ಪರಿಶಿಷ್ಟರ ಸ್ಥಾನಗಳಿಗೆ ಮಹಿಳಾ ಮೀಸಲಾತಿ ನಿಗದಿಪಡಿಸಿ ಪುರುಷ ಪರಿಶಿಷ್ಟರು ಸ್ಫರ್ಧಿಸದಂತೆ ಮೀಸಲಾತಿ ನಿಗದಿ ಮಾಡಿತ್ತು.ಈ ಉಳಿಗಮಾನ್ಯ ಬಿ.ಜೆ.ಪಿ. ಮನಸ್ಥಿತಿಗೆ ಸೆಡ್ಡುಹೊಡೆದಿರುವ ಕಾನಗೋಡು ಗ್ರಾ.ಪಂ. ನ ಮಾಜಿ ಅಧ್ಯಕ್ಷ ಶಿವಾನಂದ ಎಚ್.ಕೆ. ಸಾಮಾನ್ಯ ಕ್ಷೇತ್ರದಲ್ಲಿ ಸ್ಫರ್ಧಿಸಿ ಅನಂತಕುಮಾರ ಹೆಗಡೆ ಶಿಷ್ಯ ಮತ್ತು ಆರ್.ಎಸ್.ಎಸ್. ವ್ಯಕ್ತಿಯೆದುರು ಜಯ ಗಳಿಸಿ ದಾಖಲೆ ಮಾಡಿದ್ದಾರೆ.

ತಾನು ಕಸಗುಡಿಸುತ್ತಿದ್ದ ಪಂಚಾಯ್ತಿಗೆ ಈಗ ಅಧ್ಯಕ್ಷೆಯಾದ ಮಹಿಳೆ, ಥ್ಯಾಂಕ್ಸ್ ಟು ಪ್ರಜಾಪ್ರಭುತ್ವ!

ಸುಮಾರು ಒಂದು ದಶಕದ ಹಿಂದೆ ಕೇರಳದ ಪಥನಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಅರೆಕಾಲಿಕ ಸ್ವೀಪರ್ (ಕಸಗುಡಿಸುವ ಕೆಲಸ) ಆಗಿ ಕೆಲಸ ಮಾಡುತ್ತಿದ್ದ ಆನಂದವಳ್ಳಿ ಅವರು, ತಾನೂ ಒಂದು ದಿನ ಈ ಸ್ಥಳೀಯ ಸಂಸ್ಥೆಯ ಮುಖ್ಯಸ್ಥೆಯಾಗಬಹುದು ಎಂದು ಯಾವತ್ತೂ ಭಾವಿಸಿರಲಿಲ್ಲ.

anandavalli

ಕೊಲ್ಲಂ: ಸುಮಾರು ಒಂದು ದಶಕದ ಹಿಂದೆ ಕೇರಳದ ಪಥನಪುರಂ ಬ್ಲಾಕ್ ಪಂಚಾಯಿತಿಯಲ್ಲಿ ಅರೆಕಾಲಿಕ ಸ್ವೀಪರ್ (ಕಸಗುಡಿಸುವ ಕೆಲಸ) ಆಗಿ ಕೆಲಸ ಮಾಡುತ್ತಿದ್ದ ಆನಂದವಳ್ಳಿ , ತಾನೂ ಒಂದು ದಿನ ಈ ಸ್ಥಳೀಯ ಸಂಸ್ಥೆಯ ಮುಖ್ಯಸ್ಥೆಯಾಗಬಹುದು ಎಂದು ಯಾವತ್ತೂ ಭಾವಿಸಿರಲಿಲ್ಲ. ಆದರೆ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಾದರೂ ಪ್ರಭು ಆಗಬಹುದು ಎಂಬುದನ್ನು ಈ ಮಹಿಳೆಯ ಮೂಲಕ ಮತ್ತೊಮ್ಮೆ ಸಾಬೀತಾಗಿದೆ.

ದಮನಿತ ವರ್ಗಗಳ ಸಬಲೀಕರಣದ ಸಂಕೇತವಾಗಿ, ಪರಿಶಿಷ್ಟ ಜಾತಿಗೆ ಸೇರಿದ 46 ವರ್ಷದ ಸಿಪಿಎಂ ಸದಸ್ಯೆ ಆನಂದವಳ್ಳಿ ಅವರು ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

“ನಾನು ಅಂತಹ ಉನ್ನತ ಹುದ್ದೆಯನ್ನು, ಅದೂ ನಾನು ಅರೆಕಾಲಿಕ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಅಲಂಕರಿಸುತ್ತೇನೆ ಎಂದು ಎಂದೂ ಯೋಚಿಸಿರಲಿಲ್ಲ” ಎಂದು ಇಬ್ಬರು ಮಕ್ಕಳ ತಾಯಿ ಆನಂದವಳ್ಳಿ ಅವರು ಹೇಳಿದ್ದಾರೆ.

ಇತ್ತೀಚೆಗೆ ನಡೆದ ಪಂಚಾಯಿತಿ ಚುನಾವಣೆಯಲ್ಲಿ ಬಹುಪಾಲು ಸ್ಥಾನಗಳನ್ನು ಗೆದ್ದ ಸಿಪಿಎಂ ನೇತೃತ್ವದ ಎಲ್‌ಡಿಎಫ್, ಪಥನಪುರಂ ಬ್ಲಾಕ್ ಪಂಚಾಯತ್ ಅಧ್ಯಕ್ಷ ಹುದ್ದೆಗೆ ಆನಂದವಳ್ಳಿ ಅವರ ಹೆಸರನ್ನು ಸೂಚಿಸಿತ್ತು. 13 ಸದಸ್ಯ ಬಲದ ಈ ಬ್ಲಾಕ್ ಪಂಚಾಯತ್‌ನಲ್ಲಿ ಎಲ್‌ಡಿಎಫ್ ಏಳು ಸ್ಥಾನಗಳನ್ನು ಗೆದ್ದರೆ, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಆರು ಸ್ಥಾನಗಳನ್ನು ಗಳಿಸಿತ್ತು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *