ಕಾನಸೂರಿನ ಆರೋಪಿಗಳ ಮೇಲೆ ಶೀಘ್ರ-ಸೂಕ್ತ ಕ್ರಮಕ್ಕೆ bsndp ಆಗ್ರಹ

ಕಾನಸೂರಿನ ಅಣ್ಣಪ್ಪ ನಾಯ್ಕರ ಮೇಲೆ ಹಲ್ಲೆಮಾಡಿದ ಕುಟುಂಬವನ್ನು ತಕ್ಷಣ ಬಂಧಿಸಿ,ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ಪದಾಧಿಕಾರಿಗಳು ಈ ಗಲಾಟೆಯಲ್ಲಿ ಆರೋಪಿಯಾಗಿರುವ ಸರ್ಕಾರಿ ನೌಕರರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ಒತ್ತಾಯಮಾಡಿದ ಬಿ.ಎಸ್.ಎನ್.ಡಿ.ಪಿ. ಸಿದ್ಧಾಪುರ ತಾಲೂಕು ಉತ್ತರ ಕನ್ನಡದಲ್ಲಿ ಬಹುಸಂಖ್ಯಾತರಾದ ದೀವರ ಮೇಲೆ ಇಂಥ ಕಿರುಕುಳ,ಹಲ್ಲೆ,ಶೋಷಣೆ ನಡೆಯುತ್ತಿದೆ. ಈ ವಿದ್ಯಮಾನ ನಿಲ್ಲದಿದ್ದರೆ ಪರಿಸ್ಥಿತಿ ಹದಗೆಡಲು ಜಿಲ್ಲಾಡಳಿತವೇ ಅನುವುಮಾಡಿಕೊಟ್ಟಂತಾಗುತ್ತದೆ. ಕಾನಸೂರು ಪ್ರಕರಣದಲ್ಲಿ ಆರೋಪಿಗಳ ಬಂಧನ, ಸರ್ಕಾರಿ ನೌಕರನ ಅಮಾನತ್ತು ಮಾಡಿ ಬಾಧಿತರಿಗೆ ನ್ಯಾಯ ಒದಗಿಸಬೇಕು. ಇವರಿಗೆ ಜಾಮೀನು ಕೂಡಾ ನೀಡಬಾರದು. ಈ ಬೇಡಿಕೆಗಳು ಈಡೇರದಿದ್ದರೆ ಇದೇ ವಾರ ಪ್ರತಿಭಟನೆ ಮಾಡಿ ನ್ಯಾಯಕ್ಕಾಗಿ ಆಗ್ರಹಿಸುವುದಾಗಿ ಎಚ್ಚರಿಸಿದೆ,

ಕಾನಸೂರಿನ ಘಟನೆ ಅಕ್ಷಮ್ಯ ಅಪರಾಧ, ನಮ್ಮ ಸಮಾಜದ ಮೇಲೆ ಯಾರೇ ದಬ್ಬಾಳಿಕೆ ಮಾಡಿದರೂ ಅವರಿಗೆ ಸೂಕ್ತ ಉತ್ತರ ನೀಡಲು ಸಮಾಜ ಬದ್ಧವಾಗಿದೆ, ಬಿ.ಎಸ್.ಎನ್.ಡಿ.ಪಿ.ಇದರ ನೇತೃತ್ವ ವಹಿಸಲು ಸಿದ್ಧ.- ವಿನಾಯಕ ನಾಯ್ಕ ಬಿ.ಎಸ್.ಎನ್.ಡಿ.ಪಿ. (ತಾಲೂಕಾ ಅಧ್ಯಕ್ಷ)

ಕಾನಸೂರು ಮಾತ್ರವಲ್ಲ ಜಿಲ್ಲೆ, ರಾಜ್ಯದ ಎಲ್ಲೇ ಬಹುಸಂಖ್ಯಾತರ ಮೇಲೆ ಹಲ್ಲೆಯಾದರೆ ಪರಿಣಾಮ ಬೇರೆಯಾಗಲಿದೆ.ಕಾನಸೂರಿನ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ.- ಎ.ಜಿ.ನಾಯ್ಕ, ಕಡಕೇರಿ,bsndpಉಪಾಧ್ಯಕ್ಷ

ಕಾನಸೂರಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ ಬಗ್ಗೆ ಸಮಾಜಮುಖಿ ಗೆ ಮಾಹಿತಿ ಸಿಕ್ಕಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *