ಸತತ ಮೂರು ಬಾರಿ ವಿಜಯದ ಮಾಲೆ ಧರಿಸಿದ ರಾಮಕೃಷ್ಣ ನಾಯ್ಕ

ರಾಮಕೃಷ್ಣ ನಾಯ್ಕ ಕಾಂಗ್ರೆಸ್ ಇಂಟೆಕ್ ಘಟಕದ ತಾಲೂಕಾ ಅಧ್ಯಕ್ಷರು, ಕೃಷಿಕರು.

ಸಿದ್ಧಾಪುರಕ್ಯಾದಗಿ ಪಂಚಾಯತ್ ನ ಕೃಷಿಕರಾಗಿದ್ದ ನಾಯ್ಕ ಕಳೆದ ಮೂರು ಅವಧಿಗಳ ಹಿಂದೆ ಕ್ಯಾದಗಿ ಗುಬ್ಬಗೋಡು ವಾರ್ಡನಿಂದ ಗ್ರಾಮ ಪಂಚಾಯತ್ ಪ್ರವೇಶಿಸುತ್ತಾರೆ. ನಂತರ ಇದೇ ಕ್ಷೇತ್ರದಿಂದ ಇವರ ಪತ್ನಿ ಗ್ರಾ.ಪಂ. ಸದಸ್ಯರಾಗುತ್ತಾರೆ.ನಂತರ ಈ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಇದೇ ವಾರ್ಡ್ ನಿಂದ ರಾಮಕೃಷ್ಣ ನಾಯ್ಕ ಶಿರೂರು ಆಯ್ಕೆಯಾಗುತ್ತಾರೆ. ಸಿದ್ಧಾಪುರ ದೊಡ್ಮನೆ ಜಿ.ಪಂ. ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂದೇ ಪ್ರಸಿದ್ಧ ಆದರೆ ಈ ಬಾರಿ ಈ ಕ್ಷೇತ್ರದಲ್ಲಿ ಬಿ.ಜೆ.ಪಿ. ಬೆಂಬಲಿಗರು,ಪಕ್ಷೇತರರು ಆಯ್ಕೆಯಾಗಿ ವಾತಾವರಣ ಬದಲಾಗಿದೆ. ಈ ಕ್ಷೇತ್ರದ ಜಿ.ಪಂ. ಸದಸ್ಯರಾಗಿ ಈಗ ರಾಜ್ಯ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾಗಿರುವ ವಿ.ಎನ್. ನಾಯ್ಕ ಶಿಷ್ಯರಲ್ಲಿ ಈ ರಾಮಕೃಷ್ಣ ನಾಯ್ಕ ಪ್ರಮುಖರು.

ಕಾಂಗ್ರೆಸ್ ನ ಬಣ ರಾಜಕಾರಣದಲ್ಲಿ ಈ ಬಾರಿ ಹೊಡೆತತಿಂದಿರುವ ಕ್ಷೇತ್ರಗಳಲ್ಲಿ ದೊಡ್ಮನೆ ಜಿ.ಪಂ.ಕ್ಷೇತ್ರ ಪ್ರಮುಖ. ಈ ಕ್ಷೇತ್ರದಲ್ಲಿ ವಿ.ಎನ್.ನಾಯ್ಕ ನೇತೃತ್ವದ ತಾಲೂಕಾ ಕಾಂಗ್ರೆಸ್ ಬಣಕ್ಕೆ ಎದುರಾಗಿ ಬಿ.ಜೆ.ಪಿ. ಹಾಗೂ ಬಿ.ಜೆ.ಪಿ. ಬೆಂಬಲಿತ ಕಾಂಗ್ರೆಸ್ ಬಂಡಾಯ ಬಣದ ಬೆಂಬಲಿಗರು ಕೆಲಸಮಾಡಿ ಕಾಂಗ್ರೆಸ್ ಬೆಂಬಲಿಗರ ಪ್ರಮಾಣ ತಗ್ಗಿಸುವ ಪ್ರಯತ್ನ ನಡೆದಿತ್ತು. ಈ ಪ್ರಯತ್ನದ ಭಾಗವಾಗಿ ವಿ.ಎನ್.ನಾಯ್ಕ ಬೆಂಬಲಿಗರನ್ನು ಸೋಲಿಸುವ ಆಟದ ಹಿನ್ನೆಲೆಯಲ್ಲಿ ದೊಡ್ಮನೆ ಜಿ.ಪಂ. ಕ್ಷೇತ್ರ ಕಳೆದುಕೊಂಡಿದ್ದೇ ಹೆಚ್ಚು. ಈ ವಾತಾವರಣದಲ್ಲಿ ಸರಳತೆ, ಜನಪರತೆಗಳಿಂದ ಆಯ್ಕೆಯಾದ ಕಾಂಗ್ರೆಸ್ ಎ ಬಣದ ಪ್ರಮುಖ ನಾಯಕರಲ್ಲಿ ರಾಮಕೃಷ್ಣ ನಾಯ್ಕ ಒಬ್ಬರು.

ರಾಮಕೃಷ್ಣ ನಾಯ್ಕ ಕಳೆದ ಎರಡು ದಶಕಗಳಿಂದ ನಿಷ್ಠಾವಂತ ಕಾಂಗ್ರೆಸ್ಸಿಗರಾಗಿ ಕೆಲಸಮಾಡುತ್ತಾ, ಜನಪ್ರತಿನಿಧಿತ್ವವನ್ನೂ ನಿಭಾಯಿಸುತ್ತಾ ತಾಲೂಕಾ ಕಾಂಗ್ರೆಸ್ ನ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತಿದ್ದಾರೆ. ಈ ಭಾಗದ ಮುಖಂಡರು ತಾ.ಪಂ.ಸದಸ್ಯರು ಸೇರಿದ ಪ್ರಮುಖ ನಾಯಕರ ಸಹಾಯ,ಸಹಕಾರದಿಂದ ನಿರಂತರ ಜನಪ್ರತಿನಿಧಿಯಾಗುತ್ತಾ ತಮ್ಮ ಕ್ಷೇತ್ರ ಪಂಚಾಯತ್ ಮಟ್ಟದಲ್ಲಿ ಜನಪ್ರೀಯರಾಗಿದ್ದಾರೆ. ಜನಮಾನಸಕ್ಕೆ ಸ್ಫಂದಿಸುವ ಇವರ ನಾಯಕತ್ವ ಕ್ಯಾದಗಿ ಗ್ರಾಮ ಪಂಚಾಯತ್ ಗೆ ದೊರೆತರೆ ಒಳ್ಳೆದೆನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *