ಸತತ ಮೂರು ಬಾರಿ ವಿಜಯದ ಮಾಲೆ ಧರಿಸಿದ ರಾಮಕೃಷ್ಣ ನಾಯ್ಕ

ರಾಮಕೃಷ್ಣ ನಾಯ್ಕ ಕಾಂಗ್ರೆಸ್ ಇಂಟೆಕ್ ಘಟಕದ ತಾಲೂಕಾ ಅಧ್ಯಕ್ಷರು, ಕೃಷಿಕರು.

ಸಿದ್ಧಾಪುರಕ್ಯಾದಗಿ ಪಂಚಾಯತ್ ನ ಕೃಷಿಕರಾಗಿದ್ದ ನಾಯ್ಕ ಕಳೆದ ಮೂರು ಅವಧಿಗಳ ಹಿಂದೆ ಕ್ಯಾದಗಿ ಗುಬ್ಬಗೋಡು ವಾರ್ಡನಿಂದ ಗ್ರಾಮ ಪಂಚಾಯತ್ ಪ್ರವೇಶಿಸುತ್ತಾರೆ. ನಂತರ ಇದೇ ಕ್ಷೇತ್ರದಿಂದ ಇವರ ಪತ್ನಿ ಗ್ರಾ.ಪಂ. ಸದಸ್ಯರಾಗುತ್ತಾರೆ.ನಂತರ ಈ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಇದೇ ವಾರ್ಡ್ ನಿಂದ ರಾಮಕೃಷ್ಣ ನಾಯ್ಕ ಶಿರೂರು ಆಯ್ಕೆಯಾಗುತ್ತಾರೆ. ಸಿದ್ಧಾಪುರ ದೊಡ್ಮನೆ ಜಿ.ಪಂ. ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂದೇ ಪ್ರಸಿದ್ಧ ಆದರೆ ಈ ಬಾರಿ ಈ ಕ್ಷೇತ್ರದಲ್ಲಿ ಬಿ.ಜೆ.ಪಿ. ಬೆಂಬಲಿಗರು,ಪಕ್ಷೇತರರು ಆಯ್ಕೆಯಾಗಿ ವಾತಾವರಣ ಬದಲಾಗಿದೆ. ಈ ಕ್ಷೇತ್ರದ ಜಿ.ಪಂ. ಸದಸ್ಯರಾಗಿ ಈಗ ರಾಜ್ಯ ಕಾಂಗ್ರೆಸ್ನ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾಗಿರುವ ವಿ.ಎನ್. ನಾಯ್ಕ ಶಿಷ್ಯರಲ್ಲಿ ಈ ರಾಮಕೃಷ್ಣ ನಾಯ್ಕ ಪ್ರಮುಖರು.

ಕಾಂಗ್ರೆಸ್ ನ ಬಣ ರಾಜಕಾರಣದಲ್ಲಿ ಈ ಬಾರಿ ಹೊಡೆತತಿಂದಿರುವ ಕ್ಷೇತ್ರಗಳಲ್ಲಿ ದೊಡ್ಮನೆ ಜಿ.ಪಂ.ಕ್ಷೇತ್ರ ಪ್ರಮುಖ. ಈ ಕ್ಷೇತ್ರದಲ್ಲಿ ವಿ.ಎನ್.ನಾಯ್ಕ ನೇತೃತ್ವದ ತಾಲೂಕಾ ಕಾಂಗ್ರೆಸ್ ಬಣಕ್ಕೆ ಎದುರಾಗಿ ಬಿ.ಜೆ.ಪಿ. ಹಾಗೂ ಬಿ.ಜೆ.ಪಿ. ಬೆಂಬಲಿತ ಕಾಂಗ್ರೆಸ್ ಬಂಡಾಯ ಬಣದ ಬೆಂಬಲಿಗರು ಕೆಲಸಮಾಡಿ ಕಾಂಗ್ರೆಸ್ ಬೆಂಬಲಿಗರ ಪ್ರಮಾಣ ತಗ್ಗಿಸುವ ಪ್ರಯತ್ನ ನಡೆದಿತ್ತು. ಈ ಪ್ರಯತ್ನದ ಭಾಗವಾಗಿ ವಿ.ಎನ್.ನಾಯ್ಕ ಬೆಂಬಲಿಗರನ್ನು ಸೋಲಿಸುವ ಆಟದ ಹಿನ್ನೆಲೆಯಲ್ಲಿ ದೊಡ್ಮನೆ ಜಿ.ಪಂ. ಕ್ಷೇತ್ರ ಕಳೆದುಕೊಂಡಿದ್ದೇ ಹೆಚ್ಚು. ಈ ವಾತಾವರಣದಲ್ಲಿ ಸರಳತೆ, ಜನಪರತೆಗಳಿಂದ ಆಯ್ಕೆಯಾದ ಕಾಂಗ್ರೆಸ್ ಎ ಬಣದ ಪ್ರಮುಖ ನಾಯಕರಲ್ಲಿ ರಾಮಕೃಷ್ಣ ನಾಯ್ಕ ಒಬ್ಬರು.

ರಾಮಕೃಷ್ಣ ನಾಯ್ಕ ಕಳೆದ ಎರಡು ದಶಕಗಳಿಂದ ನಿಷ್ಠಾವಂತ ಕಾಂಗ್ರೆಸ್ಸಿಗರಾಗಿ ಕೆಲಸಮಾಡುತ್ತಾ, ಜನಪ್ರತಿನಿಧಿತ್ವವನ್ನೂ ನಿಭಾಯಿಸುತ್ತಾ ತಾಲೂಕಾ ಕಾಂಗ್ರೆಸ್ ನ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತಿದ್ದಾರೆ. ಈ ಭಾಗದ ಮುಖಂಡರು ತಾ.ಪಂ.ಸದಸ್ಯರು ಸೇರಿದ ಪ್ರಮುಖ ನಾಯಕರ ಸಹಾಯ,ಸಹಕಾರದಿಂದ ನಿರಂತರ ಜನಪ್ರತಿನಿಧಿಯಾಗುತ್ತಾ ತಮ್ಮ ಕ್ಷೇತ್ರ ಪಂಚಾಯತ್ ಮಟ್ಟದಲ್ಲಿ ಜನಪ್ರೀಯರಾಗಿದ್ದಾರೆ. ಜನಮಾನಸಕ್ಕೆ ಸ್ಫಂದಿಸುವ ಇವರ ನಾಯಕತ್ವ ಕ್ಯಾದಗಿ ಗ್ರಾಮ ಪಂಚಾಯತ್ ಗೆ ದೊರೆತರೆ ಒಳ್ಳೆದೆನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *