ರಾಜ್ಯ ರೈತರ ಪ್ರತಿಭಟನೆಯನ್ನೇಕೆ ಭೈರಪ್ಪ ನೋಡುತ್ತಿಲ್ಲ

ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಮಂಗಳವಾರ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

Newly elected Gram Panchayat members were felicitated in Mysuru on Tuesday. Writer Devanuru Mahadev and farmer leader Badagalapura Nagendra look on

ಮೈಸೂರು: ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಮಂಗಳವಾರ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

ಮೈಸೂರು ಹುಣಸಲೂರು ರಸ್ತೆಯಲ್ಲಿರುವ ಕೃಷಿ ಅಧ್ಯಯನ ಸಂಸ್ಥೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನಯು ಮಂಗಳವಾರ ಆಯೋಜಿಸಿದ್ದ ಸ್ವರಾಜ್ ಇಂಡಿಯಾ, ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿ ಬೆಂಬಲಿತ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳಿಗೆ ಅಭಿನಂದನೆ ಹಾಗೂ ಗ್ರಾಮ ಅಭಿವೃದ್ಧಿಯಲ್ಲಿ ಸದಸ್ಯರ ಪಾತ್ರ ಕುರಿತು ವಿಚಾರ ಮಂಡನೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಈ ವೇಳೆ ಭೈರಪ್ಪ ವಿರುದ್ಧ ಕಿಡಿಕಾರಿದ ಅವರು, ದೆಹಲಿ ರೈತರ ಹೋರಾಟದಲ್ಲಿ ಪಂಜಾಬ್ ನವರು ಮಾತ್ರ ಭಾಗಿಯಾಗುತ್ತಿರುವುದಾಗಿ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಹೇಳಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್ ಮಾತ್ರವಲ್ಲದೆ, ಉತ್ತರಾಖಂಡ, ಹರಿಯಾಣ ಸೇರಿದಂತೆ ಹಲವು ರಾಜ್ಯದ ಜನರು ಭಾಗಿಯಾಗಿದ್ದಾರೆ. ಎಲ್ಲಾ ರಾಜ್ಯಗಳಲ್ಲೂ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಈ ಬಗ್ಗೆ ಅವರಿಗೇಕೆ ತಿಳಿದಿಲ್ಲ? ಅವರಿಗೆ ಕಿವಿ ಕೇಳುತ್ತಿಲ್ಲವೇ? ಕಣ್ಣು ಕಾಣುತ್ತಿಲ್ಲವೇ? ಸಂವೇದನೆ ಇಲ್ಲವೇ? ಇದನ್ನೆಲಲಾ ಮಾಧ್ಯಮದವರು ಅವರಿಗೆ ತಿಳಿಸಬೇಕು ಎಂದು ಹೇಳಿದರು. 

ರಾಜ್ಯದಲ್ಲಿ ರೈತರ ಪ್ರತಿಭಟನೆ ಪರಿಣಾಮಕಾರಿಯಾಗದೇ ಇರಬಹುದು. ಆದರೆ, ರೈತರೊಂದಿಗೆ ಕಾರ್ಮಿಕರು, ದಲಿತರು ಹಾಗೂ ಮಹಿಳೆಯರು ಕೈಜೋಡಿಸಿ ಪ್ರತಿಭಟನೆ ನಡೆಸುತ್ತಿರುವುದು ಹೆಚ್ಚಿನ ಮೌಲ್ಯವನ್ನು ನೀಡಿದೆ. ಈ ಪ್ರತಿಭಟನೆಯ ಸುಳ್ಳು, ದ್ವೇಶ ಹಾಗೂ ಅಸಹಿಷ್ಣುತೆಯ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ. 

ಆಪರೇಷನ್ ಕಮಲದ ಮೂಲಕ ಬಿಜೆಪಿಯವರು ನೈತಿಕ ರಾಜಕಾರಣವನ್ನು ಅನೈತಿಕ ಮಾಡಿದ್ದಾರೆ. ರಾಜಕಾರಣದ ನೈತಿಕತೆಗೆ ವಿಷ ಹಾಕಿದ್ದಾರೆಂದ ಕಿಡಿಕಾರಿದ್ದಾರೆ. 

ಸ್ವರಾಜ್ ಇಂಡಿಯಾ, ದಲಿತ ಸಂಘರ್ಷ ಸಮಿತಿ, ರೈತ ಸಂಘದ ಬೆಂಬಲ ಹೊಂದಿದ್ದ ನೂರಕ್ಕೂ ಹೆಚ್ಚು ಅಭ್ಯರ್ಥಿಗಳು ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣಯಲ್ಲಿ ಗೆದ್ದಿರುವುದು ನಮಗೇ ಅನಿರೀಕ್ಷಿತ. ಇದು ಬದಲಾವಣೆಯ ಕಡಗೆ ನಮ್ಮ ಮೊದಲ ಹೆಜ್ಜೆಯಾಗಿದೆ. ಇದು ಸ್ವರಾಜ್ ಇಂಡಿಯಾ ಪಕ್ಷದ ಸಮತಾವಾದ, ಮೌಲ್ಯಗಳು, ಸಮಾಜಮುಖಿ ಆಶಗಳಿಗೆ ಸಂದ ಜಯ ಎಂದಿದ್ದಾರೆ. 

ಈಗ ನೀವು ಸಾಧಿಸಿರುವ ಗೆಲುವು ಬಹಿರಂಗದ ಗೆಲುವು. ಇದರಿಂದ ನೀವು ಜವಾಬ್ದಾರಿಯ ನೊಗ ಹೊತ್ತಂತಾಗಿದೆ. ಮುಂದೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಮಾಡಿ. ಇನ್ನು ಬೇರೆ ಪಕ್ಷಗಳು ನೀಡುವ ಆಮಿಷದ ಎದುರು  ನೀವು ಗೆಲ್ಲಬೇಕ. ಅದು ನಿಜವಾದ ಗೆಲುವು. ನಿಷ್ಟೆಯಿಂದ ಒಳ್ಳೆಯ ಕೆಲಸ ಮಾಡಬೇಕು. ಗೆದ್ದವರು ಸೋತವರೊಂದಿಗೆ ವಿಶ್ವಾಸದಿಂದ ಇರಬೇಕೆಂದು ಕಿವಿಮಾತು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *