old is gold-ಅಗ್ನಿ ಶ್ರೀಧರ್ ಮತ್ತು ಸುಮನಾ ಕಿತ್ತೂರು ಅವರ ‘ಕಳ್ಳರ ಸಂತೆ’

ಅಗ್ನಿ ಶ್ರೀಧರ್ ಮತ್ತು ಸುಮನಾ ಕಿತ್ತೂರು ಅವರ ‘ಕಳ್ಳರ ಸಂತೆ’ ಪ್ರಸ್ತುತ ನಮ್ಮ ಸಮಾಜದ ಲಂಚ ಸಾಮ್ರಾಜ್ಯಕ್ಕೆ ಹಿಡಿದ ಕೈಕನ್ನಡಿ..!’ಒಬ್ಬ ದುಡ್ಡಿಗೆ ನಂದಿ ಬೆಟ್ಟವನ್ನೇ ಮೂರು ತಿಂಗಳು ಬಿಟ್ಟುಕೊಡ್ತಾನೆ. ಇನ್ನೊಬ್ಬ ‘ಲಂಚಾವತಾರ’ದ ತಾಳಕ್ಕೆ ಕುಣಿದು, ವಿಧಾನ ಸೌಧವನ್ನೇ ಕೊಡ್ತೀನಿ ಅಂತಾನೆ. ಮತ್ತೊಬ್ಬ ಎರಡು ಲಕ್ಷ ರೂಪಾಯಿ ಕೊಟ್ರೆ ಮಾತ್ರ ಲೆಕ್ಚರರ್ ಪೋಸ್ಟ್ ಅಂತಾನೆ…’ಅಲ್ಲಿಗೆ ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು…!’ ಇಲ್ಲಿ ಇದೆಲ್ಲವೂ ಹೂರಣವಿದೆ.

ನಮ್ಮ ಚೆಲುವ ಕನ್ನಡ ನಾಡು ಬ್ರಷ್ಟರ ಕೈಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಎಲ್ಲವೂ, ಎಲ್ಲದಕ್ಕೂ ಲಂಚ ತಾಂಡವ ನೃತ್ಯ..!ಪೊಲೀಸರ ದಬ್ಬಾಳಿಕೆ, ರಾಜಕಾರಣಿಗಳ ದೊಂಬರಾಟ, ಭ್ರಷ್ಟ ಅಧಿಕಾರಿಗಳ ಬದುಕು, ಕಷ್ಟ ಪಡುವವರ ಬಯಲಾಟ..! ಹೀಗೆ ಇಡೀ ಕಥೆ ನಮ್ಮನ್ನು ವಿಧ – ವಿಧಾನ – ರೀತಿಯಲ್ಲಿ ಮನರಂಜನೆಗಷ್ಟೇ ಅಲ್ಲ. ನಮ್ಮ ಸಾಮಾಜಿಕ ವಾಸ್ತವ ಬದುಕಿನ ಹೂರಣವೂ ಇದೆ. ನಮ್ಮ ಸಮಾಜದ ಮಧ್ಯೆ ಎಲ್ಲೋ ಒಂದು ಕಡೆ ವಿಡಂಬನೆಯಲ್ಲಿ ವಿಲೀನವಾದ ಅನುಭವ. ಇಡೀ ಪ್ರಪಂಚವನ್ನೇ ಸುತ್ತಿ ಬಂದ ಧಾವಂತ. ಮೋಸ, ವಂಚನೆಗಳು ಅನಾಯಾಸವಾಗಿ ಅನಾವರಣಗೊಳ್ಳುತ್ತವೆ. ಮತ್ತೊಮ್ಮೆ ಮಾಸ್ಟರ್ ಹಿರಣ್ಣಯ್ಯ ನೆನಪಾಗುತ್ತಾರೆ. ಚಿತ್ರಕಥೆ ಇಲ್ಲಿಂದ ಆರಂಭಗೊಂಡು, ಎಲ್ಲ ತತ್ತ್ವದೆಲ್ಲೆ ಮೀರಿ ಮತ್ತೆಲ್ಲೋ ಅಂತ್ಯವಾಗುತ್ತದೆ. ಬಡ, ಜಾಣ ಹುಡುಗನೊಬ್ಬನ ಕರುಣಾಜನಕ ಕಥೆಗೆ ಮುನ್ನುಡಿವೂ ಆಗುತ್ತದೆ. ‘ಲಂಚ ಸಾಮ್ರಾಜ್ಯ’ಕ್ಕೆ ಕನ್ನಡಿ ಹಿಡಿಯುತ್ತದೆ..!

ಚಿತ್ರದ ಪ್ರಧಾನ ಬಿಂದು ಯಶ್. ಕಥೆ ಎಂಬ ಗಾಳಿ ಪಟದ ಸೂತ್ರಧಾರಿಯೇ ಆತ. ‘ಅವನಿಂದಲೇ… ಅವನಿಂದಲೇ… ಕಥೆಯೊಂದು ಶುರುವಾಗಿದೆ…’ ಅವನ ಪಾತ್ರ ಎಳೆ ಎಳೆಯಾಗಿ ಬಿಚ್ಚಿಕೊಳ್ಳುತ್ತಾ ಹೋದಂತೆ ಪ್ರೇಕ್ಷಕ ಆ ಪಾತ್ರದ ಪರಕಾಯ ಪ್ರವೇಶ ಮಾಡುತ್ತಾನೆ. ಇದು ಖಂಡಿತ ಉತ್ಪ್ರೇಕ್ಷೆಯಂತಲೂ ಅಲ್ಲ..! ಸಮಾಜದ ಆಗುಹೋಗುಗಳ ಬಗ್ಗೆ ಅಲ್ಲಲ್ಲಿ ಚರ್ಚೆ, ಮಧ್ಯದಲ್ಲಿ ಒಂದಷ್ಟು ಪ್ರೇಮ ಪರ್ವ. ಹಂತ ಹಂತವಾಗಿ ಆಂಗಲ್ ಬದಲಿಸುತ್ತಾ ಹೋಗುವ ಚಿತ್ರಕಥೆ. ಪಂಚ್ ಕೊಡುವ ಡೈಲಾಗ್ ಗಳು. ಅಲ್ಲೇ ಒಂದಷ್ಟು ವ್ಯಂಗ್ಯ..! ಹೀಗೆಯೇ ಇಡೀ ಸಿನಿಮಾ ಒಂದು ದೂರ ತೀರ ಯಾನ. ಒಬ್ಬ ಮಹಿಳೆಯಾಗಿ ಇಂಥದ್ದೊಂದು ಕಥೆಯನ್ನು ನಿಭಾಯಿಸಿ, ಯಶ ಗಳಿಸುವುದು ಸುಲಭದ ಮಾತಲ್ಲ. ದ್ವಿತಿಯಾರ್ಧದಲ್ಲಿ ಬರುವ ಕ್ಯಾಬಿನೆಟ್ ಮೀಟಿಂಗ್‌ನ ದೃಶ್ಯಗಳಂತೂ ಚಿಂದಿ ಉಡಾಯಿಸು ತ್ತವೆ. ದುಂಡು ಮೇಜಿನ ಸಭೆಯಲ್ಲಿ ಹತ್ತಾರು ರಾಜಕಾರಣಿಗಳು ಕುಳಿತು ವಟವಟ ಎನ್ನುವ ದೃಶ್ಯವೊಂದೇ ಸಾಕು, ಈ ರಾಜಕಾರಣಿಗಳ ಬಯಲಾಟ ಅರಿಯಲು. ಸುಮನಾ ಕಿತ್ತೂರು ಸಾಮರ್ಥ್ಯವನ್ನು ಬಯಲಿಗೆಳೆಯಲು… ಯಶ್ ಅಭಿನಯ ಕೊನೆ ಕೊನೆಗೆ ಅಚ್ಚರಿ ಮೂಡಿಸುತ್ತದೆ. ಶ್ರೀಧರ್ ಸಂಭಾಷಣೆಯನ್ನು ಅರಗಿಸಿಕೊಂಡು, ಮುಲಾಜಿಲ್ಲದೇ ಹೇಳುವುದು ಕಷ್ಟಸಾಧ್ಯ. ಅದರಲ್ಲಿನ ಒಳಾರ್ಥ ಅರಿತಾಗ ಮಾತ್ರ ಹಾಗೆ ನಟಿಸಲು ಸಾಧ್ಯ. ಯಶ್ ಅಲ್ಲಿ ಯಶ ಕಂಡಿದ್ದಾರೆ.

ನಟನೆ, ನೃತ್ಯ, ಹೊಡೆದಾಟ, ಮಾತುಗಾರಿಕೆ ಎಲ್ಲದಕ್ಕೂ ಯಶ್ ಈಸ್ ಎಸ್. ಹಸಿರಿನ ಎಲೆಗಳ ಮಧ್ಯೆ ಅರಳಿದ ಕೆಂದಾವರೆ ಹರಿಪ್ರಿಯಾ. ನಟನೆಯಲ್ಲಿ ಕೊಂಚ ಚೇತರಿಕೆ ಕಂಡರೆ ಹರಿ ಕನ್ನಡದಲ್ಲಿ ನಾಯಕಿಯಾಗಿ ಇನ್ನಷ್ಟು ವರ್ಷ ನಿಲ್ಲುತ್ತಾರೆ ಎನ್ನುವುದನ್ನು ‘ಕಳ್ಳರ ಸಂತೆ’ ನಿರೂಪಿಸಿದೆ. ಸುಂದರನಾಥ ಸುವರ್ಣ ವರ್ಣಮಯ ದೃಶ್ಯಗಳನ್ನು ಹೆಣೆದಿದ್ದಾರೆ. ಕೆಲವು ಕಡೆ ಸೆರೆ ಹಿಡಿದಿರುವ ಸನ್ನಿವೇಶಗಳು, ಮಂದಬೆಳಕಿನಲ್ಲಿ ಮೂಡಿಸಿದ ಚಿತ್ರಾವಳಿಗಳು ಇಷ್ಟವಾಗುತ್ತವೆ. ವಿ.ಮನೋಹರ್ ಯಾವ ಕೆಟಗರಿಯ ಚಿತ್ರಗಳಾದರೂ ಅದರಲ್ಲಿ ಹೊಸತನ ತೋರುತ್ತಾರೆ ಎನ್ನುವುದು ‘ಕಳ್ಳರ ಸಂತೆ’ಯಲ್ಲಿ ಸಾಬೀತಾಗಿದೆ. ಮೂರು ಹಾಡುಗಳು ಮುದ ನೀಡುತ್ತವೆ. ನಿಜಕ್ಕೂ ಎಲ್ಲ ಹಾಡುಗಳು ಸಾಹಿತ್ಯದ ಧೋತಕವಾಗಿವೆ. ‘ಕಳೆದು ಹೋದ ಖಾಲಿ ಪುಟವ ಮರಳಿ ತಂದು ಕಾವ್ಯ ಬರೆದೆ…’ಹಾಡು ಮತ್ತೆ ಮತ್ತೆ ಕಿವಿ ತುಂಬುತ್ತದೆ.

ರೀರೆಕಾರ್ಡಿಂಗ್‌ನಲ್ಲಿನ ವಿಶೇಷತೆ ಎಂದರೆ ನಟರ ಒಂದೊದು ಹಾವಭಾವಕ್ಕೂ ಒಂದೊಂದು ಥರದ ಸಂಗೀತ ಸಾಧನ ಬಳಸಿ ಮ್ಯೂಸಿಕ್ ಕೊಟ್ಟಿರುವುದು. ರಂಗಾಯಣ ರಘು ಸಿಎಮ್ ಪಾತ್ರದಲ್ಲಿ ಮಿಂಚಿಂಗೋ ಮಿಂಚಿಂಗು. ಜೈ ಜಗದೀಶ್, ಶೋಭರಾಜ್, ಕಿಶೋರ್, ಅಚ್ಯುತ, ದತ್ತಣ್ಣ, ಜಿ.ಕೆ.ಗೋವಿಂದರಾಜ್…ಈ ರೀತಿ ತಾರೆಗಳ ತಾಂಡವವೇ ಇದೆ. ಸಂಕಲನದಲ್ಲಿ ಕೊಂಚ ಸುಧಾರಣೆ ಬೇಕಿತ್ತಾದರೂ ಅಷ್ಟೇನೂ ಸಂಕಲನ ಕೆಟ್ಟದಾಗಿಲ್ಲ. ಆಯಾ ಸನ್ನಿವೇಶಕ್ಕೆ ತಕ್ಕಂತೆ ಗಾಂಧೀಜಿ ಹಾಗೂ ಚಾಣಕ್ಯನ ಹೆಸರನ್ನು ಸಂಭಾಷಣೆಯಲ್ಲಿ ಬಳಸಿರುವುದು ಸಮಂಜಸವಾಗಿದೆ. ಅಗ್ನಿ ಶ್ರೀಧರ್ ಅವರು ಇಲ್ಲಿ ಯಾರೊಬ್ಬರನ್ನೂ ಬಿಟ್ಟಿಲ್ಲ… ಸಾಹಿತಿಗಳು, ರಾಜಕಾರಣಿಗಳು(ಅವರ ಗರ್ಲ್ ಫ್ರೆಂಡ್‌ಗಳು) ಪುಡಿ, ಹಿಡಿ ರೌಡಿಗಳು, ಪ್ರೇಮಿಗಳು, ಸ್ವಾರ್ಥಿಗಳು, ಮೋಸಗಾರರು, ವಿಶ್ವ ಭೂಪಟದ ನಾನಾ ಬಗೆಯ ವಿಷಯ ಲಂಪಟರು… ಎಲ್ಲರನ್ನೂ ನೆನಪಿಸುತ್ತಾರೆ. ಒಟ್ಟಾರೆ ಒಂದು ಅಪ್ಪಟ ಸ್ವಮೇಕ್ ಹಾಗೂ ಸವಾಲಿನ ಚಿತ್ರವನ್ನು ತೋರಿಸುತ್ತಾರೆ. ಅಗ್ನಿ ಶ್ರೀಧರ್ ಮತ್ತು ಸುಮನಾ ಕಿತ್ತೂರು ನಮ್ಮ ಮನಸನ್ನು ಕದಡುವಂತೆ ಮಾಡುತ್ತಾರೆ ಅಲ್ಲದೇ ಅದರಲ್ಲಿ ಗೆಲ್ಲುತ್ತಾರೆ ಕೂಡ..! ಅಂತ ಹೇಳಿ ನನ್ನ ಮಾತು ಮುಗಿಸುತ್ತೇನೆ…

# -ಕೆ.ಶಿವು.ಲಕ್ಕಣ್ಣವರ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *