ಮುಗಿದ ಸಂಪುಟ ವಿಸ್ತರಣೆ ಕಸರತ್ತು: ಸಚಿವ ಸ್ಥಾನ ಸಿಗದ ಬಿಜೆಪಿ ನಾಯಕರ ಒಳಗೊಳಗೆ ಕುದಿಯುತ್ತಿದೆ ಅಸಮಾಧಾನ

ಸುದೀರ್ಘ ಕಾಯುವಿಕೆ ಬಳಿಕ ಕೊನೆಗೂ ನಿನ್ನೆ ಮಕರ ಸಂಕ್ರಾಂತಿ ಮುನ್ನಾದಿನ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ.

Supporters of MTB Nagaraj celebrate his induction into the cabinet

ಬೆಂಗಳೂರು/ಬೆಳಗಾವಿ: ಸುದೀರ್ಘ ಕಾಯುವಿಕೆ ಬಳಿಕ ಕೊನೆಗೂ ನಿನ್ನೆ ಮಕರ ಸಂಕ್ರಾಂತಿ ಮುನ್ನಾದಿನ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ.

ಈ ಸಮಯದಲ್ಲಿ ಅಸಮಾಧಾನಗೊಂಡ ಸಚಿವಾಕಾಂಕ್ಷಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಲವರು, ಅಂತವರು ಸಾರ್ವಜನಿಕವಾಗಿಯೇ ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಟೀಕೆ ಮಾಡಿದ್ದು ಕಂಡುಬಂತು.

ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಎಂ ಪಿ ರೇಣುಕಾಚಾರ್ಯ ತಮ್ಮ ಅಸಮಾಧಾನಗಳನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುವಲ್ಲಿ ಜನಪ್ರಿಯರು. ಸಾರ್ವಜನಿಕವಾಗಿ ಟೀಕೆ ಟಿಪ್ಪಣಿ ಮಾಡುವಲ್ಲಿ ಇಷ್ಟು ದಿನ ಸುಮ್ಮನಿದ್ದ ಸುನಿಲ್ ಕುಮಾರ್, ಎಸ್ ಎ ರಾಮದಾಸ್ ರಂಥವರೂ ಕೂಡ ನಿನ್ನೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಮಾಜಿ ಕೇಂದ್ರ ಮಂತ್ರಿ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ , ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ರಾಮದಾಸ್, ಸುನಿಲ್ ಕುಮಾರ್, ಎಂ ಪಿ ರೇಣುಕಾಚಾರ್ಯ ಅವರು ಈ ಬಾರಿ ಸಚಿವರನ್ನಾಗಿ ಆಯ್ಕೆ ಮಾಡಿದ ರೀತಿ ಅನ್ಯಾಯವಾಗಿದ್ದು ಪಕ್ಷಕ್ಕೆ ನಿಷ್ಠರಾದವರನ್ನು ಕಡೆಗಣಿಸಲಾಗಿದೆ ಎಂದು ಹೇಳಿದ್ದಾರೆ.

ಕಳೆದ ವಾರ ಬಿ ಎಸ್ ಯಡಿಯೂರಪ್ಪನವರು ದೆಹಲಿಗೆ 9 ಶಾಸಕರು, ವಿಧಾನ ಪರಿಷತ್ ಸದಸ್ಯರ ಹೆಸರನ್ನು ತೆಗೆದುಕೊಂಡು ಹೈಕಮಾಂಡ್ ಬಳಿಗೆ ಹೋಗಿದ್ದರು. ಪಕ್ಷ 4 ಹೆಸರುಗಳನ್ನು ಸೂಚಿಸಿತ್ತು. ಅದು, ಎಸ್ ಅಂಗಾರ, ಸುನಿಲ್ ಕುಮಾರ್, ಹಾಲಪ್ಪ ಆಚಾರ್ ಮತ್ತು ಅಪ್ಪಚ್ಚು ರಂಜನ್, ಯಡಿಯೂರಪ್ಪನವರು ಸಂಪುಟಕ್ಕೆ ಸೇರಿಸುವುದಾಗಿ ನಾಲ್ವರಿಗೆ ಆಶ್ವಾಸನೆ ನೀಡಿ ಕೊಟ್ಟಿದ್ದು ಮಾತ್ರ ಒಬ್ಬರಿಗೆ. ಇದು ನಿಷ್ಠಾವಂತ ಕಾರ್ಯಕರ್ತರಿಗೆ ಮಾಡಿದ ಅವಮಾನ ಎಂದು ಹಿರಿಯ ಕಾರ್ಯಕಾರಿಯೊಬ್ಬರು ಹೇಳುತ್ತಾರೆ. ಅವರು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ತಂಡದಲ್ಲಿದ್ದಾರೆ.

ಯತ್ನಾಲ್ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಮಂತ್ರಿಗಳನ್ನು ಅನ್ಯಾಯದ ಮೂಲಕ ಸಂಪುಟಕ್ಕೆ ಸೇರಿಸಿಕೊಂಡು ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಕರೆದರೆ, ಧಾರವಾಡ ಶಾಸಕ ಅರವಿಂದ್ ಬೆಲ್ಲದ ಅವರು ಏಳು ಮಂತ್ರಿಗಳನ್ನು ಸೇರ್ಪಡೆಗೊಳಿಸುವುದು ಸ್ವೀಕಾರಾರ್ಹ ಕ್ರಮವಲ್ಲ ಎಂದು ಹೇಳಿದರು.

“ಪಕ್ಷಕ್ಕೆ ನಿಷ್ಠೆ, ಅಭಿವೃದ್ಧಿ ಮತ್ತು ಹಿಂದುತ್ವ ನನ್ನ ಕಾರ್ಯಸೂಚಿಗಳು. ನನಗೆ ಬೇರೆ ದಾರಿ ಗೊತ್ತಿಲ್ಲ. ಜಾತಿ ರಾಜಕಾರಣದ ವೈಭವೀಕರಣವನ್ನು ನಾನು ಕಲಿತಿಲ್ಲ. ನಾನು ಪೋಸ್ಟ್‌ಗಳಿಗಾಗಿ ಬ್ಲ್ಯಾಕ್‌ಮೇಲ್ ಮಾಡಿಲ್ಲ ಮತ್ತು ಎಂದಿಗೂ ಮಾಡುವುದಿಲ್ಲ. ಎಂದು ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *